25
July, 2026

A News 365Times Venture

25
Saturday
July, 2026

A News 365Times Venture

ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ವಿದ್ಯಾರ್ಥಿ- ಯುವಜನರ ಗೆಲುವಾಗಿದೆ- ಮಾಜಿ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,25,2026 (www.justkannada.in): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ.

ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ. ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಪೊಲೀಸರ ದೌರ್ಜನ್ಯದಿಂದಲೂ ಪ್ರಚೋದನೆಗೆ ಒಳಗಾಗದೆ ಶಾಂತಿಯುತ ಹೋರಾಟವನ್ನು ನಡೆಸಿದ ಲಕ್ಷಾಂತರ ವಿದ್ಯಾರ್ಥಿ-ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶಿಕ್ಷಣ ಸಚಿವರ ರಾಜೀನಾಮೆಯಿಂದ ಶಿಕ್ಷಣ ಕ್ಷೇತ್ರದ ಸರ್ವ ಸಮಸ್ಯೆಗಳು ಪರಿಹಾರವಾಗಲಾರದು. ಸರ್ವಾಧಿಕಾರ ಮತ್ತು ದುರಾಡಳಿತದ ಶಾಲೆಯ ಗುರುಗಳು ಕುರ್ಚಿಯಲ್ಲಿ ಭದ್ರವಾಗಿ ಕುಳಿತಿರುವಾಗ ಇಂತಹ ಶಿಷ್ಯರ ನಿರ್ಗಮನದಿಂದ ಶಾಲೆಯ ಸುಧಾರಣೆಯಾಗಲಾರದು. ರಾಜಕೀಯದಿಂದ ಶಿಕ್ಷಣದ ವರೆಗೆ ಎಲ್ಲವನ್ನೂ ವ್ಯಾಪಾರೀಕರಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಗಮಿಸುವವರೆಗೆ ಶಿಕ್ಷಣ ವ್ಯವಸ್ಥೆಯೂ ಸುಧಾರಣೆಯಾಗದು, ಭಾರತವೂ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲಾರದು.

ಈ ಹಿನ್ನೆಲೆಯಲ್ಲಿ ಒಬ್ಬ ಅಸಮರ್ಥ ಮತ್ತು ಭ್ರಷ್ಟ ಸಚಿವನ ರಾಜೀನಾಮೆಗಾಗಿ ಸಂಭ್ರಮಾಚರಣೆ ಮಾಡದೆ, ದೇಶದ ವಿದ್ಯಾರ್ಥಿ-ಯುವಜನರು ಕೇಂದ್ರದಲ್ಲಿರುವ ಅಸಮರ್ಥ ಮತ್ತು ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವವರೆಗೆ ವಿರಮಿಸಬಾರದು. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ಜನರ ಜೊತೆಗೆ ಇರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Key words: Union Minister, Dharmendra Pradhan, resignation, Former CM, Siddaramaiah

The post ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ವಿದ್ಯಾರ್ಥಿ- ಯುವಜನರ ಗೆಲುವಾಗಿದೆ- ಮಾಜಿ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ ಏಕಾದಶಿ ಸಂಭ್ರಮ: ಶ್ರೀ ಕೃಷ್ಣಧಾಮ ಮಠದಲ್ಲಿ ಭಕ್ತರಿಗೆ ಮುದ್ರಾಧಾರಣೆ

ಮೈಸೂರು,ಜುಲೈ,25,2026 (www.justkannada.in): ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ಮೈಸೂರಿನ...

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ.ಕೆ ಶಿವಕುಮಾರ್

ಚಿತ್ರದುರ್ಗ, ಜುಲೈ,25,2026 (www.justkannada.in):  ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ನಗರ...

ಕಾವೇರಿ ವಿವಾದ ಕುರಿತು ಆ.3ರಂದು ಸಭೆ: ತಮಿಳುನಾಡು ಸಿಎಂಗೆ ಕುರುಬೂರು ಶಾಂತಕುಮಾರ್ ಸಲಹೆ, ಮನವಿ

ಬೆಂಗಳೂರು,ಜುಲೈ,25,2026 (www.justkannada.in): ಕಾವೇರಿ ನೀರಿನ ವಿಚಾರ ಮೇಕೆದಾಟು ನಿರ್ಮಾಣ  ಸೌಹಾರ್ದ ಮಾತುಕತೆಗಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ನಾವು ಸಾಧಿಸಿದ್ದೇವೆ ಎಂದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ನವದೆಹಲಿ,ಜುಲೈ,25,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ...