25
April, 2026

A News 365Times Venture

25
Saturday
April, 2026

A News 365Times Venture

ಡಾ.ರಾಜ್‌ ಕುಮಾರ್ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಶಾಸಕ ಟಿ ಎಸ್ ಶ್ರೀವತ್ಸ

Date:

ಮೈಸೂರು,ಏಪ್ರಿಲ್,24,2026 (www.justkannada.in): ಸರಳ, ಸಜ್ಜನ, ನಿಷ್ಠಾವಂತ, ಪ್ರಾಮಾಣಿಕ ಕಲಾವಿದ ಹಾಗೂ ಎಲ್ಲ ಸಮುದಾಯದ ಜನರ ಪ್ರೀತಿಗೆ ಪಾತ್ರರಾದ ಡಾ.ರಾಜಕುಮಾರ್ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಟಿ.ಎಸ್ ಶ್ರೀವತ್ಸ ಬಣ್ಣಿಸಿದರು.

ಅರಮನೆಯ ಮುಂಭಾಗದ  ಡಾ. ರಾಜ್ ಕುಮಾರ್ ಉದ್ಯಾನವನದಲ್ಲಿ ರಾಜಕುಮಾರ್ ಅಭಿಮಾನಿ ಬಳಗದ ವತಿಯಿಂದ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು  ಉದ್ಘಾಟಿಸಿ ನಂತರ ಸ್ವಯಂ ಪ್ರೇರಿತ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಪ್ರಮಾಣ ಪತ್ರ ನೀಡಿ ಮಾತನಾಡಿದರು.

ತಮ್ಮ ನಟನೆಯ ಮೂಲಕ ಮನೆ ಮಾತಾಗಿ, ಕೋಟ್ಯಾಂತರ ಅಭಿಮಾನಿ ದೇವರ ಹೃದಯದಲ್ಲಿ ಡಾ.ರಾಜಕುಮಾರ್ ಶಾಶ್ವತ ಸ್ಥಾನ ಪಡೆದುಕೊಂಡಿದ್ದಾರೆ. ಅವರ ವೃತ್ತಿ ಬದುಕು ನಮಗೆಲ್ಲರಿಗೂ ಮಾದರಿಯಾಗುವಂತಹದ್ದು. ಅವರ ಜೀವನದ ಆದರ್ಶಗಳನ್ನು ತಿಳಿದು ನಮ್ಮ ಜೀವನದಲ್ಲೂ ಅನುಕರಣೆ ಮಾಡಿಕೊಳ್ಳಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮುಡಾ ಮಾಜಿ  ಸದಸ್ಯರಾದ ಲಕ್ಷ್ಮೀದೇವಿ, ಬಿಜೆಪಿ ಮುಖಂಡ ಜೋಗಿ ಮಂಜು, ಕೆಎಂಪಿಕೆ ಚಾರಿಟೇಬಲ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಹಿತ್, ಪ್ರಭು,  ಕೀರ್ತಿ, ಕಿಶೋರ್ ಹಾಗೂ ಇನ್ನಿತರರು ಹಾಜರಿದ್ದರು.

Key words: Dr. Rajkumar, Birthday, blood donation, Mysore,

The post ಡಾ.ರಾಜ್‌ ಕುಮಾರ್ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಶಾಸಕ ಟಿ ಎಸ್ ಶ್ರೀವತ್ಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು-ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್, 24,2026 (www.justkannada.in):  ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ...

ಒಳಮೀಸಲಾತಿ : ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಏಪ್ರಿಲ್,24,2026 (www.justkannada.in):  ರಾಜ್ಯದಲ್ಲಿ ಕಗ್ಗಂಟಾಗಿರುವ ಒಳ ಮೀಸಲಾತಿ ಗೊಂದಲ ವಿಚಾರ ಕುರಿತು...

ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದು ಪಶ್ಚಿಮ...

ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,24,2026 (www.justkannada.in):  ಒಳಮೀಸಲಾತಿ ಹಂಚಿಕೆಗೆ ಸಂಬಂಧ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು...