10
March, 2026

A News 365Times Venture

10
Tuesday
March, 2026

A News 365Times Venture

ಕಾಂತರಾಜು ವರದಿಗೂ, ಎಸ್.ಸಿ ಒಳಮೀಸಲಾತಿ ಸಮೀಕ್ಷೆಗೂ ಸಂಬಂಧ ಇಲ್ಲ- ಸಚಿವ ಹೆಚ್.​​ಸಿ ಮಹದೇವಪ್ಪ

Date:

ಬೆಂಗಳೂರು, ಮೇ, 5,2025 (www.justkannada.in): ಕರ್ನಾಟಕ ಒಳಮೀಸಲಾತಿ ಜಾತಿ ಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಇದು ಪರಿಶಿಷ್ಟಜಾತಿ ಸಮುದಾಯಕ್ಕೆ ಮಾಡುತ್ತಿರುವ ಸಮೀಕ್ಷೆಯಾಗಿದ್ದು ಕಾಂತರಾಜು ವರದಿಗೂ ಈ ಸಮೀಕ್ಷೆಗೂ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಹೆಚ್.​ಸಿ ಮಹದೇವಪ್ಪ, ಎಸ್​ಸಿ ಒಳ ಮೀಸಲಾತಿ ಸಮೀಕ್ಷೆ ಇದೊಂದು ಚಾರಿತ್ರಿಕವಾದದ್ದು. ಪರಿಶಿಷ್ಟ ಜಾತಿ ಅನ್ನೋದು ಜಾತಿ ಅಲ್ಲ, ಅದೊಂದು ಗುಂಪು. ಪರಿಶಿಷ್ಟ ಜಾತಿ ಸಮುದಾಯದ ದತ್ತಾಂಶಗಳ ಸಂಗ್ರಹಕ್ಕಾಗಿ ಸುಪ್ರೀಂಕೋರ್ಟ್​ ನಿರ್ದೇಶನದಂತೆ ಸಮೀಕ್ಷೆ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿಗಳಲ್ಲಿನ 101 ಜಾತಿಗಳ ಜನಸಂಖ್ಯೆ ತಿಳಿಯಲು ಒಳಮೀಸಲಾತಿ ಜಾರಿಗೆ ಗಣತಿ ಮಾಡುತ್ತಿದ್ದೇವೆ. ಗಣತಿ ಕಾರ್ಯಕ್ಕೆ ಅಂದಾಜು 100 ಕೋಟಿ ರೂ ಹಣ ಖರ್ಚು ಆಗಲಿದೆ ಎಂದು ತಿಳಿಸಿದರು.

ಇದು ಎಸ್.​​ಸಿ ಅವರಿಗೆ ಮಾತ್ರ ಈ ಸಮೀಕ್ಷೆ. ಇದು ಎಂಪರಿಕಲ್ ಡಾಟಾ ಕಲೆಕ್ಟ್ ಮಾಡುವುದು ಅಷ್ಟೇ. ಈ ಸಮೀಕ್ಷೆಗೆ ಎಡಗೈ ಮತ್ತು ಬಲಗೈನವರ ಒಮ್ಮತ ಇದೆ. ಯಾರು ಕೂಡ ಸುಳ್ಳು ಹೇಳೋಕೆ‌ ಆಗಲ್ಲ. ಕಾಂತರಾಜು ವರದಿಯಲ್ಲಿ, ನ್ಯಾಷನಲ್ ಸಮೀಕ್ಷೆಯಲ್ಲಿ ಅಂಕಿ-ಅಂಶ ಇಲ್ಲ. ಹೀಗಾಗಿ ಯಾರು ಕೂಡ ಅನುಮಾನ ಪಡುವ ಹಾಗಿಲ್ಲ. ಯಾರು, ಎಷ್ಟು ಜನ ಇದ್ದಾರೆ ಅಂತಾ ಯಾರಿಗೂ ಸಹ ಗೊತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Key words: SC, internal reservation, survey, Minister, H.C. Mahadevappa

The post ಕಾಂತರಾಜು ವರದಿಗೂ, ಎಸ್.ಸಿ ಒಳಮೀಸಲಾತಿ ಸಮೀಕ್ಷೆಗೂ ಸಂಬಂಧ ಇಲ್ಲ- ಸಚಿವ ಹೆಚ್.​​ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...