30
May, 2026

A News 365Times Venture

30
Saturday
May, 2026

A News 365Times Venture

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

Date:

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಇದೀಗ ನೂತನ ಸಿಎಂ ಆಯ್ಕೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ನಿಗದಿಯಾಗಿತ್ತು. ಹೀಗಾಗಿ ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದ್ದು ಸಭೆಗೆ  ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಹ ಆಗಮಿಸಿದ್ದಾರೆ. ಖಾಸಗಿ ಹೋಟೆಲ್‌ನಿಂದ ನೇರವಾಗಿ ಸಿಎಲ್​​​ಪಿ ಸಭೆ ನಡೆಯುವ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ಮುಂದಿನ ಸಿಎಂ ಎಂದೇ ಬಿಂಬಿತವಾಗಿರುವ ಡಿಕೆ ಶಿವಕುಮಾರ್ ಅವರು ಸಿಎಲ್ ಪಿ ಸಭೆಗೆ  ಗಮಿಸಿದ್ದಾರೆ. ಖಾಸಗಿ ಹೋಟೆಲ್​​ ನಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಸಿ ವೇಣುಗೋಪಾಲ್ ಜೊತೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ನೇರವಾಗಿ ಖಾಸಗಿ ಕಾರಿನಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಶಾಸಕರು ಸಹ ಆಗಮಿಸುತ್ತಿದ್ದಾರೆ. ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಶಾಸಕರಾದ ಟಿ.ಬಿ.ಜಯಚಂದ್ರ, ರಾಮಲಿಂಗಾರೆಡ್ಡಿ, ಸಿ.ಪಿ.ಯೋಗೇಶ್ವರ್​​, ಆನೇಕಲ್​​ ಶಿವಣ್ಣ, ಪ್ರದೀಪ್ ಈಶ್ವರ್​​, ಅಶೋಕ್ ಪಟ್ಟಣ್​​ , ಪುಟ್ಟರಂಗಶೆಟ್ಟಿ, ನಯನಾ ಮೋಟಮ್ಮ, ಲಕ್ಷ್ಮೀ ಹೆಬ್ಬಾಳ್ಕರ್, ಇಕ್ಬಾಲ್ ಹುಸೇನ್ ಸೇರಿ ಹಲವು ಶಾಸಕರು ಆಗಮಿಸಿದ್ದಾರೆ.

Key words: Countdown, CLP meeting,  High command, leaders,  MLAs, arrive

The post ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಇಂದು...

ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವ ಮೂಲಕ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ...

ತಳ ಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ ಹೆಚ್. ವೆಂಕಟರಮಣ್ಣಪ್ಪ -ಸಿದ್ದರಾಮಯ್ಯ

ತುಮಕೂರು,ಮೇ,30,2026 (www.justkannada.in):  ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ...