5
March, 2026

A News 365Times Venture

5
Thursday
March, 2026

A News 365Times Venture

ಅಕ್ರಮ ರೆಸಾರ್ಟ್: ಕಬಿನಿ ಉಳಿವಿಗಾಗಿ ಶುರುವಾಯ್ತು ಹೋರಾಟ

Date:

ಮೈಸೂರು,ಜುಲೈ,24,2025 (www.justkannada.in): ಕಬಿನಿ ಉಳಿಸುವ ಹೋರಾಟದ‌ ಕಿಚ್ಚು ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ತಿದೆ.‌ ಕಬಿನಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಅಕ್ರಮ ರೆಸಾರ್ಟ್ ಗಳ ಕುರಿತ ಆಕ್ರೋಶ ಹೋರಾಟಕ್ಕೆ ನಾಂದಿ ಹಾಡುತ್ತಿದೆ. ಇದಕ್ಕೆ ಪೂರಕವಾಗಿ ಸಾಮಾಜಿಕ ಜಾಲತಾಣದಲ್ಲಿ ಕ್ಯಾಂಪೆನ್ ಗಳು ಆರಂಭವಾಗಿದ್ದು, ಭಿನ್ನ- ವಿಭಿನ್ನ ಪೋಸ್ಟರ್ ಗಳ ಮೂಲಕ ಜಾಗೃತಿ ಶುರುವಾಗಿದೆ.

ಕಬಿನಿ ಹಿನ್ನೀರಿನ‌ ಅಕ್ರಮ ರೆಸಾರ್ಟ್ ಗಳ ಬಗ್ಗೆ ಸುದ್ದಿ ಭಿತ್ತರವಾದ  ಬಳಿಕ ಹೆಚ್.ಡಿ.ಕೋಟೆ ಭಾಗದಲ್ಲಿ ಸಂಚಲನ ಸೃಷ್ಟಿ.ಯಾಗಿದೆ. ಅನಧಿಕೃತವಾಗಿ, ಅಕ್ರಮವಾಗಿ ರೆಸಾರ್ಟ್ ನಿರ್ಮಿಸಿರುವವರ ಎದೆ ನಡುಕ ಉಂಟಾಗಿದೆ.

ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೆಡಿಪಿ ಸಭೆಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾದ ಬಳಿಕ ರೈತ ಮುಖಂಡರು, ಪರಿಸರ ಪ್ರೇಮಿಗಳು ಅಖಾಡಕ್ಕೆ ಧುಮುಕಿದ್ದಾರೆ. ಜಾಲತಾಣಗಳ ಮೂಲಕ ಕ್ಯಾಂಪೇನ್ ಆರಂಭಿಸಿದ್ದಾರೆ.

ಕೇವಲ ಕರ್ನಾಟಕದ‌ ಮೈಸೂರು, ಮಡಿಕೇರಿ‌ಭಾಗ ಮಾತ್ರವಲ್ಲದೇ ಪಕ್ಕದ ಕೇರಳದ ವೈನಾಡಿನ ಯುವಕರು ಕ್ಯಾಂಪೇನ್ ಆರಂಭಿಸಿದ್ದಾರೆ. ರೈತರು, ಹೋರಾಟಗಾರರು, ಪರಿಸರ ಪ್ರೇಮಿಗಳು, ಯುವಕರ ಪಡೆ ರ್ಯಾಲಿ, ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ತಿದೆ. ಪೂರ್ವಭಾವಿಯಾಗಿ ಸೋಶಿಯಲ್ ಮೀಡಿಯಾದಲ್ಲಿ ಕಾಡು ಉಳಿಸಿ ಕರೆ ನೀಡಿದೆ . ಎಐ ಚಿತ್ರಗಳು  , ವಿಡಿಯೋಗಳ ಮೂಲಕ ಭಿನ್ನ- ವಿಭಿನ್ನ ಜಾಗೃತಿ ಮೂಡಿಸುತ್ತಿವೆ

ಈ ನಡುವೆ ಶಾಸಕ ಅನಿಲ್ ಚಿಕ್ಕಮಾದು, , ಅಕ್ರಮ ರೆಸಾರ್ಟ್ ಗಳ ನಿರ್ಮಾಣದಲ್ಲಿ ನನ್ನ ಪಾತ್ರವಿಲ್ಲ. ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ತಾರೆ ಅಂತ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಿದ್ದಾರೆ. ಇದು ಹೋರಾಟಗಾರರ ಹೋರಾಟಕ್ಕೆ ಮತ್ತಷ್ಟು ಕಿಚ್ಚು‌ ಹಚ್ಚಿದೆ

ಒಟ್ಟಾರೆ, ಕಬಿನಿ ಹಿನ್ನೀರಿನ ಅಕ್ರಮ ರೆಸಾರ್ಟ್ ಗಳ ಹೋರಾಟ ಆರಂಭವಾಗಿದ್ದು, ಯಾವಾಗ ಇವುಗಳನ್ನ ಡೆಮಾಲಿಷ್ ಮಾಡ್ತಾರೆ ಅಂತ ಕಬಿನಿ‌ ಹೋರಾಟಗಾರರು ಪ್ರಶ್ನೆ ಮಾಡ್ತಿದ್ದಾರೆ.vtu

Key words: Illegal Resort,  starts, Kabini, survival

The post ಅಕ್ರಮ ರೆಸಾರ್ಟ್: ಕಬಿನಿ ಉಳಿವಿಗಾಗಿ ಶುರುವಾಯ್ತು ಹೋರಾಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...