5
March, 2026

A News 365Times Venture

5
Thursday
March, 2026

A News 365Times Venture

ಅಕ್ರಮ ಗಣಿಗಾರಿಕೆ ಕೇಸ್ ನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಪರಾಧಿ : 7 ವರ್ಷ ಜೈಲುಶಿಕ್ಷೆ ಪ್ರಕಟ

Date:

ನವದೆಹಲಿ,ಮೇ,6,2025 (www.justkannada.in): ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಪ್ರಸ್ತುತ ಗಂಗಾವತಿ ಶಾಸಕರಾಗಿರುವ ಜನಾರ್ಧನ ರೆಡ್ಡಿ ಅಪರಾಧಿ  ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಬಿಎಸ್ ಯಡಿಯೂರಪ್ಪ ಆಡಳಿತದಲ್ಲಿ ಈ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ಓಬಳಾಪುರಂ ಮೈನಿಂಗ್ ಕಂಪನಿ ಮುಖ್ಯಸ್ಥರಾಗಿದ್ದರು. ಶ್ರೀನಿವಾಸರೆಡ್ಡಿ ಓಎಂಸಿ ಕಂಪನಿಯ ಎಂಡಿಯಾಗಿದ್ದರು.

ಈ ಕಂಪನಿಗೆ ಗಣಿಗಾರಿ ಮಂಜೂರಾತಿ ನೀಡುವಲ್ಲಿ ಅಕ್ರಮ ನಡೆದಿತ್ತು. ಅರಣ್ಯ ಇಲಾಖೆ ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ಈ ಪ್ರಕರಣ ಸಂಬಂಧ ಇದೀಗ ಮಾಜಿ ಸಚಿವ ಜನಾರ್ಧನರೆಡ್ಡಿ ಅಪರಾಧಿ ಎಂದು ದೆಹಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದು ಇದೀಗ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗಿದ್ದಾರೆ.

ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್‌ ರೆಡ್ಡಿ ಮತ್ತು ಅಲಿ ಖಾನ್‌ಗೆ ಕೋರ್ಟ್‌ ಸೇರಿ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪ್ರಕರಣದಲ್ಲಿ ಅವಿಭಜಿತ ಆಂಧ್ರಪ್ರದೇಶ ಗಣಿ ಸಚಿವೆಯಾಗಿದ್ದ ಸಬಿತಾ ಇಂದ್ರರೆಡ್ಡಿ, ಕೃಷ್ಣ ನಂದಾಗೆ ಕೋರ್ಟ್‌ ಕ್ಲೀನ್‌ ಚಿಟ್‌ ನೀಡಿದೆ.

Key words: Former minister, Janardhana Reddy, convicted , illegal mining case

The post ಅಕ್ರಮ ಗಣಿಗಾರಿಕೆ ಕೇಸ್ ನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಪರಾಧಿ : 7 ವರ್ಷ ಜೈಲುಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...