5
March, 2026

A News 365Times Venture

5
Thursday
March, 2026

A News 365Times Venture

ನಟ ಕಮಲ್ ಹಾಸನ್ ಕ್ಷಮೆ ಕೇಳದಿದ್ದರೇ ಅವರನ್ನ ನಿಷೇಧಿಸಬೇಕು-ಸಚಿವ ಶಿವರಾಜ್ ತಂಗಡಗಿ

Date:

ಬೆಂಗಳೂರು,ಮೇ,28,2025 (www.justkannada.in):  ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಎಂದು ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್  ವಿರುದ್ದ ಪಕ್ಷಾತೀತವಾಗಿ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಈ ಕುರಿತು ಮಾತನಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ನಟ ಕಮಲ್ ಹಾಸನ್ ರಾಜ್ಯದ ಜನತೆ ಕ್ಷಮೆ ಕೇಳಬೇಕು. ಇಲ್ಲದಿದ್ದರೇ ಅವರನ್ನ ನಿಷೇಧಿಸಲಿ ಎಂದು ಆಗ್ರಹಿಸಿದರು.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ನಟ ಕಮಲ್ ಹಾಸನ್ ಆ ರೀತಿ  ಹೇಳಿದ್ದು ಬಹಳ ತಪ್ಪು. ನೆಲ,ಜಲ, ಭಾಷೆ ಬಗ್ಗೆ ಮಾತನಾಡೋದು ತಪ್ಪು.  ಕಮಲ್ ಹಾಸನ ಕೂಡಲೇ ಕ್ಷಮೆ ಕೇಳಬೇಕು. ಇಲ್ಲವಾದರೆ  ನಿಷೇಧಿಸಬೇಕು.  ಫಿಲಂ ಚೇಂಬರ್ ಗೆ ಪತ್ರ ಬರೆಯುತ್ತೇನೆ ಎಂದರು.

ಕನ್ನಡ ನೆಲ, ಜಲದ ವಿಷಯ ಯಾರೇ ಮಾತನಾಡಿದರೂ ಸಹಿಸೋಕೆ ಆಗಲ್ಲ. ಕನ್ನಡದ ಬಗ್ಗೆ ಹಗುರವಾಗಿ ಮಾತಾಡೋದು ಬಿಟ್ಟು ಕ್ಷಮೆ ಕೇಳಬೇಕು. ಹೀಗೆ ಮಾತಾಡಿ ಗಾಯಕ ಸೋನು ನಿಗಮ್ ಕ್ಷಮೆ ಕೇಳಿದ್ದಾರೆ. ಅದರಂತೆ ಕಮಲ್ ಹಾಸನ್ ಕ್ಷಮೆ ಕೇಳಬೇಕು. ಅವರು ಕ್ಷಮೆ ಕೇಳದೇ ಹೋದರೇ ಅವರನ್ನ ಬ್ಯಾನ್ ಮಾಡಬೇಕು. ಕಮಲ್ ಹಾಸನ್ ಮಾತನಾಡುವಾಗ ನಟ ಶಿವರಾಜ್ ಕುಮಾರ್ ಅಲ್ಲೇ ಇದ್ದರೂ ಅದನ್ನ ವಿರೋಧ ಮಾಡಲಿಲ್ಲ. ಶಿವರಾಜ್ ಕುಮಾರ್ ಈಗಲಾದರೂ ಖಂಡಿಸಲಿ ಎಂದು ಸಚಿವ ಶಿವರಾಜ್ ತಂಗಡಗಿ ಆಗ್ರಹಿಸಿದರು.vtu

Key words:  actor, Kamal Haasan, apologize, Minister, Shivraj Thangadgi

The post ನಟ ಕಮಲ್ ಹಾಸನ್ ಕ್ಷಮೆ ಕೇಳದಿದ್ದರೇ ಅವರನ್ನ ನಿಷೇಧಿಸಬೇಕು-ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...