16
April, 2026

A News 365Times Venture

16
Thursday
April, 2026

A News 365Times Venture

ನಮ್ಮದು ಕುಟುಂಬ ರಾಜಕಾರಣ ಅಲ್ಲ- ಹೆಚ್.ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

Date:

ಮೈಸೂರು,ಏಪ್ರಿಲ್ ,15,2026 (www.justkannada.in): ತಮ್ಮ ವಿರುದ್ದ ಕುಟುಂಬ ರಾಜಕಾರಣ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಾನು ಎಂಎಲ್ ಸಿ ಆಗಿರುವುದು ಕುಟುಂಬ ರಾಜಕಾರಣಕ್ಕಾಗಿ ಅಲ್ಲ. ತಂದೆಯ ರಾಜಕೀಯ ಜೀವನ ಮುಂದುವರಿಕೆ ಭಾಗವಾಗಿ ಎಂಎಲ್ ಸಿ ಆದೆ. ನಮ್ಮ ಕ್ಷೇತ್ರದ ಜನರ ರಕ್ಣಣೆಗೆ  ಎಂಎಲ್ ಸಿ ಆಗಿದ್ದೇನೆ.  ನಮ್ಮದು ಕುಟುಂಬ ರಾಜಕಾರಣ  ಅಲ್ಲ. ನಮ್ಮ ತಂದೆ ಏನು ನನ್ನನ್ನು ಪಕ್ಷದ ಅಧ್ಯಕ್ಷ ಮಾಡಿದ್ದಾರಾ?  ಮಕ್ಕಳನ್ನೇ ಪಕ್ಷದ ಅಧ್ಯಕ್ಷ ಮಾಡುವುದು, ಮಕ್ಕಳನ್ನೇ ಶಾಸಕ, ಸಂಸದ ಮಾಡುವುದು ಕುಟುಂಬ ರಾಜಕಾರಣ. ಆದರೆ ನಮ್ಮದು ಕುಟುಂಬ ರಾಜಕಾರಣ  ಅಲ್ಲ.  ನಮ್ಮ ಅಣ್ಣ ಇರದ ಕಾರಣ ನಾನು ರಾಜಕೀಯಕ್ಕೆ ಬಂದೆ ಎಂದರು.

ನಮ್ಮ ತಂದೆಯೇ 5 ವರ್ಷ ಸಿಎಂ ಎಂದು ಪುನರುಚ್ಚರಿಸಿದ ಯತೀಂದ್ರ ಸಿದ್ದರಾಮಯ್ಯ,  ಖುದ್ದು ಸಿಎಂ ಅಧಿವೇಶನದಲ್ಲಿ ಈ ವಿಚಾರವನ್ನ ಸ್ಪಷ್ಟಪಡಿಸಿದ್ದಾರೆ.  ಸಿಎಂ ಖುದ್ದಾಗಿ ಹೇಳಿದ ಮೇಲೆ ಮತ್ತೆ ಚರ್ಚೆ ಇಲ್ಲ. ಸಚಿವ ಸಂಪುಟ ಪುನಾರಚನೆಗಾಗಿ ಶಾಸಕರು ದೆಹಲಿಗೆ ಹೋಗಿದ್ದಾರೆ. ಶಾಸಕರ ದೆಹಲಿ ಪ್ರವಾಸಕ್ಕೂ ಸಿಎಂ ಸ್ಥಾನಕ್ಕೂ ಸಂಬಂಧವಿಲ್ಲ ಸರ್ಕಾರವೂ ಭದ್ರ ಸಿಎಂ ಸ್ಥಾನವೂ ಭದ್ರ ಎಂದು ನುಡಿದರು.

Key words:   not, family politics, Yathindra Siddaramaiah, HDK

The post ನಮ್ಮದು ಕುಟುಂಬ ರಾಜಕಾರಣ ಅಲ್ಲ- ಹೆಚ್.ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆ: ವಿದ್ಯಾರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಾಗಾರ.

  ಮೈಸೂರು, ಏ.೧೫,೨೦೨೬: ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ...

ಮುಂದಿನ ಟಾರ್ಗೆಟ್ ನಾನೇ ಎಂದು ಪ್ರಚಾರ: ಸಿದ್ದರಾಮಯ್ಯ, ಡಿಕೆಶಿ ಜೊತೆ ಚರ್ಚೆ ಮಾಡ್ತೇನೆ- ಸಚಿವ ಜಮೀರ್

ಬೆಂಗಳೂರು,ಏಪ್ರಿಲ್,15,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ...

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್,15,2026 (www.justkannada.in): ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ...