15
April, 2026

A News 365Times Venture

15
Wednesday
April, 2026

A News 365Times Venture

ಧರ್ಮಸ್ಥಳ ಕೇಸ್:  ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಚಿಂತನೆ –ಡಿಸಿಎಂ ಡಿ.ಕೆ ಶಿವಕುಮಾರ್

Date:

ಬೆಂಗಳೂರು, ಆಗಸ್ಟ್,15,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ  ಕ್ರಮಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಅಲ್ಲಿನ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ, ಆತ್ಮವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ ಎಂಬ ವಿಶ್ವಾಸವಿದೆ. ಈ ಪ್ರಕರಣ ಕುರಿತು ಗೃಹ ಸಚಿವರು ಅಧಿವೇಶನದಲ್ಲಿ ಉತ್ತರ ನೀಡುತ್ತಾರೆ ಎಂದರು.

ಮುಖ್ಯಮಂತ್ರಿಗಳಿಗೂ ಈ ವಿಚಾರದಲ್ಲಿ ಬದ್ಧತೆ ಇದೆ. ಯಾರೂ ಕೂಡ ಸುಳ್ಳು, ಷಡ್ಯಂತ್ರ ಮೂಲಕ ಅಪಮಾನ, ಅಪಪ್ರಚಾರ ನಡೆಸುವಂತಿಲ್ಲ ಎಂದು ಸಿಎಂ ನಮಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ. ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Dharmasthala case, action, DCM, D.K. Shivakumar

The post ಧರ್ಮಸ್ಥಳ ಕೇಸ್:  ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಚಿಂತನೆ –ಡಿಸಿಎಂ ಡಿ.ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿಗೆ ಮನವಿ ಪತ್ರ  ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,15,2026 (www.justkannada.in):  ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆ ನಾಗಮಂಗಲ...

ಬೆಂಗಳೂರಿಗರ ಪಾಲಿಗೆ ಮರೀಚಿಕೆಯಾದ ಎ-ಖಾತೆ: ‘ಕೈ’ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ- ಆರ್ ಅಶೋಕ್

ಬೆಂಗಳೂರು,ಏಪ್ರಿಲ್,14,2026 (www.justkannada.in): ಬೆಂಗಳೂರಿನ ಸುಮಾರು 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ...

ಸಿಎಂ ರಾಜಕೀಯ ಕಾರ್ಯದರ್ಶಿ ರಾಜೀನಾಮೆ:  ವರಿಷ್ಠರೇ ಇದಕ್ಕೆ ಸ್ಪಷ್ಟನೆ ಕೊಡಬೇಕು- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,14,2026 (www.justkannada.in):  ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆಗೊಳಿಸಿದ...

ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ರಾಜ್ಯದ ಸಿಎಂ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,14,2026 (www.justkannada.in):  ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ...