2
May, 2026

A News 365Times Venture

2
Saturday
May, 2026

A News 365Times Venture

ಕೆಂಪೇಗೌಡ ಜಯಂತಿ ಆಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ- ಸೋಮನಾಥೇಶ್ವರ ನಾಥ ಸ್ವಾಮೀಜಿ ಕರೆ

Date:

ಮೈಸೂರು,ಜೂನ್,7,2025 (www.justkannada.in):  ಜೂನ್ 27 ರಂದು ಅರ್ಥಪೂರ್ಣವಾಗಿ ಕೆಂಪೇಗೌಡ ಜಯಂತಿ ಆಚರಿಸಲು ಎಲ್ಲರೂ ಒಮ್ಮತದಿಂದ ನಿರ್ಧರಿಸಿದ್ದೇವೆ.  ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಸಮುದಾಯಕ್ಕೆ ಶಕ್ತಿ ತುಂಬಬೇಕೆಂದು ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥೇಶ್ವರನಾಥ ಸ್ವಾಮೀಜಿ  ಕರೆ ನೀಡಿದರು.

ಮೈಸೂರಿನ ಹೆಬ್ಬಾಳ್ ನ ಮಠದಲ್ಲಿ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೋಮನಾಥೇಶ್ವರನಾಥ ಸ್ವಾಮೀಜಿ, ಪ್ರತಿ ಬಾರಿಯೂ ಕೆಂಪೇಗೌಡ ಜಯಂತಿ ಅದ್ಧೂರಿಯಾಗಿ ನಡೆಯುತ್ತದೆ. ಆದರೆ, ಕಾರ್ಯಕ್ರಮ ಯಶಸ್ವಿಯಾಗಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದಾಗ ಮಾತ್ರವೇ ಅದು ಅರ್ಥಪೂರ್ಣ ಆಗುತ್ತದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಮೊಹಲ್ಲಾ ಹಾಗೂ ತಾಲ್ಲೂಕಿನ ಗ್ರಾಮೀಣ ಭಾಗದಿಂದಲೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ. ಈ ಬಾರಿ ಮೊದಲಿಗೆ ಲಲಿತ್ ಮಹಲ್ ನಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಸಾಂಕೇತಿಕವಾಗಿ ಕೋಟೆ ಆಂಜನೇಯಸ್ವಾಮಿ ದೇವಾಲಯದವರೆಗೆ ಮೆರವಣಿಗೆ ಬರಲಿದೆ. ಬಳಿಕ ಮೆರವಣಿಗೆ ವಿದ್ಯುಕ್ತ ಚಾಲನೆ ನೀಡಿ ಕಲಾಮಂದಿರದವರೆಗೆ ಮೆರವಣಿಗೆ ಬರಲಿದೆ ಕಾರ್ಯಕ್ರಮಕ್ಕೆ ಸ್ಚಯಂ ಪ್ರೇರಿತರಾಗಿ ಆಗಮಿಸಿ ಎಂದರು.

ಶಾಸಕ ಕೆ.ಹರೀಶ್ ಗೌಡ ಮಾತನಾಡಿ, ಕೆಂಪೇಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ಯಾವೆಲ್ಲಾ ಸಹಕಾರ ಬೇಕು ಅದನ್ನು ನೀಡಲು ನಾನು ಸಿದ್ದರಿದ್ದೇವೆ.‌ ಸಮುದಾಯದ ವಿಚಾರ ಬಂದಾಗ ನಾನಾಗಲಿ ಮಾಜಿ ಶಾಸಕ  ನಾಗೇಂದ್ರ ಅವರಾಗಲಿ ಸಮುದಾಯದ ಪರವಾಗಿದ್ದೇವೆ. ಸಮುದಾಯದ ವಿಚಾರದಲ್ಲಿ ರಾಜೀಯಾಗುವ ಪ್ರಶ್ನೆಯೇ ಇಲ್ಲ. ಸಮುದಾಯ ಯಾವುದೇ ಇರಲಿ ಆ ಸಮುದಾಯ ಸಂಘಟನೆ ಪ್ರದರ್ಶನ ಮಾಡದಿದ್ದರೆ ಆ ಸಮುದಾಯ ಹಿಂದೆ ಉಳಿಯಲಿದೆ‌. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದರು.

ಮಾಜಿ ಶಾಸಕ ಎಲ್.ನಾಗೇಂದ್ರ ಮಾತನಾಡಿ, ಪಕ್ಷಾತೀತವಾಗಿ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಅಲ್ಲದೆ ಎಲ್ಲರ ಸಹಕಾರ ಕೆಂಪೇಗೌಡ ಜಯಂತಿ ಆಚರಣೆಗೆ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಒಕ್ಕಲಿಗರ ಸಂಘ ವಿವಿಧ ಸಂಘಗಳನ್ನು ಜತೆಗೂಡಿಸಿಕೊಂಡು ಎಲ್ಲರನ್ನೂ ಆಹ್ವಾನಿಸುವ ಕೆಲಸ ಮಾಡಲಿ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ಕೆಂಪೇಗೌಡ ಜಯಂತಿ ಯಶಸ್ವಿಗೊಳಿಸುವಂತೆ ಹೇಳಿದರು.

ಸಭೆಯಲ್ಲಿ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದಿಂದ ಕೆಂಪೇಗೌಡ ಆಚರಣಾ ಸಮಿತಿ ಅಧ್ಯಕ್ಷರನ್ನಾಗಿ ಸಂಘದ ನಿರ್ದೇಶಕ ಪಿ.ಪ್ರಶಾಂತ್‌ ಗೌಡ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಮಾಜಿ ಮೇಯರ್‌ ಪುಷ್ಪಲತಾ ಜಗನ್ನಾಥ್‌, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಸಿ.ಜಿ.ಗಂಗಾಧರ್‌ಗೌಡ, ಕೆ.ವಿ.ಶ್ರೀಧರ್‌, ಎಂ.ಬಿ.ಮಂಜೇಗೌಡ, ಮೈಸೂರು-ಚಾಮರಾಜನಗರ ಒಕ್ಕಲಿಗರ ಸಂಘದ ಅಧ್ಯಕ್ಷ ಪಿ.ಮರಿಸ್ವಾಮಿ, ಗೌರವಾಧ್ಯಕ್ಷ ಅಲತೂರು ಜಯರಾಮ್, ಪ್ರಧಾನ ಕಾರ್ಯದರ್ಶಿ ಚೇತನ್‌ ಎಂ ಈ , ಖಚಾಂಚಿ ಆರ್ ಲೋಕೇಶ್, ನಿರ್ದೇಶಕ ನಾಗಣ್ಣ,ಪ್ರಕಾಶ್ ಎನ್,ಉಮೇಶ್, ಬೋರೇಗೌಡ, ಎ ರವಿ, ಗುರುರಾಜ್‌, ಕುಮಾರಗೌಡ, ಸುಶೀಲಾ ನಂಜಪ್ಪ, ಗಿರೀಶ್‌ ಗೌಡ, ಒಕ್ಕಲಿಗ ಸಂಘ ಪೂರ್ವ ವಲಯದ ಅಧ್ಯಕ್ಷ  ಸುರೇಶ್ ಗೌಡ ,ಕೆಪಿಸಿಸಿ ಮಾದ್ಯಮ ವಕ್ತಾರ ಎಂ.ಲಕ್ಷ್ಮಣ್‌, ಬಿಜೆಪಿ ಮುಖಂಡ ಸುಶ್ರೂತ್‌ ಗೌಡ, ಕವೀಶ್‌ ಗೌಡ ವಾಸು, ಜೆಡಿಎಸ್‌ ಮುಖಂಡ ಎಚ್‌.ಕೆ.ರಾಮು, ಮೈಸೂರು ವಕೀಲರ ಸಂಘದ ಅಧ್ಯಕ್ಷ  ಎಸ್ ಲೋಕೇಶ್ ,ಕರ್ನಾಟಕ ಕಾವಲುಪಡೆ ರಾಜ್ಯಾಧ್ಯಕ್ಷ ಮೋಹನ್‌ಕುಮಾರ್‌ ಗೌಡ, ನಗರಪಾಲಿಕೆ ಮಾಜಿ ಸದಸ್ಯ ಎಸ್‌ ಬಿಎಂ ಮಂಜು, ಪ್ರೇಮಾಶಂಕರೇಗೌಡ, ಅಶ್ವಿನಿ ಅನಂತು, ಮೋದಮಣಿ, ಮಂಜುಳಾ ಮಾನಸ, ಜಿಪಂ ಮಾಜಿ ಸದಸ್ಯ ಮಾದೇಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯೆ ಲಕ್ಷ್ಮಿದೇವಿ, ನಮ್ಮೂರು ನಮ್ಮೋರು ಟ್ರಸ್ಟ್‌ ಅಧ್ಯಕ್ಷ ಬೀಡನಹಳ್ಳಿ ಸತೀಶ್‌ಗೌಡ, ಮೈಸೂರು  ಕೋ ಅಪರೇಟಿವ್‌ ಬ್ಯಾಂಕ್‌ ಅಧ್ಯಕ್ಷ ಯೋಗೇಶ್,
ಮೈಸೂರು ಚಾಮರಾಜನಗರ ಒಕ್ಕಲಿಗರ ಸಂಘದ ಮಾಜಿ ಉಪಾಧ್ಯಕ್ಷ ವಿಕ್ರಾಂತ್ ಪಿ ದೇವೇಗೌಡ, ರಾಜಕುಮಾರ್, ನೇಗಿಲಯೋಗಿ ರವಿಕುಮಾರ್, ಸಿದ್ಧರ್ಥಾನಗರ ಒಕ್ಕಲಿಗ ಶಂಕಿ ಗೌಡ ಹಾಗೂ ಮೈಸೂರಿನ ವಿವಿಧ ಒಕ್ಕಲಿಗ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ವಿವಿಧ ಮೈಸೂರಿನ ಮಹಿಳಾ ಒಕ್ಕಲಿಗ ಸಂಘದ ನಿರ್ದೇಶಕರು, ಸದಸ್ಯರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

vtu

Key words: Mysore, Somnatheshwarnath Swamiji, June 27th, Kempegowda Jayanti

The post ಕೆಂಪೇಗೌಡ ಜಯಂತಿ ಆಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ- ಸೋಮನಾಥೇಶ್ವರ ನಾಥ ಸ್ವಾಮೀಜಿ ಕರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ: ಕುಡಿಯುವ ನೀರಿನ ಬಗ್ಗೆ ನಿರಂತರ ನಿಗಾ ವಹಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಮೇ,2,2026 (www.justkannada.in): ತಮ್ಮ ವ್ಯಾಪ್ತಿಯ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ...

ಕಲಬುರಗಿ ಡಿಸಿ ಸೇರಿ ನಾಲ್ವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು,ಮೇ,2,2026 (www.justkannada.in): ಕಲಬುರಗಿ ಜಿಲ್ಲೆ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರಣಮ್ ಬಿ ಅವರನ್ನು...

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

ಬೆಂಗಳೂರು,ಮೇ,2,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ...

ಬಿಎಸ್ ವೈ ಅಭಿಮಾನೋತ್ಸವದಿಂದ  ರಾಜಕೀಯ ಲಾಭದಾಸೆ ನನಗೆ ಇಲ್ಲ- ಬಿವೈ ವಿಜಯೇಂದ್ರ

ಮೈಸೂರು,ಮೇ,2,2026 (www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜಕಾರಣಕ್ಕೆ ಕಾಲಿಟ್ಟು 50...