27
April, 2026

A News 365Times Venture

27
Monday
April, 2026

A News 365Times Venture

ಜಿಲ್ಲಾ ಖಜಾನೆ ಉಪನಿರ್ದೇಶಕರಿಗೆ ‘ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ’: ಏ.30 ರಂದು ಪ್ರದಾನ

Date:

ಮಂಡ್ಯ,ಏಪ್ರಿಲ್,27,2026 (www.justkannada.in):  2026ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಮಂಡ್ಯ ಜಿಲ್ಲಾ ಖಜಾನೆ ಉಪನಿರ್ದೇಶಕಿ ವರಲಕ್ಷ್ಮಿ ಅವರು ಆಯ್ಕೆಯಾಗಿದ್ದು ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಆಹ್ವಾನ ನೀಡಿದರು.

ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಆಯ್ಕೆ ಸಮಿತಿಯು  ಕಾರ್ಯವೈಖರಿ, ಕಾರ್ಯಕ್ಷಮತೆ ಹಾಗೂ ಗಮನಾರ್ಹ ಸಾಧನೆಯನ್ನು ಪರಿಗಣಿಸಿ, ಜಿಲ್ಲಾ ಖಜಾನೆ ಉಪನಿರ್ದೇಶಕಿ ವರಲಕ್ಷ್ಮಿ ಅವರನ್ನು 2026ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಏಪ್ರಿಲ್ 30 ರಂದು ರಂದು ಮಧ್ಯಾಹ್ನ 3.00 ಗಂಟೆಗೆ ಮಂಡ್ಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಿದ್ದು,  ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಹಾಜರಾಗಿ, ಪ್ರಶಸ್ತಿಯನ್ನು ಸ್ವೀಕರಿಸುವಂತೆ ವರಲಕ್ಷ್ಮಿ ಅವರಿಗೆ ಮಂಡ್ಯ ಡಿಸಿ ಡಾ.ಕುಮಾರ್ ಅಹ್ವಾನ ನೀಡಿದರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರ ಕಾರ್ಯಕ್ರಮತೆಯನ್ನು ಹೆಚ್ಚಿಸಲು ಹಾಗೂ ಉತ್ತಮ ಸೇವೆ ನೀಡುವಲ್ಲಿ ಉತ್ತೇಜನ ನೀಡುವ ದೃಷ್ಟಿಯಿಂದ ಪ್ರತೀ ವರ್ಷ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕಾರ್ಯವೈಖರಿಯಲ್ಲಿ ಸುಧಾರಣೆಯನ್ನು ತರುವ ಮೂಲಕ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಯನ್ನು ನೀಡುವ ಉದ್ದೇಶದಿಂದ ಮತ್ತು ವಿಭಿನ್ನ ಮತ್ತು ಗಮನಾರ್ಹ ಸಾಧನೆಯನ್ನು ಅವಲೋಕಿಸಿ ಇನ್ನೂ ಹೆಚ್ಚಿನ ಉತ್ತಮ ಸೇವೆಯನ್ನು ನೀಡುವ ಉದ್ದೇಶದಿಂದ ಅಧಿಕಾರಿ ಮತ್ತು ನೌಕರರಿಗೆ ಉತ್ತೇಜನ ನೀಡುವ ಸಲುವಾಗಿ ಈ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಡಿಸಿ  ಡಾ.ಕುಮಾರ ತಿಳಿಸಿದ್ದಾರೆ.

Key words: ‘District Level Best Service Award’, Mandya DC, Kumar

 

The post ಜಿಲ್ಲಾ ಖಜಾನೆ ಉಪನಿರ್ದೇಶಕರಿಗೆ ‘ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ’: ಏ.30 ರಂದು ಪ್ರದಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಪುಟ ಪುನಾರಚನೆ: ಮೇ 2ನೇ ಅಥವಾ 3ನೇ ವಾರದಲ್ಲಿ ‘ಕೈ’ ಶಾಸಕರಿಗೆ ಸಿಹಿಸುದ್ದಿ?

ಬೆಂಗಳೂರು,ಏಪ್ರಿಲ್,27,2026 (www.justkannada.in): ರಾಜ್ಯದಲ್ಲಿ ಉಪಚುನಾವಣೆ ಮುಗಿದ ನಂತರ ಸಚಿವ ಸಂಪುಟ ಪುನಾರಚನೆ...

ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಬೇಸಿಗೆ ಹಿನ್ನೆಲೆಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.  ಹೀಟ್...

ಕಾಳಸಂತೆಯಲ್ಲಿ IPL ಟಿಕೆಟ್ ಮಾರಾಟ: 10 ಆರೋಪಿಗಳ ಬಂಧನ

ಬೆಂಗಳೂರು, ಏಪ್ರಿಲ್,26,2026 (www.justkannada.in):  ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ 10...

ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು, ಏಪ್ರಿಲ್, 25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ...