27
August, 2026

A News 365Times Venture

27
Thursday
August, 2026

A News 365Times Venture

ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ನಿಖಿಲ್ ಕುಮಾರಸ್ವಾಮಿ ಕಿಡಿ

Date:

ಬೆಂಗಳೂರು,ಏಪ್ರಿಲ್,19,2025 (www.justkannada.in):  ಬೀದರ್ ಮತ್ತು ಶಿವಮೊಗ್ಗದಲ್ಲಿ  ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆಯನ್ನ ಖಂಡಿಸಿದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ, ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಎಂದು ಕಿಡಿಕಾರಿದರು.

ಈ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ,  ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ತಪ್ಪು.   ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದರು.

ಹಾಗೆಯೇ ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ಜರುಗಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ  ಆಗ್ರಹಿಸಿದರು.

Key words: CET Exam, Janivara, JDS Leader, Nikhil Kumaraswamy

 

The post ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ನಿಖಿಲ್ ಕುಮಾರಸ್ವಾಮಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ಅರಿತುಕೊಂಡಿಲ್ಲ-BJP ವಿರುದ್ದ ಸಚಿವ ಲಕ್ಷ್ಮಣ್ ಸವದಿ ಕಿಡಿ

ಬೆಂಗಳೂರು,ಆಗಸ್ಟ್,25,2026 (www.justkannada.in): ಈ ಬಾರಿ ಅಧಿವೇಶನದಿಂದ ಯಾವ ಅನುಕೂಲ ಆಗಿಲ್ಲ ಎಂಬ...

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...