ಬೆಂಗಳೂರು,ಜೂನ್,13,2026 (www.justkannada.in): ಎಸ್ ಟಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ ನೀಡಬೇಕು. ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನಗಳನ್ನು ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಈ ಹಿಂದೆ ಎಸ್ಟಿ ಸಮುದಾಯದ ಮೂವರು ಸಚಿವರಿದ್ದರು.ಈಗ ನಮ್ಮ ಸಮುದಾಯಕ್ಕೆ ಮತ್ತೆರಡು ಖಾತೆಗಳನ್ನ ನೀಡಬೇಕು. ಇದೇನೂ ನಮ್ಮ ಹೆಚ್ಚುವರಿ ಬೇಡಿಕೆಯಲ್ಲ, ಹಳೆಯ ಪ್ರಾತಿನಿಧ್ಯದ ಮುಂದುವರಿಕೆಯಷ್ಟೇ ಎಂದರು.
ಸಿಎಲ್ ಪಿ ಸಭೆ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳೀ, ಈ ಸಭೆಯನ್ನು ಕೇವಲ ಶಾಸಕರಿಗೆ ತರಬೇತಿ ನೀಡಲು ಕರೆಯಲಾಗಿದೆ. ಮತದಾನ ಮಾಡುವಾಗ ಶಾಸಕರಿಂದ ಯಾವುದೇ ತಪ್ಪುಗಳಾಗಬಾರದು. ಅದಕ್ಕಾಗಿ ಸರಿಯಾಗಿ ಅಭ್ಯಾಸ ಮಾಡಬೇಕಾಗುತ್ತದೆ. ಎರಡು-ಮೂರು ಮತಗಳು ತಪ್ಪಾದರೂ ಅಭ್ಯರ್ಥಿ ಔಟ್ ಆಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಸುರಕ್ಷತೆ ಮತ್ತು ಸ್ಟ್ರಾಟಜಿ ರೂಪಿಸಲು ಶಾಸಕರನ್ನು ಕರೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದರು.
Key words: our community, two,ministerial posts, Minister, Satish Jarkiholi
The post ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




