25
May, 2026

A News 365Times Venture

25
Monday
May, 2026

A News 365Times Venture

ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯವೆದ್ದಿದ್ದ ಸಾಧಿಕ್ ಪೈಲ್ವಾನ್ ಅವರ ಮನವೊಲಿಕೆ ಮಾಡಿದ್ದೇವೆ. ಎರಡು ಕ್ಷೇತ್ರಗಳ ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ  ವ್ಯಕ್ತಪಡಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಸಾದಿಕ್ ಪೈಲ್ವನ್   ದಾವಣಗೆರೆ ದಕ್ಷಿಣ  ಉಪಚುನಾವಣೆಗೆ  ಟಿಕೆಟ್ ಕೇಳಿದ್ದರು.  ಟಿಕೆಟ್ ಸಿಗದಿದ್ದರಿಂದ ನಾಮಪತ್ರ ಸಲ್ಲಿಸಿದ್ದರು.  ನಿನ್ನೆ ನಮಗೆ ಸಮಯ ಬಹಳ ಕಡಿಮೆ ಇದ್ದುದ್ದರಿಂದ ಮಾತನಾಡಿರಲಿಲ್ಲ. ಇದೀಗ ಸಾದಿಕ್ ಮನವೊಲಿಸಿದ್ದೇವೆ ಎಂದರು.

ದಾವಣಗೆರೆ ದಕ್ಷಿಣದಲ್ಲಿ 70 ಸಾವಿರಕ್ಕೂ ಹೆಚ್ಚು ಮುಸ್ಲೀಮರಿದ್ದಾರೆ. ಹೀಗಾಗಿ  ಟಿಕೆಟ್ ಬಯಸಿದ್ದರು.  ಆದರೆ ಶಾಸಕರು ನಿಧನರಾದರೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ಕೊಡುವ ಪದ್ದತಿ ಕಾಂಗ್ರೆಸ್ ನಲ್ಲಿದೆ ಸಾದಿಕ್ ಪೈಲ್ವಾನ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು ನಾನು ಸಾದಿಕ್ ಪೈಲ್ವಾನ್ ಕುಸ್ತಿ ನೋಡಲು ಹೋಗುತ್ತಿದ್ದೆ. ಉಪಚುನಾವಣೆಗೆ ಅಭ್ಯರ್ಥಿಯಾಗಬೇಕೆಂದು ಬಯಸಿದ್ದು ತಪ್ಪಲ್ಲ.  ಇದೀಗ ಚುನಾವಣಾ ಕಣದಿಂದ ಸಾದಿಕ್ ನಿವೃತ್ತರಾಗಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇವೆ.  ಎರಡು ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: By-election, We, win, both constituencies, CM Siddaramaiah

The post ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್‌ ಪರಿವರ್ತಕಗಳ ಬ್ಯಾಂಕ್‌ ಸ್ಥಾಪನೆ: ಟ್ರಾನ್ಸ್‌ ಫಾರ್ಮರ್‌ ಗಳ ತುರ್ತು ನಿರ್ವಹಣೆಗೆ ‘ಸೆಸ್ಕ್‌’ ಸಜ್ಜು

ಮೈಸೂರು, ಮೇ, 25, 2026 (www.justkannada.in):  ಗ್ರಾಹಕರಿಗೆ ಅಡಚಣೆರಹಿತ ವಿದ್ಯುತ್‌ ಪೂರೈಕೆ...

ಸಿಎಂ ಸಿದ್ದು ಸು”ಭದ್ರ”; ಡಿಕೆಶಿಗೆ “ಗೃಹ”, ಡಿಕೆಸುಗೆ “ರಾಜ್ಯಸಭಾ” ಸ್ಥಾನ..? ಹೈಕಮಾಂಡ್‌ ತಂತ್ರ .!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ಜೋರಾಗಿರುವ...

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ...

ಸಚಿವ ಸ್ಥಾನ ತ್ಯಾಗ ವಿಚಾರ: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ- ಸಚಿವ ಮುನಿಯಪ್ಪ

ಬೆಂಗಳೂರು,ಮೇ,25,2026 (www.justkannada.in): ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ ಸಂಬಂಧ ಹೈಕಮಾಂಡ್...