9
May, 2026

A News 365Times Venture

9
Saturday
May, 2026

A News 365Times Venture

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು: DCM ಹುದ್ದೆ, ಪ್ರಮುಖ ಖಾತೆಗೆ ಬೇಡಿಕೆಯಿಟ್ಟ VCK

Date:

ಚೆನ್ನೈ, ಮೇ 9,2026 (www.justkannada.in):  ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನ ಪಡೆದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ರಾಜಕೀಯ ನಾಯಕ ದಳಪತಿ ವಿಜಯ್ ನೇತೃತ್ವದ ಟಿವಿಕೆ  ಪಕ್ಷ ಸರ್ಕಾರ ರಚನೆಗೆ ತೀವ್ರ ಕಸರತ್ತು ನಡೆಸುತ್ತಿದೆ.

ಚುನಾವಣೆಯಲ್ಲೇ ಬರೋಬ್ಬರಿ 108 ಸ್ಥಾನಗಳನ್ನು ಪಡೆದ ವಿಜಯ್  ಅವರ ಟಿವಿಕೆ ಬಹುಮತ ಲಭಿಸದ ಹಿನ್ನೆಲೆಯಲ್ಲಿ  ಸರ್ಕಾರ ರಚನೆಗೆ ಇತರೆ ಪಕ್ಷಗಳ ಮೇಲೆ ಅವಲಂಭಿಸಿದೆ.  ಇದೀಗ ಕಾಂಗ್ರೆಸ್ ಬೆಂಬಲಿಸಿದ್ದು ಸಿಪಿಐನ 2, ಸಿಪಿಎಂನ 2 ಸ್ಥಾನಗಳು ಸೇರಿ ವಿಜಯ್ ಅವರಿಗೆ 116  ಆಗಿದೆ. ಆದರೆ ಎರಡು ಸ್ಥಾನಗಳನ್ನ ಗೆದ್ದಿರುವ ವಿದುತಲೈ ಚಿರುತೈಗಳ ಕಚ್ಚಿ (ವಿಸಿಕೆ) ಬೆಂಬಲ ನೀಡಲು ಇದೀಗ ಟಿವಿಕೆ ಪಕ್ಷದ ಮುಂದೆ ಡಿಸಿಎಂ ಹುದ್ದೆ ಮತ್ತು ಪ್ರಮುಖ ಖಾತೆಗೆ ಬೇಡಿಕೆಯಿಟ್ಟಿದೆ.

ವಿಸಿಕೆ ನಾಯಕ ತೊಲ್ ತಿರುಮಾವಳವನ್ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಹಾಗೆಯೇ ಸರ್ಕಾರದಲ್ಲಿ ಪ್ರಮುಖ ಖಾತೆಗಳು ಮತ್ತು ಅಧಿಕಾರ ಹಂಚಿಕೆಗೆ ವಿಸಿಕೆ ಪಟ್ಟು ಹಿಡಿದಿದೆ ಎನ್ನಲಾಗಿದೆ.

ವಿಜಯ್ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವುದರಿಂದಾಗಿ ಟಿವಿಕೆ ಬಳಿ ಈಗಿರುವ ಸಂಖ್ಯೆ 107. ಇದರ ಜೊತೆ ಕಾಂಗ್ರೆಸ್​ನ 5, ಸಿಪಿಐನ 2, ಸಿಪಿಎಂನ 2 ಸ್ಥಾನಗಳು ಸೇರಿ ವಿಜಯ್ ಅವರಿಗೆ ಇರುವ ಸಂಖ್ಯೆ 116 ಆಗಿದೆ. ಆದರೆ, ಸರ್ಕಾರ ರಚನೆಗೆ ವಿಜಯ್​ಗೆ 118 ಸ್ಥಾನಗಳು ಬೇಕಾಗಿವೆ. ಒಂದುವೇಳೆ ವಿಸಿಕೆ ತನ್ನ ಬಳಿ ಇರುವ ಇಬ್ಬರು ಶಾಸಕರ ಬೆಂಬಲ ಘೋಷಿಸಿದರೆ ಮಾತ್ರ ವಿಜಯ್ ಮುಖ್ಯಮಂತ್ರಿಯಾಗಲು ಸಾಧ್ಯವಾಗಲಿದೆ.

Key words: Tamil Nadu, TVK,  government, VCK, demands

The post ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು: DCM ಹುದ್ದೆ, ಪ್ರಮುಖ ಖಾತೆಗೆ ಬೇಡಿಕೆಯಿಟ್ಟ VCK appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು: 20ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕ

ದಾವಣಗೆರೆ,ಮೇ,8,2026 (www.justkannada.in): ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ 50...

BSY ಅಭಿಮಾನೋತ್ಸವ: ಬಿವೈವಿ ಎಚ್ಚರಿಕೆ ಹೆಜ್ಜೆ ಇಟ್ಟರೆ ಒಳ್ಳೆಯದು- ಸಚಿವ ಸತೀಶ್ ಜಾರಕಿಹೊಳಿ

ದಾವಣಗೆರೆ,ಮೇ,8,2026 (www.justkannada.in): ಅಧಿಕಾರದಿಂದ ಕೆಳಗಿಳಿಸಿದವರೇ ಬಿಎಸ್ ವೈ ಅಭಿಮಾನೋತ್ಸವ ಮಾಡುತ್ತಿದ್ದಾರೆ. ಬಿವೈ...

ಈ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆ – ಸಲೀಂ ಅಹ್ಮದ್

ಹಾವೇರಿ,ಮೇ,8,2026 (www.justkannada.in): ಈ ತಿಂಗಳಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಬಹುದು...

ತಮಿಳುನಾಡಿನಲ್ಲಿ ಯಾರಿಂದ ಸರ್ಕಾರ ರಚನೆ ಕಾಲವೇ ನಿರ್ಣಯಿಸುತ್ತೆ- ಬಿ.ಎಲ್ ಸಂತೋಷ್

ನವದೆಹಲಿ,ಮೇ,8,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ...