ಬೆಂಗಳೂರು, ಮೇ, 13,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಜನತೆಗೆ ಸಿಹಿಸುದ್ದಿ ನೀಡಿದ್ದು ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ ಮಾಡುವುದಾಗಿ ಘೋಷಿಸಿದ್ದಾರೆ. ಇದು 6ನೇ ಗ್ಯಾರಂಟಿ ಎಂದು ಡಿಕೆಶಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್,ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ 16-05-2026 ರಂದು ನಡೆಯುವ ನನ್ನ ಖಾತಾ ನನ್ನ ಹಕ್ಕು ಅಭಿಯಾನ ಘೋಷಿಸಿದ್ದೇವೆ, ಓಸಿ ಇಲ್ಲದೇ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಸಿಗದೇ ಪರದಾಡುತ್ತಾ ಇದ್ದವರಿಗೆ ಅನುಕೂಲವಾಗಲಿದೆ. ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅವಕಾಶ ಕೊಡುತ್ತೇವೆ.
ಒಟ್ಟು 7 ಲಕ್ಷ ಬಿ ಖಾತೆಗಳಿದ್ದು, ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ ಮಾಡುತ್ತೇವೆ. ನಗರದಲ್ಲಿ ಕೆಲವರು ಪ್ಲ್ಯಾನ್ ಇಲ್ಲದೆ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅಂತಹವರ ಅನುಕೂಲಕಕ್ಕಾಗಿ ಈ ಅಭಿಯಾನ ಹಮ್ಮಿಕೊಂಡಿದ್ದೇವೆ. ಶಾಲೆ ಆವರಣದಲ್ಲಿ ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದ 10 ಕಡೆ ಅಭಿಯಾನ ನಡೆಯಲಿದ್ದು, ಮೇ 16ರ ಬಳಿಕ ಪ್ರತಿ ಶನಿವಾರ ಜಾಗ ನಿಗದಿ ಮಾಡಲಾಗುತ್ತದೆ. ಅಧಿಕಾರಿಗಳು ರಜೆ ಇದ್ದರೂ ಕೂಡ ಕೆಲಸ ಮಾಡಬೇಕು. ನಗರದ ನಾಗರಿಕರು ಬಂದು ದಾಖಲೆಗಳನ್ನು ಸರಿ ಮಾಡಿಕೊಳ್ಳಬೇಕು ಎಂದರು.
ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಗೈಡೆನ್ಸ್ ವ್ಯಾಲ್ಯೂ ಇಳಿಕೆ ಮಾಡುತ್ತೇವೆ. ಶೇ 5ರಂದ ಶೇ 2ಕ್ಕೆ ಗೈಡೆನ್ಸ್ ವ್ಯಾಲ್ಯು ಇಳಿಕೆ ಮಾಡಲಾಗುತ್ತದೆ. 100 ದಿನಗಳಲ್ಲಿ ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳದಿದ್ದರೇ ಶೇ 5 ರಷ್ಟು ಗೈಡೆನ್ಸ್ ವ್ಯಾಲ್ಯೂ ಇರುತ್ತೆ 7 ಲಕ್ಷ ಬಿ.ಖಾತೆದಾರರಿಗೆ ಇದು ಅನುಕೂಲವಾಗಲಿದೆ ಎಂದು ಡಿಕೆ ಶಿವ ಕುಮಾರ್ ಹೇಳಿದರು.
Key words: My Account My Rights, Campaign, DCM, DK Shivakumar, 6th guarantee
The post ನನ್ನ ಖಾತಾ ನನ್ನ ಹಕ್ಕು ಅಭಿಯಾನ: 6ನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




