24
April, 2026

A News 365Times Venture

24
Friday
April, 2026

A News 365Times Venture

ಚೆಲುವಾಂಬ ಆಸ್ಪತ್ರೆಗೆ ಭೇಟಿ: ಹತ್ತೇ ನಿಮಿಷದಲ್ಲಿ ರೋಗಿಗಳ ಬೇಡಿಕೆ ಪೂರೈಸಿದ ಸಂಸದ ಯದುವೀರ್‌

Date:

ಮೈಸೂರು, ಏಪ್ರಿಲ್,24,2026 (www.justkannada.in): ಇತ್ತೀಚಿನ ದಿನಗಳಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ಭೇಟಿ ನೀಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಮಗ್ರ ಪರಿಶೀಲನೆ ನಡೆಸಿ, ತಾಯಿ-ಮಕ್ಕಳ ಆರೈಕೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್, ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ  ಇಂಥ ಪ್ರಕರಣ ವರದಿಯಾಗಿರುವುದು ವಿಷಾದನೀಯ ಎಂದಿದ್ದಾರೆ.

ಮಾಧ್ಯಮಗಳಲ್ಲಿ ಬಂದ ವರದಿಗಳು ನೋಡಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ, ರೋಗಿಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ನಿರ್ಧರಿಸಿ ಇಲ್ಲಿಗೆ ಬಂದು ಪರಿಶೀಲನೆ ನಡೆಸಲಾಯಿತು ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ತೋರಬಾರದು. ಇದೇ ರೀತಿಯ ಧೋರಣೆ ಮುಂದುವರಿದರೆ ಕಾನೂನು ಕ್ರಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಸಂಸದ ಯದುವೀರ್ ವಿವರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಾಯಿತು. ಎನ್‌ ಐಸಿಯು ಘಟಕಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಎಲ್ಲ ವಿಭಾಗದಲ್ಲೂ ಎಲ್ಲ ವೈದ್ಯಕೀಯ ಸಾಧನಗಳನ್ನು ಸೂಕ್ತ ಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ನಿರ್ವಹಣೆಗಾಗಿ ಮೀಸಲಿರುವ ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಡೀನ್‌ ಮತ್ತು ವೈದ್ಯಾಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ವಿವರಿಸಿದ್ದಾರೆ.

ಹತ್ತೇ ನಿಮಿಷದಲ್ಲಿ ಬಿಸಿ ನೀರಿನ ಡಿಸ್ಪೆನ್ಸರ್‌ ಪೂರೈಸಿದ ಸಂಸದರು

ಇದೇ ಸಂದರ್ಭದಲ್ಲಿ ರೋಗಿಗಳೊಂದಿಗೆ ಸಂಸದ ಯದುವೀರ್‌ ಒಡೆಯರ್‌ ಸಮಾಲೋಚನೆ ನಡೆಸಿದಾಗ ಬಿಸಿ ನೀರಿನ ವ್ಯವಸ್ಥೆ ಇಲ್ಲದಿರುವ ಬಗ್ಗೆ ದೂರು ಸಲ್ಲಿಸಿದರು.ಇದಕ್ಕೆ ಅತ್ಯಂತ ತುರ್ತಾಗಿ ಸ್ಪಂದಿಸಿದ ಸಂಸದ ಯದುವೀರ್‌ ಒಡೆಯರ್‌  ಕೂಡಲ್‌ ಬಿಸಿನೀರಿನ ಡಿಸ್ಪೆನ್ಸರ್‌ ಅನ್ನು ತಮ್ಮ ವೈಯಕ್ತಿಕ ಹಣದಿಂದ ತರಿಸಿ ರೋಗಿಗಳಿಗೆ ನೀಡಿದರು.

ಇದಕ್ಕೆ ಅಪಾರ ಆನಂದ ವ್ಯಕ್ತಪಡಿಸಿದ ರೋಗಿಗಳು, ಪೋಷಕರು, ನಮ್ಮ ಸಂಸದರು ಇಷ್ಟು ತ್ವರಿತವಾಗಿ ಈ ಸೌಲಭ್ಯ ಒದಗಿಸಿರುವುದು ನಿಜಕ್ಕೂ ಖುಷಿಯಾಗಿದೆ. ಈ ಸಂಸದರು ನಮಗೆ ಎಂದಿಗೂ ಇರಬೇಕು. ಇಂಥ ಸಹೃದಯ ಸಂಸದರಿಂದ ನಮಗೆ ಹಲವಾರು ಅನುಕೂಲಗಳಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜನಾನುರಾಗಿ ಸಂಸದರಿಂದ ಇನ್ನಷ್ಟು ಸೌಲಭ್ಯಗಳನ್ನು ಬಯಸುತ್ತೇವೆ. ಅವರು ನಮಗೆ ಎಲ್ಲ ವ್ಯವಸ್ಥೆ ಮಾಡಿಕೊಡುತ್ತಾರೆ. ಈ ರೀತಿಯ ಭರವಸೆಯನ್ನು ಸಂಸದ ಯದುವೀರ್‌ ಒಡೆಯರ್‌ ಈಡೇರಿಸಲಿದ್ದಾರೆ ಎಂದು ರೋಗಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಯದುವೀರ್‌ ಒಡೆಯರ್‌,  ತಮ್ಮ ಪೂರ್ವಿಕರು ಸ್ಥಾಪಿಸಿರುವ ಈ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗೆ ಆದ್ಯತೆ ನೀಡಲು ಎಲ್ಲರೂ ಬದ್ಧರಾಗಿರಬೇಕು. ರೋಗಿಗಳು ಹಾಗೂ ಪೋಷಕರು ಬಯಸಿದಂತೆ ಪ್ರತಿ ಎರಡು ಅಥವಾ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Key words: MP, Yaduveer Wodeyar, visited, inspected, Cheluvamba Hospital

The post ಚೆಲುವಾಂಬ ಆಸ್ಪತ್ರೆಗೆ ಭೇಟಿ: ಹತ್ತೇ ನಿಮಿಷದಲ್ಲಿ ರೋಗಿಗಳ ಬೇಡಿಕೆ ಪೂರೈಸಿದ ಸಂಸದ ಯದುವೀರ್‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ

ನವವದೆಹಲಿ,ಏಪ್ರಿಲ್,24,2026 (www.justkannada.in): ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ ಪಕ್ಷವನ್ನು...

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ ರಾಜ್ಯ...

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ

ತುಮಕೂರು,ಏಪ್ರಿಲ್,24,2026 (www.justkannada.in) :  ಮೇ 5ರ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ...

ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆ ಆಗಬಹುದು –ಸಲೀಂ ಅಹ್ಮದ್

ಹುಬ್ಬಳ್ಳಿ,ಏಪ್ರಿಲ್,24,2026 (www.justkannada.in):  ಮೇ 20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು...