5
March, 2026

A News 365Times Venture

5
Thursday
March, 2026

A News 365Times Venture

ಜಾತಿ ಗಣತಿ ಹೆಸರಲ್ಲಿ ಜಾತಿ ವಿಷಬೀಜ ಬಿತ್ತುವ ಸಿಎಂ ಸಿದ್ದರಾಮಯ್ಯ ಅವರ ಕುತಂತ್ರಕ್ಕೆ ಇತಿಶ್ರೀ- ಬಿವೈ ವಿಜಯೇಂದ್ರ

Date:

 

ಬೆಂಗಳೂರು,ಮೇ,1,2025 (www.justkannada.in): ಜಾತಿ ಗಣತಿ ಹೆಸರಲ್ಲಿ ಜಾತಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರ ಕುತಂತ್ರಕ್ಕೆ ಇದೀಗ ಕೇಂದ್ರ ಸರ್ಕಾರ ಇತಿಶ್ರೀ ಹಾಡಲು ಮುಂದಾಗಿದೆ. ಎಲ್ಲಾ ಹಿಂದುಳಿದ ಸಮುದಾಯಗಳಿಗೂ ನ್ಯಾಯ ಕೊಡಬೇಕು ಎಂಬ ದೃಷ್ಟಿಕೋನದಿಂದ ಜಾತಿಗಣತಿ ನಡೆಸಲು ಪ್ರಧಾನಿ ಮೋದಿ ಸರ್ಕಾರ ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರವು ಬಹಳ ಉತ್ತಮ ನಿರ್ಧಾರ ಕೈಗೊಂಡಿದೆ. ನಿನ್ನೆಯ ಸಂಪುಟ ಸಭೆಯಲ್ಲಿ ಜನಗಣತಿ ಜೊತೆಗೆ ಜಾತಿ ಜನಗಣತಿ ಮಾಡುವ ಪ್ರಮುಖ ನಿರ್ಧಾರ ಮಾಡಿದ್ದು ಸ್ವಾಗತಾರ್ಹ, ಭಾರತದಲ್ಲಿ 1931ರ ನಂತರ ಯಾವತ್ತೂ ಜಾತಿ ಜನಗಣತಿ ಆಗಿರಲಿಲ್ಲ; ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗಬೇಕು. ಎಲ್ಲ ಸಮುದಾಯಗಳಿಗೂ ಸವಲತ್ತು ಸಿಗಬೇಕೆಂಬುದೇ ನರೇಂದ್ರ ಮೋದಿ ಅವರ ಉದ್ದೇಶ ಎಂದರು.

ಜನಗಣತಿ ಜೊತೆಗೆ ಜಾತಿ ಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಆಡಳಿತ ನಡೆಸುವ ಕಾಂಗ್ರೆಸ್ ಪಕ್ಷವು ಜಾತಿ- ಜಾತಿಗಳ ನಡುವೆ ವಿಷಬೀಜ ಬಿತ್ತುವ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಇದೀಗ ಇದಕ್ಕೆ ಕೇಂದ್ರ ಸರ್ಕಾರ ಇತಿಶ್ರೀ ಹಾಡಲಿದೆ ಎಂದು ವಿಜಯೇಂದ್ರ ತಿಳಿಸಿದರು.

Key words: caste census, CM Siddaramaiah, BY Vijayendra

The post ಜಾತಿ ಗಣತಿ ಹೆಸರಲ್ಲಿ ಜಾತಿ ವಿಷಬೀಜ ಬಿತ್ತುವ ಸಿಎಂ ಸಿದ್ದರಾಮಯ್ಯ ಅವರ ಕುತಂತ್ರಕ್ಕೆ ಇತಿಶ್ರೀ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 5ನೇ ಭಾರಿ ಅಧ್ಯಕ್ಷರಾಗಿ ಶಂಭುಗೌಡ ಆಯ್ಕೆ

ಮೈಸೂರು,ಮಾರ್ಚ್,5,2026 (www.justkannada.in):  ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ...

ನಾಳೆ ‘ರಾಜ್ಯ ಬಜೆಟ್’ : ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು, ಮಾರ್ಚ್, 5,2026 (www.justkannada.in): ಕರ್ನಾಟಕ ಸರ್ಕಾರದ 2026-27 ನೇ ಸಾಲಿನ...

ನಾಳೆ ‘ರಾಜ್ಯ ಬಜೆಟ್’ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು

ಬೆಂಗಳೂರು, ಮಾರ್ಚ್,5, 2026 (www.justkannada.in):  ನಾಳೆ 2026-27ನೇ ಸಾಲಿನ ರಾಜ್ಯ ಬಜೆಟ್‌...

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...