16
July, 2025

A News 365Times Venture

16
Wednesday
July, 2025

A News 365Times Venture

ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲೇ ಭೂಮಿ: ಒಂದೇ ಒಂದು ಕಂಪನಿ ಹೊರಹೋಗಲು ಬಿಡಲ್ಲ-ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಜುಲೈ,16,2025 (www.justkannada.in):  ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ  ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ ಯಾವ ಉದ್ಯಮಿಯೂ ಇಲ್ಲಿಂದ ಅಲ್ಲಿಗೆ ಹೋಗಿಬಿಡುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ ಪಾಟೀಲ್ ತಿರುಗೇಟು ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ  ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ರಾಜ್ಯವು ವೈಮಾಂತರಿಕ್ಷ ವಲಯದಲ್ಲಿ ದೇಶದ ಶೇ.65ರಷ್ಟು ಪಾಲು ಹೊಂದಿದೆ. ಜಾಗತಿಕ ಮಟ್ಟದಲ್ಲಿ ನಮ್ಮದು ಮೂರನೇ ಅತ್ಯುತ್ತಮ ಕಾರ್ಯ ಪರಿಸರವಾಗಿದೆ. ಉದ್ಯಮಗಳಿಗೆ ಭೂಮಿ ಕೊಟ್ಟಮಾತ್ರಕ್ಕೆ ಅವು ಅಲ್ಲಿಗೆ ಹೋಗುವುದಿಲ್ಲ. ಕಾರ್ಯ ಪರಿಸರ ಕೂಡ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿರುಗೇಟು ಕೊಟ್ಟಿದ್ದಾರೆ.

ನಾರಾ ಲೋಕೇಶ್ ಅವರ ಟ್ವೀಟ್ ಅನ್ನು ನಾನೂ ನೋಡಿದ್ದೇನೆ. ನಾನೂ ಅಲ್ಲೇ ಉತ್ತರ ಕೊಟ್ಟಿದ್ದೇನೆ. ಎಂ.ಬಿ ಪಾಟೀಲನಿಗೂ ಸಾಮರ್ಥ್ಯವಿದೆ, ಕರ್ನಾಟಕ ರಾಜ್ಯವೂ ಸಮರ್ಥವಾಗಿದೆ . ರಾಜ್ಯದ ಅನೇಕ ಕಡೆಗಳಲ್ಲಿ ಏರೋಸ್ಪೇಸ್ ಮಾತ್ರವಲ್ಲ, ಎಐ, ಡೀಪ್-ಟೆಕ್, ಐಟಿ ಹೀಗೆ ಎಲ್ಲಾ ತರಹದ ಉದ್ಯಮಗಳಿಗೂ ಭೂಮಿ ಇದೆ. ಒಬ್ಬೇ ಒಬ್ಬ ಉದ್ಯಮಿಯೂ ಕರ್ನಾಟಕದಿಂದ ಹೊರಹೋಗಲು ನಾನು ಬಿಡುವುದಿಲ್ಲ ಎಂದು  ಸಚಿವ ಎಂ.ಬಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ಏರೋಸ್ಪೇಸ್ ಉದ್ಯಮಿಗಳಿಗೆ ಬರೀ ಭೂಮಿಯಲ್ಲ, ಅದರ ಜತೆಗೆ ನೀರು, ವಿದ್ಯುತ್ ಎಲ್ಲವನ್ನೂ ಕೊಡುತ್ತೇವೆ. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳಿಗೆ ನಮ್ಮ‌ ಪಾಲಿನ ನೀರು ಬಳಸಿಕೊಳ್ಳಲು 3,600 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಯೋಜನೆಯನ್ನೇ ರೂಪಿಸಲಾಗಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಈಗ ಉದ್ಯಮಿಗಳ ಪರವಾಗಿ ಮಾತನಾಡುತ್ತಿದ್ದಾರೆ. ಸರಕಾರವೇನಾದರೂ ದೇವನಹಳ್ಳಿ ತಾಲ್ಲೂಕಿನಲ್ಲಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದರೆ, ಆಗ ಅವರು ರೈತರ ಪರವಾಗಿ ಮಾತನಾಡುತ್ತಿದ್ದರು. ವಿರೋಧ ಪಕ್ಷಗಳು ಏನಾದರೂ ಮಾಡಿಕೊಳ್ಳಲಿ, ನನಗೆ ರಾಜ್ಯದ ಹಿತಾಸಕ್ತಿ ಮಾತ್ರ ಮುಖ್ಯ ಎಂದು ಎಂ.ಬಿ ಪಾಟೀಲ್ ಪ್ರತಿಪಾದಿಸಿದರು.

ಕೈಗಾರಿಕಾ ಇಲಾಖೆಯಲ್ಲಿ ಸಾಧಿಸಿರುವ ಪ್ರಗತಿ ಮತ್ತು ದೇವನಹಳ್ಳಿ ವಿದ್ಯಮಾನವನ್ನೆಲ್ಲ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರಿಗೆ ಹೇಳಿದ್ದೇನೆ. ಇಲಾಖೆಯ ಪ್ರಗತಿ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು  ತಿಳಿಸಿದರು.vtu

Key words: Land, company, Minister, M.B. Patil

The post ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲೇ ಭೂಮಿ: ಒಂದೇ ಒಂದು ಕಂಪನಿ ಹೊರಹೋಗಲು ಬಿಡಲ್ಲ-ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...