2
April, 2026

A News 365Times Venture

2
Thursday
April, 2026

A News 365Times Venture

ದುಬೈ: ಕನ್ನಡಿಗರ ಕೂಟದ ಅಧ್ಯಕ್ಷರಾಗಿ ಅರುಣ್ ಕುಮಾರ್ ಎಂ.ಕೆ.  ಪುನರಾಯ್ಕೆ

Date:

ದುಬೈ,ಏಪ್ರಿಲ್,2,2026 (www.justkannada.in): ಮಧ್ಯಪ್ರಾಚ್ಯದ ಪ್ರತಿಷ್ಠಿತ ಹಾಗೂ ಹಿರಿಯ ಕನ್ನಡ ಸಂಘಟನೆಗಳಲ್ಲಿ ಒಂದಾದ ‘ಕನ್ನಡಿಗರ ಕೂಟ, ದುಬೈ’ ಸಂಘಟನೆಯ 2026-2028ನೇ ಸಾಲಿನ ಅಧ್ಯಕ್ಷರಾಗಿ ಅರುಣ್ ಕುಮಾರ್ ಎಂ.ಕೆ. ಅವರು ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘಟನೆಯ ಸ್ಥಾಪಕ ಸದಸ್ಯರು, ಸಲಹಾ ಮಂಡಳಿ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಪ್ರಕ್ರಿಯೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಏಕಮತದಿಂದ ಕೈಗೊಳ್ಳಲಾಯಿತು.

ಕನ್ನಡಿಗರ ಕೂಟ, ದುಬೈ ಕಳೆದ 24 ವರ್ಷಗಳಿಂದ ದುಬೈಯಲ್ಲಿ ಪ್ರತಿ ನವೆಂಬರ್ 2ನೇ ವಾರದಲ್ಲಿ “ಕರ್ನಾಟಕ ರಾಜ್ಯೋತ್ಸವ’ವನ್ನು ದುಬೈಯಲ್ಲಿ ನಿರಂತರವಾಗಿ ಆಚರಿಸುತ್ತಿರುವ ಏಕೈಕ ಕನ್ನಡ ಸಂಘಟನೆ ಎಂಬ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಜೊತೆಗೆ, ದುಬೈ ಮತ್ತು ಕರ್ನಾಟಕದಲ್ಲಿ ಅನೇಕ ಸಂಗೀತ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳು, ರಕ್ತದಾನ ಶಿಬಿರ, ಇಫ್ತಾರ್ ಕೂಟ. ಹಿರಿಯ ಸಾಧಕರಿಗೆ ಗೌರವ ಸನ್ಮಾನ ಸಮಾರಂಭ ಹೀಗೆ ನೂರಾರು ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿ, ಕನ್ನಡಿಗರ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಹಾಗೂ ಸಂಸ್ಕೃತಿ ಸಂರಕ್ಷಣೆ, ಸಮುದಾಯ ಸೇವೆ ಮತ್ತು ಜವಾಬ್ದಾರಿಯುತ ಕಾರ್ಯಕ್ರಮ ನಿರ್ವಹಣೆಗೆ ಬದ್ಧವಾಗಿದೆ.

ಪುನರ್ ಆಯ್ಕೆಯ ನಂತರ ಅಧ್ಯಕ್ಷ ಅರುಣ್ ಕುಮಾರ್ ಅವರು ಸಮಿತಿ ಮತ್ತು ಸಲಹಾ ಸದಸ್ಯರಿಗೆ ತಮ್ಮ ಮೇಲೆ ಇಟ್ಟಿರುವ ನಂಬಿಕೆ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು. ಅವರು ಸಂಸ್ಥೆಯ ಸ್ಥಾಪಕರು ನಿರ್ಮಿಸಿದ ಪರಂಪರೆಯನ್ನು ಮುಂದಿನ ವರ್ಷಗಳಲ್ಲಿ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿಯನ್ನು ನಿಭಾಯಿಸುವುದಾಗಿ ಭರವಸೆ ನೀಡಿದರು. ಅವರು 2026ರ ಏಪ್ರಿಲ್ ತಿಂಗಳಲ್ಲಿ ಸಮಿತಿ ವಿಸ್ತರಣೆ ನಡೆಯಲಿದ್ದು, ಮಧ್ಯಪ್ರಾಚ್ಯದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು “ಸಂಗೀತ ಸೌರಭ 2026” ಸೇರಿದಂತೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು U.A.E ನಿಯಮಾವಳಿ ಮತ್ತು ಮಾರ್ಗಸೂಚಿಗಳ ಪ್ರಕಾರ ಮುಂದಿನ ದಿನಗಳಲ್ಲಿ ಘೋಷಿಸಲಾಗುವುದೆಂದು ತಿಳಿಸಿದರು.

‘ಕರ್ನಾಟಕ ರಾಜ್ಯೋತ್ಸವ-2026’ ದಿನಾಂಕ ಪ್ರಕಟ

ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ದುಬೈನಲ್ಲಿ ನಿರಂತರವಾಗಿ ರಾಜ್ಯೋತ್ಸವ ಆಚರಿಸುತ್ತಿರುವ ಪರಂಪರೆಯನ್ನು ಮುಂದುವರಿಸಿರುವ ಈ ಸಂಘಟನೆಯು, ತನ್ನ ಸುದೀರ್ಘ ಸಾಂಸ್ಕೃತಿಕ ಪಯಣದಲ್ಲಿ ನಾಡಿನ ಸಾಹಿತಿಗಳು, ಸಾಧಕರು, ಸಂಗೀತ ದಿಗ್ಗಜರು, ಖ್ಯಾತ ನಟ-ನಟಿಯರು, ರಾಜಕೀಯ ಮುತ್ಸದ್ದಿಗಳು ಹಾಗೂ ಕ್ರೀಡಾ ಸಾಧಕರನ್ನು ದುಬೈಗೆ ಆಮಂತ್ರಿಸಿ ಗೌರವಿಸಿದ ಕೀರ್ತಿ ಹೊಂದಿದೆ. ಅನಿವಾಸಿ ಕನ್ನಡಿಗರು ಮತ್ತು ತಾಯ್ತಾಡಿನ ಸಾಧಕರ ನಡುವೆ ಭದ್ರವಾದ ಸಾಂಸ್ಕೃತಿಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಘವು, ತನ್ನ ಈ ಭವ್ಯ ಪರಂಪರೆಯನ್ನು ಮುಂದುವರಿಸುತ್ತಾ ಈ ವರ್ಷದ ‘ಕರ್ನಾಟಕ ರಾಜ್ಯೋತ್ಸವ-2026’ ಸಮಾರಂಭವನ್ನು ನವೆಂಬರ್ 07, ಶನಿವಾರ ದಂದು ಆಚರಿಸಲು ಅಧಿಕೃತವಾಗಿ ನಿರ್ಧರಿಸಿದೆ.

ಐಕ್ಯತೆಗಾಗಿ ವಿಶೇಷ ಕರೆ..

2025ರ ರಾಜ್ಯೋತ್ಸವದಲ್ಲಿ ಕನ್ನಡಿಗರ ಕೂಟ, ದುಬೈ ಯಿಂದ” ಅಂತಾರಾಷ್ಟ್ರೀಯ ಸೇವಾ ರತ್ನ” ಪ್ರಶಸ್ತಿ ಪಡೆದ ಡಾ. ರೋನಾಲ್ಡ್ ಕೊಲಾಸೋ ಅವರ ಮಾತುಗಳನ್ನು ಸ್ಮರಿಸಿದ ಅವರು,  ಲೋಕೋಪಕಾರಿ ಸಾಧಕರು, ಉದ್ಯಮಿ ಹಾಗೂ ಅನೇಕ ಕನ್ನಡ ಸಂಘಟನೆಗಳ ಪೋಷಕರಾದ ಡಾ. ರೋನಾಲ್ಡ್ ಕೊಲಾಸೋ ಅವರು ದುಬೈಯಲ್ಲಿರುವ ಎಲ್ಲಾ ಕನ್ನಡ ಸಂಘಟನೆಗಳು ಒಂದಾಗಿ ಸೇರಿ ಒಂದು ದೊಡ್ಡ ರಾಜ್ಯೋತ್ಸವವನ್ನು ನಡೆಸುವಂತೆ ಕರೆ ನೀಡಿದ್ದರು. ಈ ಕರೆಗೆ ಗೌರವ ಸೂಚಿಸಿ, ಡಾ. ರೋನಾಲ್ಡ್ ಕೊಲಾಸೋ ಅವರ ಸಲಹೆಯಂತೆ, 2026ರ ರಾಜ್ಯೋತ್ಸವವನ್ನು ಕನ್ನಡಿಗರ ಕೂಟ, ದುಬೈ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸಲು ಎಲ್ಲಾ ಕನ್ನಡ ಸಂಘಟನೆಗಳು ಒಗ್ಗೂಡಿ ಕನ್ನಡಿಗರ ಶಕ್ತಿ ಮತ್ತು ಐಕ್ಯತೆಯನ್ನು ಜಗತ್ತಿಗೆ ಪ್ರದರ್ಶಿಸಬೇಕೆಂದು ಅರುಣ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

ಸಂಘಟನೆಯ ಸ್ಥಾಪಕ ಸದಸ್ಯರು, ಸಲಹಾ ಸಮಿತಿ ಸದಸ್ಯರಾದ ಸದನ್ ದಾಸ್, ವೀರೇಂದ್ರ ಬಾಬು, ಉಮಾ ವಿದ್ಯಾಧರ, ಇವರೊಂದಿಗೆ ಸಲಹಾ ಮಂಡಳಿಯ ಪ್ರಮುಖರಾದ ಮಂಜುನಾಥ್ ರಾಜನ್, ಅಡ್ವಕೇಟ್ ಇಬ್ರಾಹಿಂ ಖಲೀಲ್, ಅಶ್ರಫ್ ಮಂತೂರ್, ಛಾಯಾ ಕೃಷ್ಣಮೂರ್ತಿ, ಕಾರ್ಯಕಾರಿಣಿ ಸಮಿತಿಯ ಮಲ್ಲಿಕಾರ್ಜುನ ಅಂಗಡಿ, ಚೇತನ್ ಸುಬ್ರಮಣ್ಯ, ದೀಪಕ್ ಸೋಮಶೇಖರ, ವಿನೀತ್ ರಾಜ್, ಶ್ರೀನಿವಾಸ ಅರಸ್, ವೆಂಕಟರಮಣ ಕಾಮತ್, ವಿನಾಯಕ ಹೆಗಡೆ, ಡಾ.ನಿರುಪಮಾ ದಿನೇಶ್ ಮತ್ತು ನಟರಾಜ್ ಸೇರಿದಂತೆ ಹಲವು ಗಣ್ಯರು ಹಾಗೂ ಕಾರ್ಯಕಾರಿಣಿ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದು, ನೂತನ ಅಧ್ಯಕ್ಷರ ಆಯ್ಕೆಯನ್ನು ಸ್ವಾಗತಿಸಿದರು.

Key words: Dubai, Arun Kumar M.K,  re-elected, president of Kannadigara Koota

The post ದುಬೈ: ಕನ್ನಡಿಗರ ಕೂಟದ ಅಧ್ಯಕ್ಷರಾಗಿ ಅರುಣ್ ಕುಮಾರ್ ಎಂ.ಕೆ.  ಪುನರಾಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಮ್ಮ ಸರ್ಕಾರ ಸದೃಢ: ಒಳಮೀಸಲಾತಿ ಜಾರಿಗೆ ನಾವು ಬದ್ಧ- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಏಪ್ರಿಲ್,2,2026 (www.justkannada.in):  ನಮ್ಮ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಒಳಮೀಸಲಾತಿ ಜಾರಿ ಮಾಡಲು...

ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ನಿರಂತರ ಅಭ್ಯಾಸ ಅತ್ಯಗತ್ಯ- ಬಿ.ಎನ್.ವೀಣಾ

ಮೈಸೂರು,ಏಪ್ರಿಲ್,2,2026 (www.justkannada.in): ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸಮರ್ಪಣೆಯೊಂದಿಗೆ ನಿರಂತರ ಅಭ್ಯಾಸ ಅತ್ಯಗತ್ಯ...

ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ- ಆರ್.ಅಶೋಕ್

ದಾವಣಗೆರೆ,ಏಪ್ರಿಲ್,2,2026 (www.justkannada.in): ಬಡವರನ್ನ ಗೆಲ್ಲಿಸಿ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ. ಈ...

ಮೈಸೂರು ಆಕಾಶವಾಣಿಯಲ್ಲಿ ಹಿಂದೂಸ್ತಾನಿ ಗಾಯನದ ಮುದ್ರಣ: ಏ.5ರಂದು ರಾಷ್ಟ್ರಾದ್ಯಂತ ಪ್ರಸಾರ

ಮೈಸೂರು,ಏಪ್ರಿಲ್,2,2026 (www.justkannada.in):  ಮೈಸೂರಿನ ಸಂಗೀತ ಪರಂಪರೆಗೆ ಹೊಸ ಮೆರುಗೆಂಬಂತೆ, ಇದೇ   ಮೊದಲ...