29
June, 2026

A News 365Times Venture

29
Monday
June, 2026

A News 365Times Venture

ಕೆಂಪೇಗೌಡ ಏರ್​​​ಪೋರ್ಟ್​ಗೆ ಹುಸಿ ಬಾಂಬ್​ ಮೇಲ್ ಬೆದರಿಕೆ

Date:

ಬೆಂಗಳೂರು, ಜೂನ್,​ 19,2025 (www.justkannada.in):  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.

ಒಂದೇ ವಾರದಲ್ಲಿ ಇದು ಎರಡನೇ ಹುಸಿ ಬಾಂಬ್​ ಮೇಲ್ ಆಗಿದೆ. ಜೂ.13, 16ರಂದು ಎರಡು ಬಾಂಬ್​ ಬೆದರಿಕೆ ಇ-ಮೇಲ್ ಬಂದಿತ್ತು. ಏರ್​​ಪೋರ್ಟ್​ ಭದ್ರತಾ ಪಡೆಗೆ ಮೇಲ್​ ಬಂದಿದ್ದು, ‘ಉಗ್ರ ಅಜ್ಮಲ್ ಕಸಬ್​ ಗಲ್ಲಿಗೆ ಹಾಕಿದ್ದು ಸರಿಯಿಲ್ಲ. ಶೌಚಾಲಯದ ಪೈಪ್​ಲೈನ್​ನಲ್ಲಿ ಬಾಂಬ್ ಇಟ್ಟಿದ್ದು, ಪಝಲ್ ಗೇಮ್ ರೀತಿ ಎರಡು ಕಡೆ ಬಾಂಬ್ ಇಟ್ಟಿದ್ದು ಪ್ಲ್ಯಾನ್​ ಎ ಫೇಲ್​​ ಆದರೆ ಪ್ಲ್ಯಾನ್ ಬಿ’ ಎಂದು ಬೆದರಿಕೆ ಸಂದೇಶ ರವಾನಿಸಲಾಗಿದೆ.

ಬೆದರಿಕೆ ಮೇಲ್ ಹಿನ್ನೆಲೆ‌ ಎಲ್ಲೆಡೆ ಪರಿಶೀಲನೆ ಮಾಡಿದ ಅಧಿಕಾರಿಗಳು ಬಳಿಕ ಇದೊಂದು ಹುಸಿ ಬಾಂಬ್ ಮೇಲ್ ಎಂದು ತಿಳಿಸಿದ್ದಾರೆ. ಸದ್ಯ ಕೆಂಪೇಗೌಡ ಏರ್​​​ಪೋರ್ಟ್ ಪೊಲೀಸರು ಮತ್ತು ಅಧಿಕಾರಿಗಳಿಗೆ ಈ ಹುಸಿ‌ ಬಾಂಬ್ ಮೇಲ್ ಮತ್ತು ಕರೆಗಳು ತಲೆ ನೋವಾಗಿದ್ದು, ಹುಸಿ‌ ಬಾಂಬ್ ಬೆದರಿಕೆ ಬಂದ ಮೇಲ್ ಐಡಿಗಳ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಾಗೆಯೇ ಬೆಂಗಳೂರಿನ ಪುಲಕೇಶಿ ನಗರ ಠಾಣಾ ವ್ಯಾಪ್ತಿಯ  ಪಾಟರಿ ರಸ್ತೆಯಲ್ಲಿರುವ ಕ್ಲಾರೆನ್ಸ್ ಖಾಸಗಿ ಶಾಲೆಗೂ ಬೆದರಿಕೆ ಇ-ಮೇಲ್ ಬಂದಿದೆ ಎನ್ನಲಾಗಿದೆ.  ನಿಮ್ಮ ಸ್ಕೂಲ್ ನಲ್ಲಿ ಬಾಂಬ್ ಇಟ್ಟಿದ್ದೇವೆ ಎಂದು ಬೆದರಿಕೆ ಇಮೇಲ್ ಬಂದಿದ.

ಇತ್ತೀಚೆಗೆ ಹಾಸನದ ಮೂರು ಖಾಸಗಿ ಶಾಲೆಗೆ, ಮೈಸೂರಿನ ಖಾಸಗಿ ಶಾಲೆಗೆ, ಬೆಂಗಳೂರಿನ ಹಲವು ಶಾಲೆಗಳು ಮತ್ತು ಪ್ರತಿಷ್ಠಿತ ಹೋಟೆಲ್​​ ಗಳಿಗೂ ಬಾಂಬ್​​ ಬೆದರಿಕೆ ಬಂದಿತ್ತು.vtu

Key words: Fake bomb, threat mail, Kempegowda Airport

The post ಕೆಂಪೇಗೌಡ ಏರ್​​​ಪೋರ್ಟ್​ಗೆ ಹುಸಿ ಬಾಂಬ್​ ಮೇಲ್ ಬೆದರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆಡಿಯೋ ವೈರಲ್ ವಿಚಾರ: ನಾನು ಏನೂ ಮಾತನಾಡಲ್ಲ- ಮಾಜಿ ಸಿಎಂ ಸದಾನಂದಗೌಡ

ಬೆಂಗಳೂರು,ಜೂನ್,29,2026 (www.justkannada.in): ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ತೆಗೆದುಹಾಕುವಂತೆ ದೆಹಲಿ...

ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10  ಮಂದಿಯ ಸ್ಥಿತಿ ಗಂಭೀರ

ಚಾಮರಾಜನಗರ,ಜೂನ್,29,2026 (www.justkannada.in):   ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು...

ವಿದ್ಯುತ್ ನಿಗಮಗಳ ಖಾಸಗೀಕರಣ ಬೇಡ ಎನ್ನುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಜೂನ್,29,2026 (www.justkannada.in): “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ...

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ-ಕೇಂದ್ರ ಸಚಿವ ವಿ. ಸೋಮಣ್ಣ

ಬೆಂಗಳೂರು,ಜೂನ್,29,2026 (www.justkannada.in):  ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ...