3
March, 2026

A News 365Times Venture

3
Tuesday
March, 2026

A News 365Times Venture

ನಾಲ್ಕೈದು ವರ್ಷ ಬದುಕಿರುತ್ತೇನೆ: ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು

Date:

ಬೆಂಗಳೂರು, ಫೆಬ್ರವರಿ 15,2025 (www.justkannada.in): ನಾನು ನಾಲ್ಕೈದು ವರ್ಷ ಬದುಕಿರುತ್ತೇನೆ. ಅಲ್ಲಿವರೆಗೂ ನೀರಾವರಿಗಾಗಿ ನಾನು ಹೋರಾಟ ಮಾಡುತ್ತೇನೆ.  ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು,  ಮಹದಾಯಿ ನದಿ ನೀರಿಗಾಗಿ ನಾವೆಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕಿದೆ. ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​​ ಸೇರಿ ಎಲ್ಲರೂ ಹೋರಾಟ ಮಾಡಬೇಕು. ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಲು ಶಕ್ತಿಮೀರಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.

ಮಹದಾಯಿ ಯೋಜನೆ ವಿವಾದ ನ್ಯಾಯಾಲಯದಲ್ಲಿದೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡಲು ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಅದಕ್ಕೆ ನಮ್ಮ ಸರ್ಕಾರ ಪ್ರತಿಭಟನೆ ಮಾಡಿ ಅರ್ಜಿ ಹಾಕಿದೆ. ವಿವಾದ ಕೋರ್ಟ್​ನಲ್ಲಿರುವಾಗ ಪ್ರಧಾನಿ ಮೋದಿ ಏನು ಮಾಡುತ್ತಾರೆ. ಹಾಗಾಗಿ ನಮ್ಮವರು ಕೋರ್ಟ್​ನಲ್ಲಿ ಪ್ರಬಲ ವಾದ ಮಾಡಬೇಕು. ನಾವೆಲ್ಲ ಪಕ್ಷಭೇದ ಮರೆತು ಹೋರಾಟ ಮಾಡಬೇಕು ಎಂದು  ಹೆಚ್ ಡಿಡಿ ಹೇಳಿದರು.

ಕರ್ನಾಟಕಕ್ಕೆ25 ಟಿಎಂಸಿ ನೀರು ಕೊಡಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದೇನೆ. ಮಹದಾಯಿ ಯೋಜನೆಗೆ ಗೋವಾ ಮತ್ತು ಪರಿಸರದ ಸಮಸ್ಯೆ ಇದೆ. ಅದಕ್ಕೆ ಕೊಡಲು ಆಗಲ್ಲ ಅಂತ ಹೇಳಿದ್ದಾರೆ. ಕುಡಿಯುವ ನೀರಿಗಾಗಿ ನಮ್ಮ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಹೋರಾಟ ಮಾಡುತ್ತಿದೆ. ಎತ್ತಿನಹೊಳೆ ಯೋಜನೆಗೆ ₹8 ಸಾವಿರ ಕೋಟಿ ಮಂಜೂರು ಮಾಡಿದರೂ. ಈಗ 25 ಸಾವಿರ ಕೋಟಿ ನೀಡಿದ್ದಾರೆ, ಅದು ಎಲ್ಲಿವರೆಗೆ ಬಂದಿದೆ ಗೊತ್ತಿಲ್ಲ ಎಂದು ಹೆಚ್ ಡಿ ದೇವೇಗೌಡ ತಿಳಿಸಿದರು.

Key words: fight, Irrigation, until, last breath, H.D. Deve Gowda

The post ನಾಲ್ಕೈದು ವರ್ಷ ಬದುಕಿರುತ್ತೇನೆ: ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ...

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...

ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK

ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ...