10
Thursday
April, 2025

A News 365Times Venture

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ

Date:

ಕೊಯಂಬತ್ತೂರು, ಏಪ್ರಿಲ್,4,2025 (www.justkannada.in):  ತಮಿಳುನಾಡಿನ  ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಅಣ್ಣಾಮಲೈ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಮುಂದಿನ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದಿದ್ದಾರೆ.

ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತೇನೆ. ಮುಂದಿನ 2ವಾರದಲ್ಲಿ  ಹೊಸ ರಾಜ್ಯಾಧ್ಯಕ್ಷರ ಘೋಷಣೆಯಾಗಲಿದೆ. ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ. ಬಿಜೆಪಿ ಕಾರ್ಯಕರ್ತರೊಬ್ಬರು ರಾಜ್ಯಾಧ್ಯಕ್ಷರಾಗಲಿದ್ದಾರೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ

ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದು ಅಣ್ಣಾಮಲೈ  ತಿಳಿಸಿದ್ದಾರೆ.

Key words: K. Annamalai, announces, resignation, Tamil Nadu, BJP, state president

The post ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯವನ್ನ ಭ್ರಷ್ಟಾಚಾರದಲ್ಲಿ ನಂ.1ಗೆ ತಂದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತೆ- ಬಿವೈ ವಿಜಯೇಂದ್ರ

ಉಡುಪಿ,ಏಪ್ರಿಲ್,10,2025 (www.justkannada.in): ರಾಜ್ಯವನ್ನ ಭ್ರಷ್ಟಾಚಾರದಲ್ಲಿ ನಂ.1ಗೆ ತಲುಪಿಸಿದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ...

ನಾಳೆ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ

ಬೆಂಗಳೂರು, ಏಪ್ರಿಲ್​ 10,2025 (www.justkannada.in):  ಸಾಕಷ್ಟು ಪರ-ವಿರೋಧದ ನಡುವೆ ಜಾತಿಜನಗಣತಿ ವರದಿಯನ್ನ...

ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ.

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದಲ್ಲಿ ಮಧ್ಯರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ...

ಕಮಿಷನ್ ಆರೋಪ ಸಾಬೀತಾದರೇ ರಾಜೀನಾಮೆ- ಸಚಿವ ಎನ್.ಎಸ್ ಬೋಸರಾಜು

ಬೆಂಗಳೂರು,ಏಪ್ರಿಲ್,10,2025 (www.justkannada.in): ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮಿಷನ್, ಮಧ್ಯವರ್ತಿಗಳು ಹೆಚ್ಚಾಗಿದೆ...
16:50