ಹಾವೇರಿ,ಆಗಸ್ಟ್,3,2026 (www.justkannada.in): ನನಗೆ ಸಚಿವ ಸ್ಥಾನ ನೀಡಿದಕ್ಕೆ ಸಂತೋಷವಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಶಾಸಕ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.
ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ತಮಗೆ ಸಚಿವ ಸ್ಥಾನ ಸಿಕ್ಕಿರುವ ಕುರಿತು ಮಾತನಾಡಿದ ಶಾಸಕ ರುದ್ರಪ್ಪ ಲಮಾಣಿ, ಇದೀಗ ಸಿಎಂ ಕಚೇರಿಯಿಂದ ನನಗೆ ಕರೆ ಬಂದಿದೆ. ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ನೀಡಲಾಗಿದೆ. ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಂತೋಷ ಆಗಿದೆ ಎಂದರು.
ಡಿಕೆ ಶಿವಕುಮಾರ್ ಸಂಪುಟ ಸೇರುತ್ತಿರುವುದಕ್ಕೆ ಖುಷಿ ಆಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ದಿ ಕೆಲಸ ಮಾಡುತ್ತೇನೆ ಎಂದು ರುದ್ರಪ್ಪ ಲಮಾಣಿ ತಿಳಿಸಿದರು.
Key words: happy, ministerial position, development work, Rudrappa Lamani
The post ನನಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಸಂತೋಷ: ಅಭಿವೃದ್ದಿ ಕೆಲಸ ಮಾಡ್ತೇನೆ- ರುದ್ರಪ್ಪ ಲಮಾಣಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




