4
March, 2026

A News 365Times Venture

4
Wednesday
March, 2026

A News 365Times Venture

ಕ್ಯಾಬಿನೆಟ್ ಮೀಟಿಂಗ್: ಬಹುಮಹಡಿ ಕಟ್ಟಡಗಳಿಗೆ 1% ಸೆಸ್ ಸೇರಿ ಹಲವು ಮಹತ್ವದ ನಿರ್ಧಾರ

Date:

ಬೆಂಗಳೂರು, ಜುಲೈ 24,2025 (www.justkannada.in):  ಆಸ್ಪತ್ರೆ, ಕಾಲೇಜು ಸೇರಿ ಬಹುಮಹಡಿ ಕಟ್ಟಡಗಳಿಗೆ 1% ‘ಸೆಸ್’ ವಿಧಿಸಲು  ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಅಗ್ನಿಶಾಮಕ ದಳದ ಕಾಯ್ದೆ ಅನ್ವಯವಾಗುವ ಬಹುಮಹಡಿ ಕಟ್ಟಡಗಳಿಗೆ 1 % ಸೆಸ್ ವಿಧಿಸಲು ನಿರ್ಧರಿಸಲಾಗಿದೆ. ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು, ಅಪಾರ್ಟ್ಮೆಂಟ್​​ಗಳು ಸೇರಿ ಎತ್ತರದ ಬಹುಮಹಡಿ ಕಟ್ಟಡಗಳಿಗೆ ಸೆಸ್ ವಿಧಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ 10 ಕೋಟಿ ರೂ. ಅಂದಾಜು ಮೊತ್ತದಲ್ಲಿ ಸ್ಪೇಸ್‌ಟೆಕ್‌ ಕೇಂದ್ರ ಸ್ಥಾಪಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಕರ್ನಾಟಕ ಜಾಗತಿಕ ಸಾಮರ್ಥ್ಯ ಕೇಂದ್ರ ನೀತಿ 2024-29 ತಿದ್ದುಪಡಿ ಮಾಡಲು ಅನುಮೋದನೆ ನೀಡಲಾಗಿದೆ. ರಾಯಚೂರಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣಕ್ಕೆ  ಸಂಬಂಧಿಸಿದಂತೆ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿಯನ್ನು ಅಂಗೀಕರಿಸಲಾಗಿದ್ದು,  ಘಟನೆಗೆ ಸಂಬಂಧಿಸಿದ ಖಾಸಗಿ ಸಂಸ್ಥೆ ವಿರುದ್ದ ಕಾನೂನು ಕ್ರಮ ಜರುಗಿಸಲಾಗುತ್ತದೆ. ಸಂಬಂಧಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಹೆಚ್.ಕೆ ಪಾಟೀಲ್ ತಿಳಿಸಿದರು.vtu

Key words: Cabinet meeting, decisions, 1% cess, multi-storey buildings

The post ಕ್ಯಾಬಿನೆಟ್ ಮೀಟಿಂಗ್: ಬಹುಮಹಡಿ ಕಟ್ಟಡಗಳಿಗೆ 1% ಸೆಸ್ ಸೇರಿ ಹಲವು ಮಹತ್ವದ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...