12
March, 2026

A News 365Times Venture

12
Thursday
March, 2026

A News 365Times Venture

ನಾಯಕತ್ವ ಬದಲಾವಣೆ ವಿಚಾರ: ಹೈಕಮಾಡ್ ನಿರ್ಧಾರಕ್ಕೆ ನಾನು ಡಿಕೆಶಿ ಬದ್ಧ- ಸಿಎಂ ಸಿದ್ದರಾಮಯ್ಯ

Date:

ನವದೆಹಲಿ,ಜುಲೈ,10,2025 (www.justkannada.in): ಅಧಿಕಾರ ಹಂಚಿಕೆ ಬಗ್ಗೆ ಯಾವ ಚರ್ಚೆ ಆಗಿಲ್ಲ.  ಏನೇ ತೀರ್ಮಾನ ಮಾಡಿದ್ರೂ ಒಪ್ಪಬೇಕೆಂದು ಹೈಕಮಾಂಡ್ ಹೇಳಿದೆ. ಹೈಕಮಾಡ್ ನಿರ್ಧಾರಕ್ಕೆ ನಾನು  ಡಿಸಿಎಂ ಡಿಕೆ ಶಿವಕುಮಾರ್ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  2.5 ವರ್ಷ ಆಗಿರುವುದರಿಂದ ಸ್ವಾಭಾವಿಕವಾಗಿ ಕುರ್ಚಿ ಬಗ್ಗೆ ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇದೆಯಾ..? ಸುಖಾ ಸುಮ್ಮನೆ ಊಹಾಪೋಹಗಳು ಹರಿದಾಡುತ್ತಿವೆ ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹೈಕಮಾಂಡ್ ಏನೇ ನಿರ್ಧಾರ ಕೈಗೊಂಡರೂ ನಾವು ಬದ್ದ ಎಂದಿದ್ದೇವೆ. ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಒಂದಿಬ್ಬರು ಶಾಸಕರು ಹೇಳುತ್ತಿದ್ದಾರೆ  ನನಗೂ ಸಿದ್ದರಾಮಯ್ಯ ಮುಂದುವರೆಯಲಿ ಎಂದು ಶಾಸಕರು ಹೇಳುತ್ತಿದ್ದಾರೆ. ಇದು ಪಕ್ಷದ ನಿರ್ಧಾರ ಅಲ್ಲ ವೈಯಕ್ತಿಕ.  ಕೆಲ ಡಿಕೆಶಿ ಬೆಂಬಲಿಗರು ಅಭಿಮಾನದಿಂದ ಸಿಎಂ ಆಗಲಿ ಎಂದು ಹೇಳುತ್ತಾರೆ ಎಂದರು.

ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ನಾಯಕತ್ವ ವಿಚಾರವಾಗಿ ಮಾಡುತ್ತಿರುವ ಸಭೆ ಅಲ್ಲ ಎಂದು ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಈಗಾಗಲೇ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.  ಏನೇ ತೀರ್ಮಾನ ಮಾಡಿದ್ರೂ ಒಪ್ಪಬೇಕೆಂದು ಹೈಕಮಾಂಡ್ ಹೇಳಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಡಿಕೆಶಿ ಬದ್ದ ಎಂದರು.vtu

Key words: Leadership, change, high command, decision, CM,  Siddaramaiah

 

The post ನಾಯಕತ್ವ ಬದಲಾವಣೆ ವಿಚಾರ: ಹೈಕಮಾಡ್ ನಿರ್ಧಾರಕ್ಕೆ ನಾನು ಡಿಕೆಶಿ ಬದ್ಧ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...