30
July, 2025

A News 365Times Venture

30
Wednesday
July, 2025

A News 365Times Venture

ಉದಯಗಿರಿ ಕಲ್ಲು ತೂರಾಟ ಕೇಸ್: ಫೆ.24 ರಂದು ಬೃಹತ್ ಜನಾಂದೋಲನ ಜಾಗೃತಿ ಸಭೆ

Date:

ಮೈಸೂರು,ಫೆಬ್ರವರಿ,18,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಘಟನೆ ಖಂಡಿಸಿ ಫೆಬ್ರವರಿ 24ರಂದು ಬೃಹತ್ ಜನಾಂದೋಲನ ಜಾಗೃತಿ ಸಭೆಯನ್ನ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿಯು ಆಯೋಜಿಸಿದೆ.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಉದಯಗಿರಿ ಗಲಭೆ ಘಟನೆಯನ್ನು ಖಂಡಿಸಿದ ಸಮಿತಿ ಸದಸ್ಯರು, ಈ ಸಂಬಂಧ ಫೆಬ್ರವರಿ 24 ರ ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯ ಆವರಣದಲ್ಲಿ ಬೃಹತ್ ಜನಾಂದೋಲನ ಜಾಗೃತಿ ಸಭೆ ಆಯೋಜನೆ ಮಾಡಿದ್ದಾರೆ

ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಭೆಯು ನಮ್ಮ ದೇಶದ ಆಂತರಿಕ ಸುರಕ್ಷತೆಗೆ, ಕಾನೂನು ಸುವ್ಯವಸ್ಥೆಗೆ ಆತಂಕಕಾರಿ ಬೆಳವಣಿಗೆಯಾಗಿದೆ. ಅಲ್ಲಿ ನಡೆದ ಘಟನೆಯು ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ. ಜೆ ಹಳ್ಳಿ ಘಟನೆಗೆ ಸಮಾನವಾಗಿದೆ. ಈ ಗಲಭೆಯು ಹಿಂದೆ ನಿಷೇಧಿತ ಪಿಎಫ್ ಐ ಸಂಘಟನೆಯ ಕೈವಾಡ ಇರುವ ಅನುಮಾನವಿದೆ. ಪ್ರಚೋದನಕಾರಿ ಹೇಳಿಕೆ ನೀಡಿದ ಮೌಲ್ವಿಯು ಪಿಎಫ್ಐ ಸಂಘಟನೆಯ ರಾಜಕೀಯ ಪಕ್ಷವಾದ ಎಸ್ ಡಿಪಿಐ ಕಾರ್ಯಕರ್ತನಾಗಿದ್ದಾನೆ ಎಂದು  ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿ ಸಂಚಾಲಕರು ಗಂಭೀರ ಆರೋಪ ಮಾಡಿದ್ದಾರೆ.

ಅಲ್ಲದೆ ಬಂಧಿತ ಆರೋಪಿಗಳ ಮೇಲೆ ಯುಎಪಿಎ ಕಾಯ್ದೆಯಡಿ ಕೇಸ್ ದಾಖಲಿಸಿ ಎನ್ ಐಎ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

Key words: Udayagiri, stone pelting, case, e public awareness, meeting, Feb. 24

The post ಉದಯಗಿರಿ ಕಲ್ಲು ತೂರಾಟ ಕೇಸ್: ಫೆ.24 ರಂದು ಬೃಹತ್ ಜನಾಂದೋಲನ ಜಾಗೃತಿ ಸಭೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...