15
July, 2025

A News 365Times Venture

15
Tuesday
July, 2025

A News 365Times Venture

ಹೊಸದಾಗಿ ನಡೆಯುವ ಜಾತಿಗಣತಿಗೆ ಎಲ್ಲರೂ ಸಹಕಾರ ನೀಡಿ- ಡಿಸಿಎಂ ಡಿಕೆ ಶಿವಕುಮಾರ್

Date:

ನವದೆಹಲಿ,ಜೂನ್,10,2025 (www.justkannada.in): ಜಾತಿಗಣತಿಗೆ ಅಪಸ್ವರಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹೊಸದಾಗಿ ಜಾತಿಗಣತಿ  ಸಮೀಕ್ಷೆಗೆ ಹೈಕಮಾಂಡ್ ಸೂಚಿಸಿದೆ. ಹೀಗಾಗಿ ಹೊಸದಾಗಿ ನಡೆಯುವ ಜಾತಿಗಣತಿಗೆ ಎಲ್ಲರೂ ಸಹಕಾರ ನೀಡಿ ಎಂದು  ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.

ಇಂದು ಹೈಕಮಾಂಡ್ ಜೊತೆ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಜೂನ್ 12ರಂದು ಜಾತಿಗಣತಿ ವರದಿ ಬಗ್ಗೆ ತೀರ್ಮಾನ ಮಾಡಲು ನಿಗದಿ ಆಗಿತ್ತು. ಜಾತಿಗಣತಿ ಬಗ್ಗೆ ಚರ್ಚಿಸಲು ವಿಶೇಷ ಸಂಪುಟ ಕರೆಯಲಾಗಿತ್ತು. ಜಾತಿಗಣತಿ ಬಗ್ಗೆ ಅನೇಕ ಮಠಾಧೀಶರು ವರಿಷ್ಠರನ್ನು ಭೇಟಿಯಾಗಿ ಸಂಖ್ಯೆಯ ‌ಬಗ್ಗೆ ಆಕ್ಷೇಪ ಇದೆ ಅಂತಾ ಕೆಲವರು ಹೇಳಿದ್ದರು. ಹೀಗಾಗಿ  ಅಪಸ್ವರ ಬರಬಾರದೆಂಬ ಉದ್ದೇಶದಿಂದ ಮತ್ತೆ ಜಾತಿಗಣತಿಗೆ ಸಲಹೆ ನೀಡಿದ್ದಾರೆ.  ಅದ್ದರಿಂದ ಮತ್ತೆ ಜಾತಿಗಣತಿ ಸಮೀಕ್ಷೆ ಮಾಡಲು ತೀರ್ಮಾನಿಸಿದ್ದೇವೆ. ಹೊಸದಾಗಿ ನಡೆಯುವ ಜಾತಿಗಣತಿಗೆ ಎಲ್ಲರೂ ಸಹಕಾರ ನೀಡಿ ಎಂದರು.

ನಮ್ಮ ಸರ್ಕಾರದ ಬಗ್ಗೆ ಯಾರಿಗೂ ಆತಂಕ ಬೇಡ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮೀಕ್ಷೆ ಮಾಡಲಿದ್ದೇವೆ. ಯಾವಾಗ ಸಮೀಕ್ಷೆ ಎಂದು ಸಂಪುಟ ಸಭೆ ಮಾಡಿ ಸಿಎಂ ತಿಳಿಸುತ್ತಾರೆ. ಆನ್​​ಲೈನ್​ ಮೂಲಕವೂ ಮಾಹಿತಿ ನೀಡಲು ಅವಕಾಶ ನೀಡುತ್ತೇವೆ. ಅಪಸ್ವರ ಕೇಳಿ ಬಂದಿರುವುದಿಂದ ಮತ್ತೆ ಸಮೀಕ್ಷೆಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.vtu

Key words: Everyone,  cooperate, new, caste census, DCM, DK Shivakumar

The post ಹೊಸದಾಗಿ ನಡೆಯುವ ಜಾತಿಗಣತಿಗೆ ಎಲ್ಲರೂ ಸಹಕಾರ ನೀಡಿ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು...

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌

ಮೈಸೂರು, ಜುಲೈ, 14,2025 (www.justkannada.in):  ಕೇಂದ್ರ ಗೃಹ ಸಚಿವ ಅಮಿತ್‌ ಶಾ...