13
February, 2026

A News 365Times Venture

13
Friday
February, 2026

A News 365Times Venture

ಜಸ್ಪ್ರೀತ್ ಬುಮ್ರಾ ಮುಡಿಗೆ ICC  2024ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ

Date:

ನವದೆಹಲಿ,ಜನವರಿ,27,2025 (www.justkannada.in): ಐಸಿಸಿ, 2024 ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ  ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಭಾಜನರಾಗಿದ್ದಾರೆ.

2024 ರಲ್ಲಿ ಜಸ್ಪ್ರೀತ್ ಬುಮ್ರಾ ಅತ್ಯತ್ತಮ ಪ್ರದರ್ಶನ ನೀಡಿದ್ದು ಇದೀಗ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ಜಸ್ಪ್ರೀತ್ ಬುಮ್ರಾ ಅವರು 2024 ರಲ್ಲಿ ಒಟ್ಟು 13 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ಅವಧಿಯಲ್ಲಿ ಅವರು 14.92 ಸರಾಸರಿಯಲ್ಲಿ 71 ವಿಕೆಟ್ ಪಡೆದರು. ಈ ಮೂಲಕ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಎನಿಸಿಕೊಂಡಿದ್ದರು.

ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಯನ್ನು ಗೆದ್ದ 6ನೇ ಭಾರತೀಯ ಕ್ರಿಕೆಟರ್ ಜಸ್ಪ್ರೀತ್ ಬುಮ್ರಾ. ಇದಕ್ಕೂ ಮುನ್ನ ರಾಹುಲ್ ದ್ರಾವಿಡ್, ಗೌತಮ್ ಗಂಭೀರ್, ವೀರೇಂದ್ರ ಸೆಹ್ವಾಗ್, ರವಿಚಂದ್ರನ್ ಅಶ್ವಿನ್ ಮತ್ತು ವಿರಾಟ್ ಕೊಹ್ಲಿ ಕೂಡ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಆದರೆ ಈ ಐವರು ಆಟಗಾರರು ಬ್ಯಾಟ್ಸ್‌ಮನ್ ​ಗಳಾಗಿದ್ದು, ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗರಾಗಿ ಆಯ್ಕೆಯಾದ ಭಾರತದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಜಸ್ಪ್ರೀತ್ ಬುಮ್ರಾ ಪಾತ್ರರಾಗಿದ್ದಾರೆ.

Key words: Jasprit Bumrah, ICC,  2024 Test Cricketer of the Year, award

The post ಜಸ್ಪ್ರೀತ್ ಬುಮ್ರಾ ಮುಡಿಗೆ ICC  2024ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯತೀಂದ್ರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಆರೋಪ: ಬಿಜೆಪಿ ಐಟಿ ಸೆಲ್ ವಿರುದ್ದ ಕಾಂಗ್ರೆಸ್ ದೂರು

ಮೈಸೂರು,ಫೆಬ್ರವರಿ,12,2026 (www.justkannada.in): ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬಗ್ಗೆ ಕೆಟ್ಟದಾಗಿ ಪೋಸ್ಟ್...

ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಉದ್ಘಾಟಿಸಿದ ಸಚಿವ ಡಾ.ಎಂ.ಸಿ ಸುಧಾಕರ್

ಬೆಂಗಳೂರು,ಫೆಬ್ರವರಿ,12,2026 (www.justkannada.in): ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳ ತಂತ್ರಜ್ಞಾನ ಆಲೋಚನೆಗೆ, ಕಲ್ಪನೆಗೆ ಹಾಗೂ...

ಪ್ರಸಕ್ತ ವರ್ಷದಲ್ಲಿ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಫೆಬ್ರವರಿ, 12,2026 (www.justkannada.in):  ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ...

ಎಫ್ ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,12,2026 (www.justkannada.in): ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮಹತ್ತ್ವದ ಸುಧಾರಣಾ...