ನವದೆಹಲಿ,ಮೇ,7,2025 (www.justkannada.in): ಪೆಹಲ್ಗಾಮ್ ಉಗ್ರರ ದಾಳಿಯ ಪ್ರತೀಕಾರಕ್ಕೆ ನಿನ್ನೆ ತಡರಾತ್ರಿ ಭಾರತೀಯ ಸೇನೆ ಉಗ್ರರ 9 ನೆಲೆಗಳ ಮೇಲೆ ದಾಳಿ ಕ್ಷಿಪಣಿ ದಾಳಿ ನಡೆಸಿ ಉಗ್ರರ ನೆಲೆಯನ್ನ ಧ್ವಂಸ ಮಾಡಿದ್ದು, ಈ ಅಪರೇಷನ್ ಸಿಂಧೂರಕ್ಕೆ ಬೆದರಿದ ಪಾಕಿಸ್ತಾನ ಇದೀಗ ಶಾಂತಿ ಮಂತ್ರ ಜಪಿಸಿದಂತಿದೆ.
ಹೌದು ಆಪರೇಷನ್ ಸಿಂಧೂರ್ ಬೆನ್ನಲ್ಲೇ ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಅಸಿಫ್ ಶಾಂತಿ ಪಠಣ ಮಾಡಿದ್ದಾರೆ ಎಂದು ವರದಿಯಾಗಿದೆ.
ಅಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ರಕ್ಷಣಾ ಸಚಿವ ಅಸಿಫ್ ಭಾರತ ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯೆ ನೀಡುತ್ತದೆ . ನಾವು ಭಾರತದ ವಿರುದ್ಧ ಯಾವುದೇ ಕ್ರಮಕೈಗೊಳ್ಳುವಿದಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿದಾಳಿ ಮಾಡುತ್ತೇವೆ. ಇನ್ನು ಒಂದು ವೇಳೆ ಭಾರತ ಹಿಂದೆ ಸರಿದರೆ ನಾವು ಸಹ ಖಂಡಿತವಾಗಿಯೂ ಈ ಉದ್ವಿಗ್ಬತೆಯನ್ನು ಶಮನಗೊಳಿಸುತ್ತೇವೆ. ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧರಿದ್ದೇವೆ ಎಂದಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ದೇಶದಾದ್ಯಂತ ಮಾಕ್ ಡ್ರಿಲ್ (ಅಣಕುಪ್ರದರ್ಶನ ) ನಡೆಯುತ್ತಿದ್ದು ಈ ಪ್ರಯುಕ್ತ ಯುದ್ಧದ ಸೈರನ್ ಮೊಳಗಿತು. ಏನಾದರು ಪಾಕಿಸ್ತಾನ್ ಭಾರತದ ಮೇಲೆ ದಾಳಿ ಮಾಡಿದರೆ ಹೇಗೆ ರಕ್ಷಿಸಿಕೊಳ್ಳಬೇಕು ಎನ್ನುವುದರ ಕುರಿತು ಅಣುಕು ಪ್ರದರ್ಶನ ಇದಾಗಿದೆ.
Key words: Operation Sindhura, Pakistan, threatened
The post ಅಪರೇಷನ್ ಸಿಂಧೂರಕ್ಕೆ ಬೆದರಿದ ಪಾಕ್: ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




