7
March, 2026

A News 365Times Venture

7
Saturday
March, 2026

A News 365Times Venture

ಕನ್ನಡಿಗರ ಕ್ಷಮೆ ಕೇಳದೆ ದುರ್ವರ್ತನೆ: ನಟ ಕಮಲ್ ಹಾಸನ್ ಗೆ ಹೈಕೋರ್ಟ್ ತೀವ್ರ ತರಾಟೆ

Date:

ಬೆಂಗಳೂರು,ಜೂನ್,3,2025 (www.justkannada.in): ತಮಿಳಿನಿಂದ ಕನ್ನಡ ಹುಟ್ಟಿದು ಎಂದು ವಿವಾದಾತ್ಮಕ ಹೇಳಿಕೆ ನೀಡಿ ಈಗ ಥಗ್ಸ್ ಲೈಫ್ ಸಿನಿಮಾ ಬಿಡುಗಡೆಗೆ ಭದ್ರತೆ ಕೋರಿ  ರಿಟ್ ಅರ್ಜಿ ಸಲ್ಲಿಸಿರುವ ನಟ ಕಮಲ್ ಹಾಸನ್ ಗೆ ಹೈಕೋರ್ಟ್ ತೀವ್ರ ತರಾಟೆ ತೆಗೆದು ಕೊಂಡಿದೆ.

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ರಾಜ್ಯದಲ್ಲಿ ಥಗ್ಸ್ ಲೈಫ್  ಸಿನಿಮಾ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ಹೀಗಾಗಿ ನಟ ಕಮಲ್ ಹಾಸನ್ ಸಿನಿಮಾ ಬಿಡುಗಡೆಗಾಗಿ ಭದ್ರತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇದೀಗ ನಟ ಕಮಲ್ ಹಾಸನ್ ಗೆ ಫುಲ್ ಕ್ಲಾಸ್ ತೆಗೆದುಕೊಂಡಿದೆ. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿಯಲ್ಲ ಪಬ್ಲಿಕ್ ಫಿಗರ್. ಈ ರೀತಿ ಹೇಳಿಕೆ ನೀಡಬಾರದು. ಆದರೆ ಕನ್ನಡಿಗರ ಕ್ಷಮೆ ಕೇಳದೆ ದುರ್ವರ್ತನೆ ತೋರಿದ್ದೀರಿ . ಕ್ಷಮೆ  ಕೇಳಿದ ನಂತರ  ಅರ್ಜಿ ಪರಿಗಣನೆ  ಮಾಡುತ್ತೇವೆ ಎಂದು ನ್ಯಾಯಪೀಠ ತಿಳಿಸಿದೆ.

ರಾಜ್ಯದಲ್ಲಿ ಕನ್ನಡ ಭಾಷೆ ಪ್ರಮುಖವಾದದ್ದು.   ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಈಗ ಸಿನಿಮಾ ಬಿಡುಗಡೆಗೆ ಭದ್ರತೆ ಕೋರುತ್ತಿದ್ದೀರಿ.  ಸಿ ರಾಜಗೋಪಾಲಚಾರಿ ಇದೇ ರೀತಿ ಹೇಳಿದ್ದರು.  ನಂತರ ಅವರು ಕ್ಷಮೆ ಕೇಳಿದ್ದರು ನಿಮ್ಮ ಹೇಳಿಕೆಯಿಂದ ಶಿವರಾಜ್ ಕುಮಾರ್ ಸಮಸ್ಯೆ  ಅನುಭವಿಸುವಂತಾಗಿದೆ. ಇವತ್ತಿನ ಈ ಪರಿಸ್ಥಿತಿಗೆ ಕಮಲ್ ಹಾಸನ್ ಕಾರಣ. ಈ ಪರಿಸ್ಥಿತಿ ನೀವೇ ನಿರ್ಮಾಣ ಮಾಡಿ ಈಗ ಭದ್ರತೆ ಕೋರುತ್ತಿದ್ದಾರಾ.  ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೆ..?    300 ಕೋಟಿ ಸಿನಿಮಾ ಅಂತೀರಾ ಕ್ಷಮೆ ಕೇಳಿ. ಬೇರೆಯವರ ಭಾವನೆಗಳಿಗೆ ಧಕ್ಕೆ ತಂದು ಸಿನಿಮಾ ಬಿಡುಗಡೆ ಮಾಡುತ್ತೀರಾ..? ಎಂದು ನಟ ಕಮಲ್ ಹಾಸನ್ ವಿರುದ್ದ ನ್ಯಾಯಪೀಠ ಕೆಂಡ ಕಾರಿದೆ.vtu

ನಾನು ಸಿನಿಮಾ ನೋಡಲು ಬಯಸಿದ್ದೆ ಆದರೆ ಈ ವಿವಾದದಿಂದ ನೋಡಲು ಸಾಧ್ಯವಿಲ್ಲ

ಹಾಗೆಯೇ  ನಿಮ್ಮ ಹೇಳಿಕೆ ನಿರಾಕರಿಸಿಲ್ಲ ಒಪ್ಪಿಕೊಂಡಿದ್ದೀರಿ. ನಾನು ಥಗ್ ಲೈಫ್ ಸಿನಿಮಾ ನೋಡಲು ಬಯಸಿದ್ದೆ ಆದರೆ ಈ ವಿವಾದದಿಂದ ನೋಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

Key words: High Court, actor, Kamal Haasan, without, apologizing, Kannada

The post ಕನ್ನಡಿಗರ ಕ್ಷಮೆ ಕೇಳದೆ ದುರ್ವರ್ತನೆ: ನಟ ಕಮಲ್ ಹಾಸನ್ ಗೆ ಹೈಕೋರ್ಟ್ ತೀವ್ರ ತರಾಟೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ...