ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಯಾರಿಗೂ ಅನ್ಯಾಯ ಆಗುವುದು ಬೇಡ ಎಂದು ಖರ್ಗೆ ಹೇಳಿದ್ದಾರೆ ಎಲ್ಲರೂ ಒಟ್ಟಾಗಿ ಇರಬೇಕು. ಸಮಾನವಾಗಿ ಹಂಚಬೇಕು ಎಂದಿದ್ದಾರೆ. ಖರ್ಗೆ ಹೇಳಿಕೆಗೆ ನಾವು ಸಮ್ಮತಿ ನೀಡಿದ್ದೇವೆ ಎಂದರು.
ಈ ವಿಚಾರವನ್ನ ಪರಮೇಶ್ವರ್, ಹೆಚ್.ಸಿ ಮಹದೇವಪ್ಪ ಗಮನಕ್ಕೆ ತರುತ್ತೇವೆ. 101 ಜಾತಿಗೆ ಅನ್ಯಾಯ ಆಗಬಾರದು ಇದು ನಮ್ಮ ನಿಲುವು. ಬಗೆಹರಿಸಿಕೊಳ್ಳಲು ನಾವು ತಯಾರಿದ್ದೇವೆ. ನಾಳೆ ಸಿಎಂ ನೇತೃತ್ವದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ. ಎಜಿ ಭೇಟಿ ಮಾಡಿದ್ದವು ಕೋರ್ಟ್ ನಲ್ಲಿ ಯಾವುದೇ ತಡೆ ಇಲ್ಲ. ಒಳ ಮೀಸಲಾತಿ ಜಾರಿ ಮಾಡಲು ಯಾವುದೇ ಅಭ್ಯಂತರ ವಿಲ್ಲ ಎಂದು ಮುನಿಯಪ್ಪ ತಿಳಿಸಿದರು.
Key words: Internal reservation, Mallikarjun Kharge, resolve, Minister, KH Muniyappa
The post ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




