24
April, 2026

A News 365Times Venture

24
Friday
April, 2026

A News 365Times Venture

ದೈಹಿಕ, ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ- ಹೆಚ್.ಎನ್. ನಾಗರಾಜಯ್ಯ

Date:

ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ ಎಂದು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮೇಜರ್ ಹೆಚ್.ಎನ್. ನಾಗರಾಜಯ್ಯ ತಿಳಿಸಿದರು.

ನ್ಯಾಷನಲ್ ಕಾಲೇಜಿನ 61 ನೇ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ನೆರವೇರಿತು. ಕ್ರೀಡಾಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮೇಜರ್ ಹೆಚ್.ಎನ್. ನಾಗರಾಜಯ್ಯ, “ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ. ಕ್ರೀಡೆಯೂ ಶಿಕ್ಷಣದ ಒಂದು ಮುಖ್ಯ ಭಾಗ” ಎಂದು ಕ್ರೀಡಾಳುಗಳನ್ನು ಹುರಿದುಂಬಿಸಿದರು.

ಕಾರ್ಯದರ್ಶಿ ಬಿ ಎಸ್ ಅರುಣ್ ಕುಮಾರ್ ಮಾತನಾಡಿ ನ್ಯಾಷನಲ್ ಕಾಲೇಜಿಗಿರುವ ಕ್ರೀಡಾ ಪರಂಪರೆಯನ್ನು ನೆನಪಿಸಿದರು.

ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ  ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ವಿತರಿಸಲಾಯಿತು. ಹಾಗೆಯೇ ಇದೇ ವೇಳೆ ಕಾಲೇಜಿನ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಿಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಎನ್ ಇಎಸ್ ಆಫ್ ಕರ್ನಾಟಕದ ಉಪಾಧ್ಯಕ್ಷ ವಿ. ಮಂಜುನಾಥ್, ಕಾರ್ಯದರ್ಶಿ ವಿ. ವೆಂಕಟಾಶಿವಾ ರೆಡ್ಡಿ, ಚೇರ್ಮನ್ ಡಾ. ವೆಂಕಟರಾಮರೆಡ್ಡಿ , ಜಂಟಿ ಕಾರ್ಯದರ್ಶಿ ಸುಧಾಕರ್ ಇಸ್ತೂರಿ, ಕಾರ್ಯ ಸಮಿತಿ ಚೇರ್ಮನ್ ಜಿ.ಎಂ. ರವೀಂದ್ರ ಪ್ರಾಂಶುಪಾಲೆ ಡಾ. ಸಿ. ವಿಜಯಲಕ್ಷ್ಮಿ,  ಕಾಲೇಜು ಅಧ್ಯಾಪಕ ಮಂಡಳಿ ಕಾರ್ಯದರ್ಶಿ ಪ್ರೊ. ಚೆಲುವಪ್ಪ, ದೈಹಿಕ ಶಿಕ್ಷಣ ನಿರ್ದೇಶಕರಾದ ಗಂಗಾರೆಡ್ಡಿ ಕೆ. ಎನ್, ಮತ್ತು ಅಧ್ಯಾಪಕರು ಭಾಗವಹಿಸಿದ್ದರು.

Key words: Bangalore, National College, Sports Festival, celebrated

The post ದೈಹಿಕ, ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ- ಹೆಚ್.ಎನ್. ನಾಗರಾಜಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆ ಆಗಬಹುದು –ಸಲೀಂ ಅಹ್ಮದ್

ಹುಬ್ಬಳ್ಳಿ,ಏಪ್ರಿಲ್,24,2026 (www.justkannada.in):  ಮೇ 20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು...

ಜೋಕಾಲಿ ಆಡುವಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವು

ಶಿವಮೊಗ್ಗ,ಏಪ್ರಿಲ್,24,2026 (www.justkannada.in):  ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ...

ಪರಮೇಶ್ವರ್ ವಿರುದ್ದದ ಕೇಸ್ ಗೆ ತಡೆ ಮೂಲಕ ದೂರದಾರನಿಗೆ ಹೈಕೋರ್ಟ್ ಕಪಾಳ ಮೋಕ್ಷ – ಹೆಚ್.ಎ ವೆಂಕಟೇಶ್

ಮೈಸೂರು,ಏಪ್ರಿಲ್,24,2026 (www.justkannada.in): ಗೃಹ ಸಚಿವರಾದ ಡಾ. ಜಿ ಪರಮೇಶ್ವರ  ವಿರುದ್ಧ ರಾಜಕೀಯ...

ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ

ಬೆಂಗಳೂರು,ಏಪ್ರಿಲ್,23,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ...