3
March, 2026

A News 365Times Venture

3
Tuesday
March, 2026

A News 365Times Venture

ಕರ್ನಾಟಕದವರು ಕಡಲೆ ಬೀಜ ತಿನ್ನಬೇಕಾ?  ಕೇಂದ್ರ ಬಜೆಟ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಕಿಡಿ

Date:

ಬೆಂಗಳೂರು, ಫೆಬ್ರವರಿ, 1,2025 (www.justkannada.in):  ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಮಂಡಿಸಿದ ಕೇಂದ್ರ ಬಜೆಟ್ ​​ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಲೇವಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೃಷ್ಣಭೈರೇಗೌಡ, ಈ ಬಾರಿ ಕೇಂದ್ರದ ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು ಸಿಕ್ಕಿದೆ. ಕೇಂದ್ರದ ಬಜೆಟ್​​ ಕರ್ನಾಟಕದ ಪಾಲಿಗೆ ಕರಾಳವಾಗಿದೆ. ಕೇಂದ್ರದ ಬಜೆಟ್​ನಿಂದ ರಾಜ್ಯದ ಯಾವುದೇ ಬೇಡಿಕೆ ಈಡೇರಿಲ್ಲ. ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ ಎಂದು ಕಿಡಿಕಾರಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಒಂದು ಪೈಸೆ ಕೂಡ ನೀಡಿಲ್ಲ. ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕಕ್ಕೆ ಏನೂ ನೀಡಿಲ್ಲ. ಬೆಂಗಳೂರು ನಗರ ಹೆಚ್ಚು ಉದ್ಯೋಗ ಅವಕಾಶ ನೀಡಿದೆ. ರಫ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯ ನೀಡುತ್ತಿದೆ. ಆದರೆ ಬೆಂಗಳೂರಿಗೆ ಯಾವುದೇ ಅನುದಾನ ಘೋಷಿಸಿಲ್ಲ. ಸರ್ಕಾರದ ಪರವಾಗಿ ಇದನ್ನು​​​ ನಾನು ಖಂಡಿಸುತ್ತೇನೆ  ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕ ರಾಜ್ಯದ ಜನರ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ. ಬಜೆಟ್ ನಲ್ಲಿ ಬಿಹಾರ ರಾಜ್ಯಕ್ಕೆ ಐದಾರು ಯೋಜನೆಗಳನ್ನು ನೀಡಿದ್ದಾರೆ. ಹಾಗಾದರೆ ಕರ್ನಾಟಕದವರು ಕಡಲೆ ಬೀಜ ತಿನ್ನಬೇಕಾ? ಎಂದು ಸಚಿವ ಕೃಷ್ಣಭೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

Key words: central budget, Minister, Krishnabhairegowda

The post ಕರ್ನಾಟಕದವರು ಕಡಲೆ ಬೀಜ ತಿನ್ನಬೇಕಾ?  ಕೇಂದ್ರ ಬಜೆಟ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...

ಖಮನೈ ಹತ್ಯೆ ಬಗ್ಗೆ ಪ್ರಧಾನಿ ಮೋದಿ ಮೌನ: ಸೋನಿಯಾ ಗಾಂಧಿ ಕಿಡಿ

ನವದೆಹಲಿ, ಮಾರ್ಚ್, 3,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಜಂಟಿ...

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ,ಸಂಘರ್ಷ...