ಹುಬ್ಬಳ್ಳಿ,ಫೆಬ್ರವರಿ,24,2026 (www.justkannada.in): ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ರಾಜ್ಯಕಾಂಗ್ರೆಸ್ ಸರ್ಕಾರದ ವಿರುದ್ದ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಕಿಚ್ಚು ಭುಗಿಲೆದ್ದಿದ್ದು ಸಾವಿರಾರು ಜನ ವಿದ್ಯಾರ್ಥಿಗಳು ಜಮಾಯಿಸಿ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬೆನ್ನಲ್ಲೆ ಇದೀಗ ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ, ಬಿಜೆಪಿ ಸರ್ಕಾರ ಇದ್ದಾಗ ಒಂದೇ ಒಂದು ಭರ್ತಿ ಮಾಡಿಲ್ಲ. ಖಾಲಿ ಹುದ್ದೆಗಳ ಭರ್ತಿ ಮಾಡಲು ನಮ್ಮ ಸರ್ಕಾರ ಬದ್ಧವಿದೆ ಎಂದು ಭರವಸೆ ನೀಡಿದ್ದಾರೆ.
ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಹ ಹೇಳಿದ್ದಾರೆ. ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಬಗ್ಗೆ ಈಗಾಗಲೇ ಗೃಹ ಸಚಿವ ಪರಮೇಶ್ವರ್ ಕೂಡ ಹೇಳಿದ್ದಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ತಿಳಿಸಿದ್ದಾರೆ.
Key words: Our government, filling, vacant posts, MLA, Prasad Abbayya
The post ಖಾಲಿ ಹುದ್ದೆಗಳ ಭರ್ತಿಗೆ ನಮ್ಮ ಸರ್ಕಾರ ಬದ್ಧ- ಶಾಸಕ ಪ್ರಸಾದ್ ಅಬ್ಬಯ್ಯ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




