10
June, 2026

A News 365Times Venture

10
Wednesday
June, 2026

A News 365Times Venture

ನೂರು ದಿನಗಳಲ್ಲಿ ಕೆಐಎಡಿಬಿ ಸಂಪೂರ್ಣ ಡಿಜಿಟಲೀಕರಣ: ಸಚಿವ ಎಂ.ಬಿ ಪಾಟೀಲ್ ಕಟ್ಟುನಿಟ್ಟಿನ ಗಡುವು

Date:

ಬೆಂಗಳೂರು,ಜೂನ್,10,2026 (www.justkannada.in):  ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯ (ಕೆಐಎಡಿಬಿ) ಮೂಲಕ ನಡೆಯುವ ಭೂಸ್ವಾಧೀನ ಮತ್ತು ನಿವೇಶನ ಮಂಜೂರಾತಿಯವರೆಗಿನ ಪ್ರತಿಯೊಂದು ಪ್ರಕ್ರಿಯೆಯೂ ಇನ್ನು ಮುಂದೆ ಡಿಜಿಟಲ್ ರೂಪದಲ್ಲಿ ನಡೆಯಲಿದೆ. ಇದರಿಂದ ರೈತರು ಮತ್ತು ಉದ್ಯಮಿಗಳು ಸೇರಿದಂತೆ ಎಲ್ಲರಿಗೂ ಅನುಕೂಲವಾಗಲಿದೆ. ಈ ಸಂಬಂಧದ ಕೆಲಸಗಳನ್ನು ಮುಂದಿನ ನೂರು ದಿನಗಳಲ್ಲಿ ಮುಗಿಸಬೇಕು ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಅವರು ಖನಿಜ ಭವನದಲ್ಲಿ ಬುಧವಾರ ತಮ್ಮ ಇಲಾಖೆಯ ಎರಡನೇ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಅವರು ನೂರು ದಿನಗಳಲ್ಲಿ ಮಾಡಬೇಕಾದ ಕೆಲಸಗಳೇನೇನು ಎಂದು ಸ್ಪಷ್ಟಪಡಿಸಿದರು.

ಸಭೆಯ ಬಗ್ಗೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್ ಅವರು, ಸರಕಾರದ ಇ-ಗವರ್ನೆನ್ಸ್ ಇಲಾಖೆಯು ಏಕೀಕೃತ ಭೂ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ. ಇದರ ಅಡಿಯಲ್ಲೇ ಈಗ ರಾಜ್ಯದ ಹಳೆಯ ಮತ್ತು ಹೊಸ ಕೈಗಾರಿಕಾ ಪ್ರದೇಶಗಳಲ್ಲಿನ ನಿವೇಶನಗಳ ಪ್ರತಿಯೊಂದು ವಿವರವನ್ನೂ ಡಿಜಿಟಲೀಕರಣ ಮಾಡಲಾಗುವುದು. ಇದರಲ್ಲಿ ಪ್ರತೀ ನಿವೇಶನಕ್ಕೆ ಸಂಬಂಧಿಸಿದಂತೆಯೂ ಒಟ್ಟು 77 ಕಾಲಂಗಳಲ್ಲಿ ಮಾಹಿತಿ ಇರಲಿದೆ ಎಂದಿದ್ದಾರೆ.

ಕೈಗಾರಿಕಾ ನಿವೇಶನದ ಮಂಜೂರಾತಿ, ಅದರ ಸ್ಥಿತಿಗತಿ, ಅಲ್ಲಿರುವ ಕೈಗಾರಿಕೆ, ಮಾಡಿರುವ ಹೂಡಿಕೆ, ಆಗಿರುವ ಉದ್ಯೋಗಸೃಷ್ಟಿ, ಸಂತ್ರಸ್ತ ರೈತರಿಗೆ ಕೊಟ್ಟಿರುವ ಪರಿಹಾರ, ಕೋರ್ಟ್ ಕೇಸಿನ ವಿವರಗಳು, ಹೂಡಿಕೆದಾರರಿಗೆ ಕೊಟ್ಟಿರುವ ಕಾಲಾವಕಾಶ ಮುಂತಾದ ವಿವರಗಳು ಡಿಜಿಟಲೀಕರಣದಿಂದ ಕ್ಷಣಾರ್ಧದಲ್ಲಿ ಸಿಗಲಿವೆ. ಬಹಳ ಹಿಂದಿನ ದಾಖಲೆಗಳನ್ನು ಕಾಪಾಡುವ ಕಷ್ಟವೂ ಇದರಿಂದ ತಪ್ಪಲಿದ್ದು, ಪ್ರತಿಯೊಂದು ಮಾಹಿತಿಯೂ ಶಾಶ್ವತವಾಗಿ ಉಳಿಯಲಿದೆ ಎಂದು ಅವರು ವಿವರಿಸಿದ್ದಾರೆ.

ಹಿಂದೆ ಎಷ್ಟೋ ಪ್ರಕರಣಗಳಲ್ಲಿ ದಾಖಲೆಗಳು ಸರಿಯಾಗಿಲ್ಲದೆ ಒಂದೊಂದೇ ಜಮೀನಿಗೆ ಎರಡೆರಡು ಬಾರಿ ಪರಿಹಾರ ಕೊಟ್ಟಿರುವ ಪ್ರಕರಣಗಳು ಕೂಡ ಸಂಭವಿಸಿವೆ. ಹೊಸ ವ್ಯವಸ್ಥೆಯಿಂದ ಸಂಪೂರ್ಣ ಪಾರದರ್ಶಕತೆ ಬರಲಿದ್ದು, ಹೂಡಿಕೆದಾರರು ತಾವು ಇರುವಲ್ಲಿಂದಲೇ ತಮಗೆ ಬೇಕಾದ ಮಾಹಿತಿ ಪಡೆದುಕೊಳ್ಳಬಹುದು. ಇಲ್ಲಿ ಮಧ್ಯವರ್ತಿಗಳ ಕಾಟ ಇರುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಅವರು ನುಡಿದಿದ್ದಾರೆ.

ರಾಜ್ಯದಲ್ಲಿ ಈಗ 224 ಕೈಗಾರಿಕಾ ಪ್ರದೇಶಗಳಿವೆ. ಇಲ್ಲಿರುವ ಸಾವಿರಾರು ನಿವೇಶನಗಳ ಸ್ಥಿತಿಗತಿ ಎಲ್ಲವೂ ಸದ್ಯದಲ್ಲೇ ಸ್ಕ್ಯಾನ್ ಆಗಿ, ಸುರಕ್ಷಿತವಾಗಲಿದೆ. ಕೈಗಾರಿಕಾ ಇಲಾಖೆಯಲ್ಲಿ ಜನಸ್ನೇಹಿ ಸುಧಾರಣೆಗಳನ್ನು ತರಬೇಕು ಎನ್ನುವ ಉದ್ದೇಶದಿಂದ ಡಿಜಿಟಲೀಕರಣವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ.

ಹಳೇ ಕೈಗಾರಿಕಾ ಪ್ರದೇಶಗಳಲ್ಲಿನ ನಿವೇಶನಗಳ ಹಂಚಿಕೆ ಮಾಹಿತಿಯನ್ನು ಸ್ಕ್ಯಾನ್ ಮಾಡುವ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಮಾಡಬೇಕು. ಬಳಿಕ ಆ ದತ್ತಾಂಶವನ್ನು ಇ- ಆಡಳಿತ ಇಲಾಖೆ ಜತೆ ಹಂಚಿಕೊಂಡು ಕೆಐಎಡಿಬಿಗೆ ಬೇಕಾಗುವ ಹಾಗೆ ಸಾಪ್ಟ್ ವೇರ್ ಅಭಿವೃದ್ಧಿಪಡಿಸಲಾಗುವುದು. ಬಳಿಕ ಅದನ್ಜು ಗ್ರಾಮೀಣಾಭಿವೃದ್ಧಿ ಇಲಾಖೆ ಇ- ಸ್ವತ್ತು ತಂತ್ರಾಂಶದ ಜತೆ ಜೋಡಣೆ ಮಾಡಲಾಗುತ್ತದೆ. ಆ ಮೂಲಕ ಇ- ಖಾತಾ ಕೊಡುವುದು ಸೇರಿದಂತೆ ಇತರ ಪ್ರಕ್ರಿಯೆಗಳಿಗೂ ಅನುಕೂಲ ಆಗಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಖುಷ್ಬೂ ಗೋಯಲ್, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಮುಂತಾದವರು ಇದ್ದರು.

Key words: KIADB, digitized, 100 days, Minister, M.B. Patil

The post ನೂರು ದಿನಗಳಲ್ಲಿ ಕೆಐಎಡಿಬಿ ಸಂಪೂರ್ಣ ಡಿಜಿಟಲೀಕರಣ: ಸಚಿವ ಎಂ.ಬಿ ಪಾಟೀಲ್ ಕಟ್ಟುನಿಟ್ಟಿನ ಗಡುವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿರಿಯ ಪತ್ರಿಕಾ ಛಾಯಾಗ್ರಾಹಕ ಪ್ರಗತಿ ಗೋಪಾಲ ಕೃಷ್ಣರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ

ಮೈಸೂರು,ಜೂನ್,10,2026 (www.justkannada.in): ಕಳೆದ 45 ವರ್ಷಗಳಿಂದ ಪತ್ರಿಕಾ ಛಾಯಾಗ್ರಾಹಕರಾಗಿ ನಿರಂತರ ಸೇವೆ...

ಮೈಸೂರು:  ಫ್ಯಾಕ್ಟರಿಯಲ್ಲೇ ಡೆತ್ ನೊಟ್ ಬರೆದಿಟ್ಟು ಕಾರ್ಮಿಕ ಆತ್ಮಹತ್ಯೆಗೆ ಶರಣು

ಮೈಸೂರು,ಜೂನ್ 10,2026 (www.justkannada.in): ಕಾರ್ಮಿಕರೊಬ್ಬರು ಡೆತ್ ನೋಟ್ ಬರೆದಿಟ್ಟು ಕಾರ್ಕಾನೆಯಲ್ಲೇ ಆತ್ಮಹತ್ಯೆಗೆ...

ಮೆರಿಟಸ್ ಕಪ್ ರೇಸಿಂಗ್: ಆರವ್‌ ಗೆ ಚಾಂಪಿಯನ್ ಪಟ್ಟ, ಬೆಂಗಳೂರಿನ ಜಿದಾನ್ ಅನೀಸ್‌ ರನ್ನರ್-ಅಪ್

ಕೊಯಮತ್ತೂರು, ಜೂನ್, 10,2026 (www.justkannada.in):  ಹತ್ತು ವರ್ಷದ ಆರವ್ ಸುರೇಕಾ (ರಾಯೋ...

ರಾಜ್ಯ ಸರ್ಕಾರದ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ BJP

ಬೆಂಗಳೂರು,ಜೂನ್,10,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯ ಬಿಜೆಪಿ ನಾಯಕರು...