10
June, 2026

A News 365Times Venture

10
Wednesday
June, 2026

A News 365Times Venture

‘ಕೈ’ನಾಯಕರು ದೇವೇಗೌಡರ ಕುರಿತು  ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ- ಬಿವೈ ವಿಜಯೇಂದ್ರ ಟಾಂಗ್

Date:

ಬೆಂಗಳೂರು,ಜೂನ್,9,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ವಿಚಾರಕ್ಕೆ ಬಿಜೆಪಿಯನ್ನ ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿವೈ ವಿಜಯೇಂದ್ರ,  ಕರ್ನಾಟಕದ ಕಾಂಗ್ರೆಸ್‌ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾ  ಹಾಗೂ ಕೆಪಿಸಿಸಿ ಅಧ್ಯಕ್ಷರು ಬಿಕೆ ಹರಿಪ್ರಸಾದ್ ‌ ಅವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ದೇಶದ ಅತ್ಯುನ್ನತ ಪ್ರಧಾನ ಮಂತ್ರಿ ಸ್ಥಾನವನ್ನು ಅಲಂಕರಿಸಿ, ಹೆಮ್ಮೆಯ ಕ್ನನಡಿಗ ಎನಿಸಿಕೊಂಡಿದ್ದ ಸನ್ಮಾನ್ಯ  ಹೆಚ್ ಡಿ ದೇವೇಗೌಡ ಅವರನ್ನು ಪ್ರಧಾನಿ ಪದವಿಯಿಂದ ಕೆಳಗಿಳಿಸಿದ ಕುಖ್ಯಾತಿ ಕಾಂಗ್ರೆಸ್‌ ಪಕ್ಷದ ಮೇಲಿರುವುದನ್ನು ಕಾಂಗ್ರೆಸ್ ಮುಂದಾಳುಗಳು ಮರೆತಂತಿದೆ. ಮಾನ್ಯ ದೇವೇಗೌಡರನ್ನು ರಾಜಕೀಯ ಜೀವನದುದ್ದಕ್ಕೂ ಕಾಡಿದ್ದು, ಅವರ ಪಕ್ಷವನ್ನು ಇಬ್ಬಾಗ ಮಾಡಲು ಯತ್ನಿಸಿದ್ದು ಕಾಂಗ್ರೆಸ್. ಇಷ್ಟಾಗಿಯೂ ಕೊಳಕು ರಾಜಕಾರಣ ಮಾಡುವುದನ್ನು ನಿಲ್ಲಿಸದ ಕಾಂಗ್ರೆಸ್ಸಿಗರು, ದೇವೇಗೌಡರ ಕುರಿತು ಕೃತಕ ಕಾಳಜಿಯ ಮಾತನಾಡುತ್ತಿರುವ ಪರಿ ಹಾಸ್ಯಾಸ್ಪದವಾಗಿದೆ ಎಂದು ಬಿವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಭಾರತೀಯ ಜನತಾ ಪಾರ್ಟಿಯು ಸನ್ಮಾನ್ಯ ದೇವೇಗೌಡ ಅವರನ್ನು ಅತ್ಯಂತ ಗೌರವದಿಂದ ನಡೆಸಿಕೊಂಡಿದೆ. ಭಾರತದ ಸಮಗ್ರತೆ ಉಳಿಯಬೇಕಾದರೆ, ಅಭಿವೃದ್ಧಿ ಹೊಂದಬೇಕಾದರೆ ಅದು ಪ್ರಧಾನಿ ನರೇಂದ್ರ ಮೋದಿಜೀ ಅವರ ಆಡಳಿತದಿಂದ ಮಾತ್ರ ಸಾಧ್ಯ ಎಂಬ ನಂಬಿಕೆಯಿಂದ ದೇವೇಗೌಡ ಅವರು ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸಿ, NDA ಗೆ ತಮ್ಮ  ಜೆಡಿಎಸ್ ಪಕ್ಷವನ್ನು ಸೇರಿಸಿದ್ದಾರೆ. ಇದನ್ನು ಕಂಡು ಸಹಿಸಲಾಗದ ಸ್ಥಿತಿಯಲ್ಲಿರುವ ಕಾಂಗ್ರೆಸ್ಸಿಗರು ದೇವೇಗೌಡರ ಹೆಸರನ್ನು ಬಳಸಿಕೊಂಡು ರಾಜಕಾರಣ ಮಾಡಲು ಹೊರಟಿರುವುದು ನಾಚಿಗೆಗೇಡಿತನದ ಪರಮಾವಧಿಯಾಗಿದೆ.

ಅವರ ಹಿರಿತನ, ಸೇವೆ ಉಲ್ಲೇಖಿಸಿ ಸಂಸತ್ತಿನಲ್ಲಿ ಸ್ವತಃ ಪ್ರಧಾನ ಮಂತ್ರಿಗಳೇ ಭಾವುಕವಾಗಿ ಮಾತನಾಡಿ ಅವರ ಕೊಡುಗೆ, ಸಾಧನೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ರಾಷ್ಟವನ್ನು ಮುನ್ನಡೆಸುವ ನಿಟ್ಟಿನಲ್ಲಿ ಅವರ ಮಾರ್ಗದರ್ಶನ ಸದಾ ನಮಗೆ ಬೇಕೆಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಅತ್ಯುತ್ತಮ ರಾಜಕೀಯ ಹಾಗೂ ವ್ಯಕ್ತಿಗತ ಗೌರವಗಳ ಬಾಂಧವ್ಯವಿರುವ ದೇವೇಗೌಡರೊಂದಿಗಿನ ಸಂಬಂಧಕ್ಕೆ ಹುಳಿ ಹಿಂಡುವ ಮಾತುಗಳು ‘ಕಾಂಗ್ರೆಸ್ಸಿಗರ ವಿಕೃತ ನಡೆ‘ ಎನ್ನುವುದನ್ನು ಕರ್ನಾಟಕದ ಜನತೆ ಅರ್ಥೈಸಿಕೊಳ್ಳದಷ್ಟು ಮುಗ್ಧರಲ್ಲ ಎನ್ನುವ ತಿಳುವಳಿಕೆ ಕಾಂಗ್ರೆಸ್ಸಿಗರಿಗಿರಲಿ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

Key words: BJP, BY Vijayendra, Former PM, HD Devegowda, Congress

The post ‘ಕೈ’ನಾಯಕರು ದೇವೇಗೌಡರ ಕುರಿತು  ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ- ಬಿವೈ ವಿಜಯೇಂದ್ರ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಚಿವ ಸ್ಥಾನದಲ್ಲಿ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಮಧು ಬಂಗಾರಪ್ಪ

ಶಿವಮೊಗ್ಗ,ಜೂನ್,9,2026 (www.justkannada.in):  ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನ...

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಸ್ಪದ ಸಾವು

ಮಂಡ್ಯ,ಜೂನ್,9,2026 (www.justkannada.in): ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ...

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; 10 ಮಂದಿ ಬಂಧನ

ದಾವಣಗೆರೆ,ಜೂನ್,9,2026 (www.justkannada.in):  ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ವಿವಾಹಿತ...

ವಿರಾಜಪೇಟೆ ಮಂಡಲ ಬಿಜೆಪಿ ಕಚೇರಿ ಉದ್ಘಾಟಿಸಿದ ಸಂಸದ ಯದುವೀರ್

ಕೊಡಗು,ಜೂನ್,9,2026 (www.justkannada.in): ಗೋಣಿಕೊಪ್ಪ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿರುವ ಟಾಸ್...