24
August, 2026

A News 365Times Venture

24
Monday
August, 2026

A News 365Times Venture

ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Date:

ನವದೆಹಲಿ, ಆಗಸ್ಟ್, 24,2026 (www.justkannada.in):  ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಜಾರಿಗೊಳಿಸುವಂತೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು  ಸುಪ್ರೀಂಕೋರ್ಟ್‌ ಆಗಸ್ಟ್ 31ಕ್ಕೆ ಮುಂದೂಡಿಕೆ ಮಾಡಿದೆ.

ತಮಿಳುನಾಡು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ  ಸದ್ಯ, ಅಂಕಿಅಂಶಗಳೊಂದಿಗೆ ಬರುವಂತೆ ಉಭಯ ರಾಜ್ಯಗಳಿಗೆ ಸೂಚಿಸಿ, ಮುಂದಿನ ಸೋಮವಾರಕ್ಕೆ (ಆಗಸ್ಟ್ 31) ವಿಚಾರಣೆ ಮುಂದೂಡಿತು.

ತಮಿಳುನಾಡು ಪರ ವಾದ ಮಂಡಿಸಿದ  ಹಿರಿಯ ವಕೀಲ ಸಿಎಸ್ ವೈದ್ಯನಾಥನ್, ರಾಜ್ಯಕ್ಕೆ ಬರಬೇಕಾದ ಪ್ರಮಾಣದ ಕಾವೇರಿ ನೀರು ಸಿಗುತ್ತಿಲ್ಲ. ಕರ್ನಾಟಕ ನಮಗೆ ನೀರು ಹರಿಸುತ್ತಿಲ್ಲ ಪ್ರಾಧಿಕಾರದ ಸ್ಥಾಪನೆಯ ಅಧಿಕಾರಗಳು ಕಾರ್ಯಗಳು ಮತ್ತು ಕರ್ತವ್ಯಗಳನ್ನ ದಯವಿಟ್ಟು ನೋಡಿ ಈ ಆದೇಶಗಳನ್ನ ಕರ್ನಾಟಕ ರಾಜ್ಯ ಪಾಲಿಸುತ್ತಿಲ್ಲ ಅಲ್ಪಪ್ರಮಾಣದ ನೀರು ಹರಿಸುತ್ತಿದೆ ಕರ್ನಾಟಕ ತನ್ನ ರೈತರ ಬೆಳಗೆಳಿಗೆ ಕಾವೇರಿ ನೀರು ಹರಿಸುತ್ತಿದೆ ಆದರೆ ತಮಿಳುನಾಡಿಗೆ ನೀರು ಇಲ್ಲ ಎನ್ನುತ್ತಿದೆ  ಎಂದರು.

ಈ ನಡುವೆ ನಾವು ನೀರು ಹರಿಸುತ್ತಿದ್ದೇವೆ ಎಂದು ಕರ್ನಾಟಕ ಪರ ವಾದ ಮಂಡಿಸಲಾಯಿತು. ನಂತರ ಈಗ ಸಮಸ್ಯೆ ಏನಿದೆ ಎಂದ ನ್ಯಾಯಪೀಠ ಮುಂದಿನ  ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ ಮಾಡಿತು.

Key words: Cauvery water dispute, Supreme Court, adjourned, hearing

The post ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ: ಕಬಿನಿ ಹಿತ ಕಾಯದಿದ್ದರೆ ಕುರ್ಚಿ ಕಸಿದುಕೊಳ್ತೀವಿ- ಬಡಗಲಪುರ ನಾಗೇಂದ್ರ

ಮೈಸೂರು,ಆಗಸ್ಟ್,24,2026 (www.justkannada.in):  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು...

ಸದನದಲ್ಲಿ ಸದ್ದು ಮಾಡಿದ ಅದಾನಿ-ಸಿಎಂ ಡಿಕೆಶಿ ಭೇಟಿ ವಿಚಾರ: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು,ಆಗಸ್ಟ್,24,2026 (www.justkannada.in):  ಉದ್ಯಮಿ ಗೌತಮ್ ಅದಾನಿ ಹಾಗೂ ಸಿಎಂ ಡಿಕೆ ಶಿವಕುಮಾರ್...

ತಮಿಳುನಾಡಿಗೆ ಹರಿದ ನೀರು: ಕಬಿನಿ ಡ್ಯಾಂ ಖಾಲಿ : ಇಂದು ರೈತರಿಂದ ಹೋರಾಟ

ಮೈಸೂರು,ಆಗಸ್ಟ್,24,2026 (www.justkannada.i):  ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಇದ್ದು...

VTU ಬೆಂಗಳೂರು ಕೇಂದ್ರಕ್ಕೆ ಜಪಾನ್ ನಿಯೋಗ ಭೇಟಿ, ಚರ್ಚೆ

ಬೆಂಗಳೂರು,ಆಗಸ್ಟ್,24,2026 (www.justkannada.in): ಕೈಗಾರಿಕೆ–ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸ ಸಲುವಾಗಿ ಜಪಾನ್‌ನ...