29
April, 2026

A News 365Times Venture

29
Wednesday
April, 2026

A News 365Times Venture

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

Date:

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ. ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ  ಮಾಡುವಂತೆ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಜಲ್ ಜೀವನ್ ಮಿಷನ್ 2.0 ಕುರಿತಂತೆ  ಕೇಂದ್ರ ಜಲ ಶಕ್ತಿ ಸಚಿವ ಶ್ರೀ ಸಿ.ಆರ್.ಪಾಟೀಲ್ ಅವರೊಂದಿಗೆ ವೀಡಿಯೋ ಸಂವಾದ ನಡೆಸಿದ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು.

ಪ್ರತಿ ನಾಗರಿಕನಿಗೂ  ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರನ್ನು ಖಾತ್ರಿಪಡಿಸುವ  ಬದ್ಧತೆಯಿಂದ ಇಂದು ಇಲ್ಲಿ ನೆರೆದಿರುವ ಎಲ್ಲರಿಗೂ ಸ್ವಾಗತ ಕೋರುತ್ತೇನೆ. ದೇಶದಲ್ಲಿಯೇ ಎರಡನೇ ಅತ್ಯಂತ ಹೆಚ್ಚಿನ ಒಣಭೂಮಿ ಹೊಂದಿರುವ ರಾಜ್ಯವಾದ ಕರ್ನಾಟಕದಲ್ಲಿ  ನೀರಿಗಾಗಿ ಪರದಾಟವಿದೆಯಲ್ಲದೇ ಇದರೊಂದಿಗೆ  ರಾಜ್ಯದ ಹಲವು ಭಾಗಗಳಲ್ಲಿ ಆರ್ಸೆನಿಕ್ ಹಾಗೂ ಫ್ಲೋರೈಡ್ ಮಿಶ್ರಣದ ಸಮಸ್ಯೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮೀಣ ಕುಟುಂಬಗಳಿಗೆ ಕುಡಿಯಲು ಯೋಗ್ಯವಾದ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲಮೂಲಗಳ ಸುಧಾರಣೆ ಮತ್ತು ಬೃಹತ್ ನೀರಿನ ಸರಬರಾಜು ವ್ಯವಸ್ಥೆಗೆ ಆದ್ಯತೆ ನೀಡಿದ್ದೇವೆ ಎಂದರು.

ಕುಡಿಯುವ ನೀರಿನ ಕಾಮಗಾರಿಗಳ ಅನುಷ್ಠಾನದಲ್ಲಿ ಕರ್ನಾಟಕ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಗುಣಮಟ್ಟವನ್ನು ಕಾಯ್ದುಕೊಂಡಿದೆ.ಈ ಯೋಜನೆಯಡಿಯ ಪ್ರತಿಯೊಂದು ಕಾಮಗಾರಿಗಳನ್ನು ಮೂರನೇ ಏಜೆನ್ಸಿ ಮೂಲಕ ಪರಿಶೀಲನೆ ನಡೆಸಲಾಗುತ್ತಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗಿದೆ.

ನಾವು ಇದುವರೆಗೆ 101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ ಕಲ್ಪಿಸಿದ್ದು, ಶೇ.86.93 ರಷ್ಟು ಪ್ರಗತಿ ಸಾಧಿಸಿದ್ದೇವೆ. ಈಗಾಗಲೇ ಕೈಗೊಳ್ಳಲಾಗಿರುವ 66,344 ಕಾಮಗಾರಿಗಳ ಪೈಕಿ ಸುಮಾರು 48,789 ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿವೆ. ಇದರಲ್ಲಿ ಗ್ರಾಮಗಳಲ್ಲಿ 28,809 ಕಾಮಗಾರಿಗಳು ಗ್ರಾಮಗಳಲ್ಲಿ ಹಾಗೂ 19,980 ಕಾಮಗಾರಿಗಳು ಶಾಲೆ, ಅಂಗನವಾಡಿಗಳಲ್ಲಿ ಕೈಗೊಳ್ಳಲಾಗಿದ್ದು, ಗ್ರಾಮೀಣ ಮಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ.

ಆದರೆ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ, ಕರ್ನಾಟಕ ರೂ.17,554.63 ಕೋಟಿ ಬಂಡವಾಳ ಹೂಡಿದೆ. ಇದರಲ್ಲಿ ಕೇಂದ್ರದ ಪಾಲಿನ ನಿರೀಕ್ಷೆಯಲ್ಲಿ ಹೂಡಲಾಗಿರುವ ರೂ.8,880.71 ಕೋಟಿಯೂ ಸೇರಿದ್ದು, ಯೋಜನೆಗಳ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ಯೋಜನೆ ಅನುಷ್ಠಾನದಲ್ಲಿ ರಾಜ್ಯ ಯಾವುದೇ ರಾಜಿ ಮಾಡದೆ, ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದರೂ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದು ದುರದೃಷ್ಟಕರ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಆಯವ್ಯಯದಲ್ಲಿ ಹಂಚಿಕೆ ಮಾಡಿದ್ದರೂ, ಕಳೆದ ಎರಡು ವರ್ಷಗಳಿಂದ ಕರ್ನಾಟಕಕ್ಕೆ ಅನುದಾನ ಬಿಡುಗಡೆ ಮಾಡಿರುವುದಿಲ್ಲ. ಆದರೂ ರಾಜ್ಯ ಸರ್ಕಾರ ಕೇಂದ್ರದ ಪಾಲಿನ ಅನುದಾನವನ್ನು ಭರಿಸಿ, ಯೋಜನೆ ಅನುಷ್ಠಾನ ಮುಂದುವರೆಯುವಂತೆ ನೋಡಿಕೊಂಡಿದೆ.

ಇದೇ ವೇಳೆ ನಾವು ಸದೃಢವಾದ ಸಾಂಸ್ಥಿಕ ಹಾಗೂ ನಿರ್ವಹಣಾ ವ್ಯವಸ್ಥೆಯನ್ನು ರೂಪಿಸಲು ಒತ್ತು ನೀಡಿದ್ದೇವೆ. ಒ ಮತ್ತು ಎಂ ನೀತಿಯನ್ನು ಅನುಷ್ಠಾನಗೊಳಿಸಿರುವುದರಲ್ಲಿ ಕರ್ನಾಟಕ ಮೊದಲ ರಾಜ್ಯಗಳಲ್ಲಿ ಒಂದಾಗಿದೆ. ಲಿಂಗ ಸಮತೋಲನವುಳ್ಳ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿಗಳನ್ನು ಸಕ್ರಿಯವಾಗಿ ತೊಡಗಿಸಲಾಗಿದೆ. ಇದಕ್ಕಾಗಿಯೇ ಮೀಸಲಿರಿಸಲಾದ ಪಿಎಂಯು ಸ್ಥಾಪಿಸಲಾಗುತ್ತಿದೆ. ಜೀವ ಜಲ ಅಪ್ಲಿಕೇಶನ್,  ಜಿ. ಐ.ಎಸ್  ಆಧಾರಿತ ಆಸ್ತಿ ನಿರ್ವಹಣೆ, ನೈಜ ಸಮಯ ಮೇಲ್ವಿಚಾರಣೆ ಮುಂತಾದ ಡಿಜಿಟಲ್ ನಾವೀನ್ಯತೆಗಳು ಆಡಳಿತವನ್ನು ಪರಿವರ್ತಿಸುತ್ತಿವೆ. 1.51 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ನೀರಿನ ಗುಣಮಟ್ಟ ಪರೀಕ್ಷೆ ಮಾಡುವ ವಿಧಾನದಲ್ಲಿ ತರಬೇತಿ ನೀಡುವ ಮೂಲಕ   ಸಮುದಾಯದ ಮಾಲೀಕತ್ವವನ್ನು ಸುಭದ್ರಪಡಿಸಲಾಗಿದೆ.

ಗುಣಮಟ್ಟ ಖಾತ್ರಿಪಡಿಸಲು ಕರ್ನಾಟಕವು ಬ್ಯೂರೋ ವೆರಿಟಾಸ್ ಸಂಸ್ಥೆಯನ್ನು ಸ್ವತಂತ್ರ ಪರಿಶೀಲನೆ, ಮಾದರಿ ಆಧಾರಿತ ತಪಾಸಣೆ, ದಾಖಲೆಗಳ ಪರಿಶೀಲನೆ, ತಾಂತ್ರಿಕ ಪರೀಕ್ಷೆಗಳಿಗಾಗಿ ನೇಮಿಸಿದ್ದು, ತನ್ಮೂಲಕ ಕಾಮಗಾರಿಗಳ ಸುಸ್ಥಿರ ಕಾರ್ಯಶೀಲತೆಯನ್ನು ಖಾತ್ರಿ ಪಡಿಸಲಾಗುತ್ತಿದೆ.

ನೀರಿನ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದು  ಜ್ಞಾನ ಮತ್ತು ನಿರ್ದೇಶನ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. 259 ಗ್ರಾಮಗಳಿಗೆ ಈಗಾಗಲೇ 24/7 ನೀರಿನ ಸರಬರಾಜು ಸಾಧಿಸಲಾಗಿದ್ದು, ಈ ಮಿಷನ್ ಗಿರುವ ಪರಿವರ್ತನಾ ಸಾಮರ್ಥ್ಯವನ್ನು ಸಾಬೀತುಪಡಿಸಿದೆ ಎಂದರು.

ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ. ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ  ಮಾಡುವಂತೆ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ. ಎಲ್ಲಾ ಗ್ರಾಮೀಣ ಜನತೆಗೆ  ಇದು ನಿರಂತರತೆಯನ್ನು ಖಚಿತಪಡಿಸುತ್ತದೆಯಲ್ಲದೆ,  ವೇಗ,  ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರಿನ ಹಂಚಿಕೆಯ ರಾಷ್ಟ್ರೀಯ ದೃಷ್ಟಿಕೋನವನ್ನು ಸಾಮೂಹಿಕವಾಗಿ ಸಾಧಿಸಲು ನಮಗೆ ಅನುವು ಮಾಡಿಕೊಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Jal Jeevan Mission 2.0, CM Siddaramaiah, release, pending grants

The post ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ...

ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.

ಮೈಸೂರು, ಏಪ್ರಿಲ್, 29,2026 (www.justkannada.in):  ಅಬಕಾರಿ ಇಲಾಖೆಯ ವತಿಯಿಂದ ಮೈಸೂರು ನಗರ...

ವೈದ್ಯರ ಸಲಹಾ ಚೀಟಿ ಇಲ್ಲದೆ ಎಚ್, ಎಚ್ 1ಮತ್ತು ಎಕ್ಸ್ ಅಡಿ ಬರುವ ಔಷಧಿ ಮಾರಾಟ ಕಂಡು ಬಂದರೆ ಕ್ರಮ: ಡಿಸಿ ಲಕ್ಷ್ಮಿಕಾಂತ ರೆಡ್ಡಿ

ಮೈಸೂರು, ಏಪ್ರಿಲ್,29,2026 (www.justkannada.in):  ಔಷಧ ಮಾರಾಟ ಅಂಗಡಿಗಳು ಔಷಧ ಮತ್ತು ಕಾಂತಿವರ್ಧಕ...

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ...