13
June, 2026

A News 365Times Venture

13
Saturday
June, 2026

A News 365Times Venture

‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್‌ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್

Date:

ಬೆಂಗಳೂರು,ಜೂನ್,13,2026 (www.justkannada.in): ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಖೆಗೆ ವಹಿಸಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, “ನಾನು ಯಾವುದೇ ತನಿಖೆಗೆ ಸಿದ್ಧ” ಎಂದು ಮಾಧ್ಯಮಗಳ ಮುಂದೆ ಹಾರಿಕೆ ಉತ್ತರ ನೀಡುವ ಕಮಿಷನ್ ಮಿನಿಸ್ಟರ್ ಡಿಕೆ ಶಿವಕುಮಾರ್ ಅವರೇ, ಕ್ಯಾಮೆರಾಗಳ ಮುಂದೆ ನಿಮ್ಮ ಈ ‘ಉತ್ತರಕುಮಾರನ ಪೌರುಷ’ ಸಾಕು ಮಾಡಿ. ನಿಮ್ಮಲ್ಲಿ ನಿಜವಾಗಿಯೂ ಪ್ರಾಮಾಣಿಕತೆ ಇದ್ದರೆ, ಕಸದ ಟೆಂಡರ್‌ನ ಈ ಮಹಾ ಲೂಟಿಯಲ್ಲಿ ನಿಮ್ಮ ಪಾತ್ರವಿಲ್ಲ ಎಂಬ ಧೈರ್ಯ ನಿಮಗಿದ್ದರೆ, ಈ ಕೂಡಲೇ ಪ್ರಕರಣವನ್ನು CBI ತನಿಖೆಗೆ ಒಪ್ಪಿಸಿ ಎಂದು ಆಗ್ರಹಿಸಿದ್ದಾರೆ.

ಘನತ್ಯಾಜ್ಯ ವಿಲೇವಾರಿ ಟೆಂಡರ್ ಹೆಸರಿನಲ್ಲಿ ನಡೆದಿರುವ ಈ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ನಾನೇ ಖುದ್ದಾಗಿ ದೂರು ಕೊಡುತ್ತೇನೆ! ಮಾಧ್ಯಮಗಳ ಮುಂದೆ ಕ್ಯಾಮೆರಾ ನೋಡಿ ಬಿಲ್ಡಪ್ ಕೊಡುವುದನ್ನು ಬಿಟ್ಟು, ತನಿಖೆಗೆ ಆದೇಶಿಸುವ ತಾಕತ್ತು ಪ್ರದರ್ಶಿಸಿ. ಕಸದಲ್ಲೂ ಕಮಿಷನ್ ಹೊಡೆದ ಆ ಮಹಾ “ಕಮಿಷನ್ ಏಜೆಂಟ್” ಯಾರು ಎಂಬ ಸತ್ಯ ಹೊರಬರಲಿ. ಕರ್ನಾಟಕದ ಜನತೆಗೆ ಈ ಸರ್ಕಾರದ ಅಸಲಿ ಮುಖ ಏನೆಂದು ತಿಳಿಯಲಿ ಎಂದು ಆರ್.ಅಶೋಕ್  ವಾಗ್ದಾಳಿ ನಡೆಸಿದ್ದಾರೆ.

Key words: garbage, tender, corruption, CBI,  R. Ashok, CM DK Shivakumar

The post ‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್‌ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜೂನ್,13,2026 (www.justkannada.in): ಎಸ್‌ ಟಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ...

 ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಮಾಜಿ ಸಂಸದ ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಮಾಜಿ ಸಿಎಂ...

ಪ್ಯಾರಾ ಈಜು ರಾಷ್ಟ್ರ ಮಟ್ಟದ ಸ್ಪರ್ಧೆ: ಮೈಸೂರಿನ ರುತ್ವಗೆ ಮೂರು ಚಿನ್ನ

ಮೈಸೂರು,ಜೂನ್,13,2026 (www.justkannada.in):  ಬೆಂಗಳೂರಿನ ವೈಟ್‌ ಫಿಲ್ಡ್‌ ನ ಝೀ ಸ್ವಿಮ್ಮಿಂಗ್ ಅಕಾಡೆಮಿಯಲ್ಲಿ...

ಸರ್ಕಾರಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ : ಗುತ್ತಿಗೆದಾರನ ವಿರುದ್ದ ದೂರು ದಾಖಲು

 ಶಿವಮೊಗ್ಗ,ಜೂನ್,13,2026 (www.justkannada.in):   ಸರ್ಕಾರಿ ನೌಕರಿಯಲ್ಲಿರುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಜೀವ...