16
February, 2026

A News 365Times Venture

16
Monday
February, 2026

A News 365Times Venture

ನಟ ಡಾ. ವಿಷ್ಣುವರ್ಧನ್ ಸಮಾಧಿ ನೆಲಸಮ: ಅಭಿಮಾನಿಗಳಿಂದ ಆಕ್ರೋಶ

Date:

ಬೆಂಗಳೂರು,ಆಗಸ್ಟ್,8,2025 (www.justkannada.in):  ನಗರದ ಕೆಂಗೇರಿ ರಿಂಗ್ ರೋಡ್ ನಲ್ಲಿರುವ ಸಾಹಸ ಸಿಂಹ, ನಟ ಡಾ. ವಿಷ್ಣುವರ್ಧನ್ ಸಮಾಧಿಯನ್ನ ರಾತ್ರೋರಾತ್ರಿ ನೆಲಸಮ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು, ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿ ತೆರವುಗೊಳಿಸಲಾಗಿದ್ದು ಇದೀಗ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿಮಾನ್ ಸ್ಟುಡಿಯೋ ಬಳಿ ಅಭಿಮಾನಿಗಳು ಜಮಾವಣೆಗೊಂಡಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಕೆಂಗೇರಿ ಠಾಣಾ ಪೊಲೀಸರಿಂದ ಬಿಗಿ ಭದ್ರತೆ ವಹಿಸಲಾಗಿದೆ.

ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಾದ ಹಿನ್ನೆಲೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿ ತೆರವುಗೊಳಿಸಲಾಗಿದೆ. ಮೈಸೂರಿನಲ್ಲಿ ಒಟ್ಟು 2.75 ಎಕರೆ ಪ್ರದೇಶದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಾಗಿದೆ.

ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸಿರುವ ನಿರ್ದೇಶಕ ರವಿ ಶ್ರೀವತ್ಸ. ಜಾಗದ ವಿಚಾರವಾಗಿ ವಾಗ್ವಾದ ನಡೆಯುತ್ತಿತ್ತು.  ಬಾಲಣ್ಣ ಕುಟುಂಬ ಹಾಗೂ ವಿಷ್ಣುವರ್ಧನ್ ಅವರ ಫ್ಯಾನ್ಸ್ ನಡುವೆ ವಾಗ್ವಾದ ನಡೆಯುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಪುಣ್ಯಸ್ಮರಣೆಗೂ ಅವಕಾಶ ನೀಡಿರಲಿಲ್ಲ. ಇದೀಗ ರಾತ್ರೋರಾತ್ರಿ ಸಮಾಧಿ ನೆಲಸಮ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Key words: Actor, Dr. Vishnuvardhan, tomb, demolished

The post ನಟ ಡಾ. ವಿಷ್ಣುವರ್ಧನ್ ಸಮಾಧಿ ನೆಲಸಮ: ಅಭಿಮಾನಿಗಳಿಂದ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃತಕ ಬುದ್ದಿಮತ್ತೆ ಅಂದ್ರೆ ರೈತರ ನಿರ್ಧಾರ ಶಕ್ತಿಯನ್ನು ಬಲಪಡಿಸುವ ತಂತ್ರಜ್ಞಾನ – ಡಾ. ಕೆ. ಎಂ. ಹರಿಣಿ ಕುಮಾರ್

ಮೈಸೂರು,ಫೆಬ್ರವರಿ,16,2026 (www.justkannada.in): ಕೃಷಿಯ ಭವಿಷ್ಯವನ್ನು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸುವ ಮೂಲಕ...

ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK

ತುಮಕೂರು,ಫೆಬ್ರವರಿ,16,2026 (www.justkannada.in):  ನಾನು ರಾಜ್ಯದಲ್ಲಿ ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೆ. ಆದರೆ...

ವಸೂಲಿಗಿಳಿದಿರುವ ಯತೀಂದ್ರಗೆ ತರಬೇತಿ ಕೊಡುವ ಮಾಸ್ಟರ್ ನಮ್ಮವನೇ- ಶಾಸಕ ಯತ್ನಾಳ್

ವಿಜಯಪುರ,ಫೆಬ್ರವರಿ,16,2026 (www.justkannada.in):  ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ವಸೂಲಿಗಿಳಿದಿದ್ದು ಯತೀಂದ್ರಗೆ ತರಬೇತಿ...

ರಾಜ್ಯಕ್ಕೆ ಪ್ರತ್ಯೇಕ ಎಂಎಸ್‌ ಎಂಇ ನೀತಿ ಮತ್ತು ಸಣ್ಣ, ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಿ- FKCCI ಅಧ್ಯಕ್ಷೆ ಉಮಾ ರೆಡ್ಡಿ

ಬೆಂಗಳೂರು,ಫೆಬ್ರವರಿ,16,2026 (www.justkannada.in): ರಾಜ್ಯಕ್ಕೆ ಪ್ರತ್ಯೇಕ ಎಂಎಸ್‌ ಎಂಇ ನೀತಿ ಮತ್ತು ವಿಶೇಷ...