26
August, 2026

A News 365Times Venture

26
Wednesday
August, 2026

A News 365Times Venture

ಇಂದಿನಿಂದ ಪಡಿತರ ಲಾರಿ ಮಾಲೀಕರು, ಚಾಲಕರ ಮುಷ್ಕರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್

Date:

ಬೆಂಗಳೂರು, ಜುಲೈ 8,2025 (www.justkannada.in):  ನಾಲ್ಕು ತಿಂಗಳಿಂದ ಪಡಿತರ ಆಹಾರ ಧಾನ್ಯ ಸಾಗಣಿಕೆ ವೆಚ್ಚ ನೀಡದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರದ ವಿರುದ್ದ ಪಡಿತರ ಲಾರಿ ಮಾಲೀಕರು, ಚಾಲಕರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದ್ದಾರೆ.

ನಾಲ್ಕು ತಿಂಗಳಿಂದ ಪಡಿತರ ಆಹಾರ ಧಾನ್ಯ ಸಾಗಣಿಕೆ ವೆಚ್ಚ 260 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಲಾರಿ ಮಾಲೀಕರು, ಚಾಲಕರು ಇಂದಿನಿಂದ ಮುಷ್ಕರ  ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ ಈ ತಿಂಗಳ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಬಾಕಿ ಹಣ ಬಿಡುಗಡೆಗೆ  ಸರ್ಕಾರಕ್ಕೆ 15ದಿನಗಳ ಗಡುವು ನೀಡಲಾಗಿತ್ತು. ಆದರೆ ಸರ್ಕಾರ ಪಾವತಿ ಮಾಡದ ಹಿನ್ನೆಲೆಯಲ್ಲಿ  ಪಡಿತರ ಲಾರಿ ಮಾಲೀಕರು ಚಾಲಕರು ಅಕ್ಕಿ ಸಾಗಾಣೆ ಮಾಡುವುದನ್ನ ಬಂದ್ ಮಾಡಿದ್ದಾರೆ. ಬಾಕಿ ಹಣ ಬಿಡುಗಡೆಗೆ ಒತ್ತಾಯಿಸಿ ಗೋದಾಮು ಮುಂದೆ ಲಾರಿ ನಿಲ್ಲಿಸಿ ಮುಷ್ಕರ ಹೂಡಿದ್ದಾರೆ.

ಈ ಕುರಿತು  ಮಾತನಾಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ವಿ‌.ಆರ್.ಷಣ್ಮುಗಪ್ಪ, ಯಾವುದೇ ಭರವಸೆ ಈಡೇರಿಸದ ಹಿನ್ನೆಲೆ ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್​ ಎಂದಿದ್ದಾರೆ. ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಹೇಳಿದ್ದಾರೆ.

5 ತಿಂಗಳಿನಿಂದ 260 ಕೋಟಿ ರೂ. ಬಿಡುಗಡೆ ಆಗಬೇಕು. ಜೂ.19ರಂದು 100 ಕೋಟಿ ರೂ. ಹಾಕುವುದಾಗಿ ಹೇಳಿದ್ದರು. ಆದರೆ ಈವರೆಗೂ 1 ರೂ. ಹಣ ಬಂದಿಲ್ಲ ನಮ್ಮ ಖಾತೆಗೆ. ಆಹಾರ ಸಚಿವರು, ಅಧಿಕಾರಿಗಳು ಮಾತುಕತೆಗೆ ಕರೆದಿಲ್ಲ, ಹಾಗಾಗಿ ಇಂದಿನಿಂದ ಮುಷ್ಕರ ಮಾಡಲು ಮುಂದಾಗಿದ್ದೇವೆ. ಹಣ ಬಂದ ಮೇಲೆ ನಾವು ಅಕ್ಕಿ ಸರಬರಾಜು ಮಾಡಲು ಮುಂದಾಗುತ್ತೇವೆ ಎಂದಿದ್ದಾರೆ.vtu

Key words: Ration, truck owners ,drivers ,strike

The post ಇಂದಿನಿಂದ ಪಡಿತರ ಲಾರಿ ಮಾಲೀಕರು, ಚಾಲಕರ ಮುಷ್ಕರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...