20
June, 2026

A News 365Times Venture

20
Saturday
June, 2026

A News 365Times Venture

ಧರ್ಮಸ್ಥಳದ ‘ಸೌಜನ್ಯ ಪ್ರಕರಣ’ ಕುರಿತು ನಾಳೆ ನಟ ಪ್ರಕಾಶ್ ರಾಜ್ ಪತ್ರಿಕಾಗೋಷ್ಠಿ

Date:

ಬೆಂಗಳೂರು,ಜೂನ್,16,2026 (www.justkannada.in): ನಟ ಪ್ರಕಾಶ್ ರಾಜ್ ಅವರು ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಬೆಂಗಳೂರಿನ ಬೆಂಗಳೂರು ಪ್ರೆಸ್ ಕ್ಲಬ್ (Bangalore Press Club) ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಕಾಶ್ ರಾಜ್, ಧರ್ಮಸ್ಥಳದ ಸೌಜನ್ಯ ಪ್ರಕರಣದ ಕುರಿತು ಮಹತ್ವದ ವಿಷಯಗಳನ್ನು ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ. ಜೊತೆಗೆ, “ಮಾರಿಕೊಂಡ ಮಾಧ್ಯಮಗಳು (ಗೋದಿ ಮೀಡಿಯಾ) ವಿಶೇಷ ಆಹ್ವಾನಿತರು” ಎಂದು ವ್ಯಂಗ್ಯವಾಗಿ ಉಲ್ಲೇಖಿಸಿ ಗಮನ ಸೆಳೆದಿದ್ದಾರೆ.

ಧರ್ಮಸ್ಥಳದ ಸೌಜನ್ಯ ಪ್ರಕರಣವು ಹಲವು ವರ್ಷಗಳಿಂದ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ಮರುಪರಿಶೀಲನೆ ಮತ್ತು ನ್ಯಾಯಕ್ಕಾಗಿ ವಿವಿಧ ವಲಯಗಳಿಂದ ಆಗ್ರಹಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಕಾಶ್ ರಾಜ್ ಅವರ ಪತ್ರಿಕಾಗೋಷ್ಠಿ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಯಾವ ವಿಚಾರಗಳನ್ನು ಮುಂದಿರಿಸುತ್ತಾರೆ ಮತ್ತು ಪ್ರಕರಣದ ಕುರಿತು ಯಾವ ನಿಲುವು ವ್ಯಕ್ತಪಡಿಸುತ್ತಾರೆ ಎಂಬುದರ ಬಗ್ಗೆ ಸಾರ್ವಜನಿಕರು ಹಾಗೂ ಮಾಧ್ಯಮಗಳಲ್ಲಿ ನಿರೀಕ್ಷೆ ಹೆಚ್ಚಿದೆ.

Key words: Actor, Prakash Raj, press conference, Dharmasthala, Sowjanya Case

The post ಧರ್ಮಸ್ಥಳದ ‘ಸೌಜನ್ಯ ಪ್ರಕರಣ’ ಕುರಿತು ನಾಳೆ ನಟ ಪ್ರಕಾಶ್ ರಾಜ್ ಪತ್ರಿಕಾಗೋಷ್ಠಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

ಬೆಂಗಳೂರು,ಜೂನ್,20,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನ ಪಕ್ಷ ಬಿಟ್ಟು...

ಕಾಂಗ್ರೆಸ್ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಜಾರಿ ಆಗಲ್ಲ- ಶಾಸಕ ಅಶ್ವಥ್ ನಾರಾಯಣ್

ಬೆಂಗಳೂರು,ಜೂನ್,20,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಜಾರಿ ಆಗಲ್ಲ. ಸುಮ್ಮನೆ...

 4 ವರ್ಷಗಳಿಂದ ಬಗೆಹರಿಯದ ಚರಂಡಿ ಸಮಸ್ಯೆ: ನಿವಾಸಿಗಳಿಂದ ಆಕ್ರೋಶ

ಬೆಂಗಳೂರು,ಜೂನ್,19,2026 (www.justkannada.in): ಬೆಂಗಳೂರು ಪೂರ್ವ ವಲಯದ ಭಟ್ಟರಹಳ್ಳಿ ಸಮೀಪದ ಬನಶಂಕರಿ ಲೇಔಟ್...

ಜೂ.20 ರಂದು ಪಿ.ಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ರಾಜ್ಯದ 41.54 ಲಕ್ಷ ರೈತರಿಗೆ ನೆರವು

ಬೆಂಗಳೂರು, ಜೂನ್,19,2026 (www.justkannada.in): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ...