11
March, 2026

A News 365Times Venture

11
Wednesday
March, 2026

A News 365Times Venture

ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿ- ಬಿಜೆಪಿಗೆ ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ತಿರುಗೇಟು

Date:

ಮೈಸೂರು,ಮಾರ್ಚ್,13,2025 (www.justkannada.in):  ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಬಿಜೆಪಿ ನಾಯಕರ ವಿರೋಧಕ್ಕೆ  ಕಿಡಿಕಾರಿರುವ ಎಐಸಿಸಿ ವಕ್ತಾರೆ ಭವ್ಯ  ನರಸಿಂಹಮೂರ್ತಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿಯಾಗಿದೆ. ಬೇಕಿದ್ದರೇ ಜನಸಾಮಾನ್ಯರ ಬಳಿ ಬಂದು ನೋಡಿ ಎಂದು ತಿರುಗೇಟು ನೀಡಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಭವ್ಯ ನರಸಿಂಹಮೂರ್ತಿ,  ಆರ್ ಅಶೋಕ್ ಅವರು ವಿಧಾನಸೌಧದ ಕುಳಿತು  ಮಾತಾನಾಡುವುದಲ್ಲ. ಬನ್ನಿ ಜನಸಾಮಾನ್ಯರ ಹತ್ತಿರ, ಬೀದಿಗೆ ಬಂದು ನೋಡಿ. ಸುಮ್ಮನೆ ಬಾಯಿಗೆ ಬಂದ ಹಾಗೆ ಮಾತನಾಡೋದಲ್ಲ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿಯೇ ಆಗುತ್ತಿದೆ. ಆರ್ಥಿಕ, ಸಾಮಾಜಿಕ, ಧಾರ್ಮಿಕ ಸಬಲೀಕರಣ ಆಗುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರಿಗೆ ಹಲವು ರೀತಿಯಲ್ಲಿ ಉಪಯೋಗವಾಗುತ್ತಿದೆ. ಮಹಿಳೆ ಆ ಎರಡು ಸಾವಿರ ರೂಪಾಯಿ ಖರ್ಚು ಮಾಡುವ ಸ್ವಾತಂತ್ರ್ಯ ಅವಳಿಗಿದೆ. ಅವಳ ಆರೋಗ್ಯ ನೋಡಿಕೊಳ್ಳಲಿಕ್ಕೆ ಅನುಕೂಲ ಆಗುತ್ತದೆ. ಸಿದ್ದರಾಮಯ್ಯ ಹಸಿವು ಮುಕ್ತ ಕರ್ನಾಟಕ ಮಾಡಲು ಅನ್ನಭಾಗ ತಂದರು‌.  ಆದರೆ ಬಿಜೆಪಿಯವರದ್ದು ಹಾರಿಸ್ಟೋಕ್ರೇಟಿಕ್ ಮೈಂಡ್ ಸೆಟ್. ರಾಜ್ಯದಲ್ಲಿ ಆರ್ಥಿಕ ಭದ್ರತೆ, ಆಹಾರ ಭದ್ರತೆ ಸಿಕ್ಕಿದೆ ಎಂದರು.

ಗ್ಯಾರಂಟಿ ಸಮಿತಿ ರಚನೆ ಮಾಡಿ ಒಂದುವರೆ ವರ್ಷ ಆಗಿದೆ. ಈಗ ಯಾಕೆ ಬಿಜೆಪಿಯವರು ವಿರೋಧ ಮಾಡುತ್ತಿದ್ದಾರೆ. ಪ್ರತಿಯೊಬ್ಬ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಲು ಗ್ಯಾರಂಟಿ ಸಮಿತಿ ಬೇಕೇ ಬೇಕು ಎಂದು ಭವ್ಯ ನರಸಿಂಹಮೂರ್ತಿ ತಿಳಿಸಿದರು.

Key words: AICC, Bhavya NarasimhaMurthy, guarantee schemes, mysore

The post ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿ- ಬಿಜೆಪಿಗೆ ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...