30
July, 2025

A News 365Times Venture

30
Wednesday
July, 2025

A News 365Times Venture

ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿ- ಬಿಜೆಪಿಗೆ ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ತಿರುಗೇಟು

Date:

ಮೈಸೂರು,ಮಾರ್ಚ್,13,2025 (www.justkannada.in):  ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಬಿಜೆಪಿ ನಾಯಕರ ವಿರೋಧಕ್ಕೆ  ಕಿಡಿಕಾರಿರುವ ಎಐಸಿಸಿ ವಕ್ತಾರೆ ಭವ್ಯ  ನರಸಿಂಹಮೂರ್ತಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿಯಾಗಿದೆ. ಬೇಕಿದ್ದರೇ ಜನಸಾಮಾನ್ಯರ ಬಳಿ ಬಂದು ನೋಡಿ ಎಂದು ತಿರುಗೇಟು ನೀಡಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಭವ್ಯ ನರಸಿಂಹಮೂರ್ತಿ,  ಆರ್ ಅಶೋಕ್ ಅವರು ವಿಧಾನಸೌಧದ ಕುಳಿತು  ಮಾತಾನಾಡುವುದಲ್ಲ. ಬನ್ನಿ ಜನಸಾಮಾನ್ಯರ ಹತ್ತಿರ, ಬೀದಿಗೆ ಬಂದು ನೋಡಿ. ಸುಮ್ಮನೆ ಬಾಯಿಗೆ ಬಂದ ಹಾಗೆ ಮಾತನಾಡೋದಲ್ಲ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿಯೇ ಆಗುತ್ತಿದೆ. ಆರ್ಥಿಕ, ಸಾಮಾಜಿಕ, ಧಾರ್ಮಿಕ ಸಬಲೀಕರಣ ಆಗುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರಿಗೆ ಹಲವು ರೀತಿಯಲ್ಲಿ ಉಪಯೋಗವಾಗುತ್ತಿದೆ. ಮಹಿಳೆ ಆ ಎರಡು ಸಾವಿರ ರೂಪಾಯಿ ಖರ್ಚು ಮಾಡುವ ಸ್ವಾತಂತ್ರ್ಯ ಅವಳಿಗಿದೆ. ಅವಳ ಆರೋಗ್ಯ ನೋಡಿಕೊಳ್ಳಲಿಕ್ಕೆ ಅನುಕೂಲ ಆಗುತ್ತದೆ. ಸಿದ್ದರಾಮಯ್ಯ ಹಸಿವು ಮುಕ್ತ ಕರ್ನಾಟಕ ಮಾಡಲು ಅನ್ನಭಾಗ ತಂದರು‌.  ಆದರೆ ಬಿಜೆಪಿಯವರದ್ದು ಹಾರಿಸ್ಟೋಕ್ರೇಟಿಕ್ ಮೈಂಡ್ ಸೆಟ್. ರಾಜ್ಯದಲ್ಲಿ ಆರ್ಥಿಕ ಭದ್ರತೆ, ಆಹಾರ ಭದ್ರತೆ ಸಿಕ್ಕಿದೆ ಎಂದರು.

ಗ್ಯಾರಂಟಿ ಸಮಿತಿ ರಚನೆ ಮಾಡಿ ಒಂದುವರೆ ವರ್ಷ ಆಗಿದೆ. ಈಗ ಯಾಕೆ ಬಿಜೆಪಿಯವರು ವಿರೋಧ ಮಾಡುತ್ತಿದ್ದಾರೆ. ಪ್ರತಿಯೊಬ್ಬ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಲು ಗ್ಯಾರಂಟಿ ಸಮಿತಿ ಬೇಕೇ ಬೇಕು ಎಂದು ಭವ್ಯ ನರಸಿಂಹಮೂರ್ತಿ ತಿಳಿಸಿದರು.

Key words: AICC, Bhavya NarasimhaMurthy, guarantee schemes, mysore

The post ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿ- ಬಿಜೆಪಿಗೆ ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ...

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...