27
August, 2026

A News 365Times Venture

27
Thursday
August, 2026

A News 365Times Venture

ನಿಮ್ಮಿಂದ ಫ್ರೀ ವಿದ್ಯುತ್ ಯಾರು ಕೇಳಿದ್ರು..? ಹೈಕೋರ್ಟ್ ಗರಂ: ಸ್ಮಾರ್ಟ್ ಮೀಟರ್​ ಶುಲ್ಕಕ್ಕೆ ತಡೆ

Date:

ಬೆಂಗಳೂರು, ಏಪ್ರಿಲ್, 25,2025 (www.justkannada.in) : ಬೆಸ್ಕಾಂನ ಸ್ಮಾರ್ಟ್​ ಮೀಟರ್​​ ಅಳವಡಿಕೆ, ಭಾರಿ ಮೊತ್ತದ ಹೆಚ್ಚುವರಿ ದರ ನಿಗದಿ ಮಾಡಿರುವುದಕ್ಕೆ ಗರಂ ಆದ ಹೈಕೋರ್ಟ್ ಸ್ಮಾರ್ಟ್ ಮೀಟರ್ ಶುಲ್ಕಕ್ಕೆ ತಡೆ ನೀಡಿದೆ.

ವಿದ್ಯುತ್‌ ಬಳಕೆ ಸಂಬಂಧ ರಿಯಲ್ ಟೈಂನಲ್ಲಿ ವಿದ್ಯುತ್ ಬಳಕೆ ಬಗ್ಗೆ ನಿಖರ ಮಾಹಿತಿ ಒದಗಿಸುವ ಸ್ಮಾರ್ಟ್‌ ಮೀಟರ್‌ ಗಳಿಗೆ ಬೆಸ್ಕಾಂ ಭಾರಿ ಮೊತ್ತದ ಹೆಚ್ಚುವರಿ ದರ ನಿಗದಿ ಮಾಡಿರುವುದನ್ನ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ  ವಿಚಾರಣೆ ನಡೆಸಿದ ಹೈಕೋರ್ಟ್‌  ನ್ಯಾಯಮೂರ್ತಿ ಎಂ.‌ನಾಗಪ್ರಸನ್ನ ಅವರಿದ್ದ  ಪೀಠ ಸ್ಮಾರ್ಟ್​ ಮೀಟರ್​​ ಶುಲ್ಕಕ್ಕೆ ತಡೆ ನೀಡಿದೆ.

2000 ರೂಪಾಯಿ ಇದ್ದ ಮೀಟರ್‌ ಗೆ ಈಗ 8910 ರೂ. ಕೊಡಬೇಕಿದೆ ಎಂದು ಬೆಸ್ಕಾಂ ಕ್ರಮ ಪ್ರಶ್ನಿಸಿ ಜಯಲಕ್ಷ್ಮೀ ಎನ್ನುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.   ಈ ಅರ್ಜಿಯನ್ನ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.‌ನಾಗಪ್ರಸನ್ನ ಅವರಿದ್ದ ಪೀಠವು, ಬಡವರಿಂದ ಇಷ್ಟು ಹಣ ಕಿತ್ತುಕೊಂಡರೆ  ಅವರು ಎಲ್ಲಿಗೆ ಹೋಗಬೇಕು. ಎಲ್ಲರೂ ಸ್ಮಾರ್ಟ್ ಮೀಟರ್ ಹಾಕಬೇಕೆಂದರೆ ಬಡವರೇನು ಮಾಡಬೇಕು. ನಿಮ್ಮಿಂದ ಯಾರು ಫ್ರೀ ವಿದ್ಯುತ್ ಕೇಳಿದ್ದರು?  ಎಂದು ತರಾಟೆಗೆ ತೆಗೆದುಕೊಂಡಿತು.  ನಂತರ ಬೆಸ್ಕಾಂನ ಪ್ರೀಪೇಯ್ಡ್ ಮೀಟರ್ ಶುಲ್ಕ‌ಕ್ಕೆ ಮಧ್ಯಂತರ ತಡೆ ಆದೇಶ ಹೊರಡಿಸಿದೆ.

ಈ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ,  ಬೇರೆ ರಾಜ್ಯಗಳಲ್ಲಿ 900 ರೂಪಾಯಿಗೆ ಪ್ರೀಪೇಯ್ಡ್ ಮೀಟರ್ ನೀಡಲಾಗುತ್ತಿದೆ. ಕೆಇಆರ್‌ಸಿ ಸ್ಮಾರ್ಟ್ ಮೀಟರ್ ಕಡ್ಡಾಯವಲ್ಲವೆಂದಿತ್ತು. ಆದರೆ ಬೆಸ್ಕಾಂ ಸುತ್ತೋಲೆ ಸ್ಮಾರ್ಟ್ ಮೀಟರ್ ಕಡ್ಡಾಯ ಎಂದಿದೆ ಎಂದು ವಾದಿಸಿದರು.

Ket words: free electricity, High Court, Stay, smart meter, charges

The post ನಿಮ್ಮಿಂದ ಫ್ರೀ ವಿದ್ಯುತ್ ಯಾರು ಕೇಳಿದ್ರು..? ಹೈಕೋರ್ಟ್ ಗರಂ: ಸ್ಮಾರ್ಟ್ ಮೀಟರ್​ ಶುಲ್ಕಕ್ಕೆ ತಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ಅರಿತುಕೊಂಡಿಲ್ಲ-BJP ವಿರುದ್ದ ಸಚಿವ ಲಕ್ಷ್ಮಣ್ ಸವದಿ ಕಿಡಿ

ಬೆಂಗಳೂರು,ಆಗಸ್ಟ್,25,2026 (www.justkannada.in): ಈ ಬಾರಿ ಅಧಿವೇಶನದಿಂದ ಯಾವ ಅನುಕೂಲ ಆಗಿಲ್ಲ ಎಂಬ...

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...