29
August, 2026

A News 365Times Venture

29
Saturday
August, 2026

A News 365Times Venture

ಪತ್ರಕರ್ತರು ಒತ್ತಡ ಮುಕ್ತ ಬದುಕು ನಡೆಸಿ: ಆರೋಗ್ಯ ಸ್ಥಿರತೆ ಕಾಪಾಡಿಕೊಳ್ಳಿ- ಡಾ.ಸದಾನಂದ್ ಕಿವಿಮಾತು

Date:

ಮೈಸೂರು,ಜೂನ್,20,2025 (www.justkannada.in): ಪತ್ರಕರ್ತರು ಒತ್ತಡದ ಬದುಕಿಗೆ ಸಿಲುಕಿ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಪತ್ರಕರ್ತರು ಒತ್ತಡ ಮುಕ್ತ ಬದುಕು ನಡೆಸಿ ಎಂದು ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥ ಡಾ.ಸದಾನಂದ್ ಕಿವಿಮಾತು ಹೇಳಿದರು.

ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗದಲ್ಲಿ ಇಂದು ಆಯೋಜಿಸಿದ್ದ ಪತ್ರಕರ್ತರ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಡಾ.ಸದಾನಂದ್, ಇತ್ತೀಚೆಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಪತ್ರಕರ್ತರು ಒತ್ತಡದಿಂದ ಹೃದಯ ಸಮಸ್ಯೆಗೊಳಗಾಗುತ್ತಿದ್ದಾರೆ. ಹೀಗಾಗಿ  ಮದ್ಯಪಾನ, ಧೂಮಪಾನ ತ್ಯಜಿಸಬೇಕು ಸಕ್ಕರೆ, ಉಪ್ಪಿನ ಅಂಶ ಕಡಿಮೆ ಮಾಡಬೇಕು. ಮಾನಸಿಕ ಒತ್ತಡದಿಂದ ದೂರ ಉಳಿಯಬೇಕು. ನಿತ್ಯವೂ ವಾಕಿಂಗ್, ಜಾಗಿಂಗ್ ಮಾಡುವ ಮೂಲಕ ಆರೋಗ್ಯ ಸ್ಥಿರತೆ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಈ ವೇಳೆ ಡಾ. ಪಶುಪತಿ, ಡಾ. ಶಶಿಕಾಂತ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ಉಪಾಧ್ಯಕ್ಷ ರವಿಪಾಂಡವಪುರ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.vtu

Key words: health, check-up, camp, journalists, Mysore, Jayadeva Cardiology Institute

The post ಪತ್ರಕರ್ತರು ಒತ್ತಡ ಮುಕ್ತ ಬದುಕು ನಡೆಸಿ: ಆರೋಗ್ಯ ಸ್ಥಿರತೆ ಕಾಪಾಡಿಕೊಳ್ಳಿ- ಡಾ.ಸದಾನಂದ್ ಕಿವಿಮಾತು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ದಂಪತಿಗೆ ಆತಿಥ್ಯ: ಉಪಹಾರ ಕೂಟದಲ್ಲಿ ಭಾಗಿ

ಮೈಸೂರು,ಆಗಸ್ಟ್,29,2026 (www.justkannada.in): ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಅವರ ಪತ್ನಿ ಮೈಸೂರಿನ ಜೆ.ಪಿ.ನಗರದಲ್ಲಿರುವ...

ರಂಗಭೂಮಿ ಕಲಾವಿದೆ ಇಂದಿರಾ ನಾಯರ್ ಇನ್ನಿಲ್ಲ

ಮೈಸೂರು,ಆಗಸ್ಟ್,28,2026 (www.justkannada.in): ರಂಗಭೂಮಿಯ ಹಿರಿಯ ಕಲಾವಿದೆ ಮೈಸೂರಿನ ಇಂದಿರಾ ನಾಯರ್ ಇಂದು...

ನಾಲ್ಕು ವರ್ಷ ಸೇವೆ, ವರ್ಗಾವಣೆ: ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಬೀಳ್ಕೊಡುಗೆ

ಬೆಂಗಳೂರು,ಆಗಸ್ಟ್,28,2026 (www.justkannada.in):  ರಾಜ್ಯದಲ್ಲಿ ನಾಲ್ಕು ವರ್ಷಗಳ‌ ಕಾಲ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್...

ಮಾನವ–ಆನೆ ಸಂಘರ್ಷ, ಕಸ್ತೂರಿ ರಂಗನ್ ವರದಿ ಅನುಷ್ಠಾನ: ಸಮಗ್ರ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್

ಬೆಂಗಳೂರು/ಮೈಸೂರು, ಆಗಸ್ಟ್, 28, 2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ...