11
March, 2026

A News 365Times Venture

11
Wednesday
March, 2026

A News 365Times Venture

ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ದೇಶದಿಂದ ಪಲಾಯನ..?

Date:

ನವ ದೆಹಲಿ, ಏ.೨೮,೨೦೨೫: ಪಹಲ್ಗಾಮ್ ಭಯೋತ್ಪಾದಕ ದಾಳಿಯ 48 ಗಂಟೆಗಳ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಮತ್ತು ಅವರ ಕುಟುಂಬ ದೇಶದಿಂದ ಪಲಾಯನ ಮಾಡಿದೆ ಎಂಬ ಗಾಳಿಸುದ್ಧಿ ಹರಡಿವೆ.

ಸೇನಾ ಮುಖ್ಯಸ್ಥ ಮುನೀರ್, ಡಿಜಿ ಐಎಸ್ಪಿಆರ್ ಲೆಫ್ಟಿನೆಂಟ್ ಜನರಲ್ ಅಸಿಮ್ ಮಲಿಕ್ ಮತ್ತು ಸಿಜೆಸಿಎಸ್ಸಿ ಜನರಲ್ ಸಾಹಿರ್ ಶಂಶಾದ್ ಮಿರ್ಜಾ ಪಾಕಿಸ್ತಾನವನ್ನು ತೊರೆದು ಯುನೈಟೆಡ್ ಕಿಂಗ್ಡಮ್ ಮತ್ತು ಯುಎಸ್ನ ನ್ಯೂಜೆರ್ಸಿಗೆ ಸ್ಥಳಾಂತರಗೊಂಡಿದ್ದಾರೆ ಎಂದು ನಂಬಲಾಗಿದೆ. ಕುಟುಂಬಗಳು ತಮ್ಮ ಗಮ್ಯಸ್ಥಾನವನ್ನು ತಲುಪಲು ಖಾಸಗಿ ಜೆಟ್ ಗಳನ್ನು ಬಳಸಿವೆ ಎಂದು ಹೇಳಲಾಗುತ್ತದೆ.

ಪಹಲ್ಗಾಮ್ನ ಬೈಸರನ್ ಹುಲ್ಲುಗಾವಲುಗಳಲ್ಲಿ ಕನಿಷ್ಠ 26 ಜನರನ್ನು ಬಲಿತೆಗೆದುಕೊಂಡ ಭೀಕರ ದಾಳಿಯ ನಂತರ ಭಾರತವು ದೇಶದಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನಿ ಪ್ರಜೆಗಳ ಮೇಲೆ ಕಠಿಣ ನಿಯಮಗಳನ್ನು ವಿಧಿಸಿದ ನಂತರ ಈ ಊಹಾಪೋಹಗ ಹರಡಿದೆ.

ಆರಂಭದಲ್ಲಿ, ಲಷ್ಕರ್-ಎ-ತೈಬಾ (ಎಲ್ಇಟಿ) ಶಾಖೆ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಜವಾಬ್ದಾರಿಯನ್ನು ವಹಿಸಿಕೊಂಡಿದ್ದವು, ಆದರೆ ಕೆಲ ದಿನಗಳ ಬಳಿಕ ಈ ಉಗ್ರಗಾಮಿ ಸಂಘಟನೆ ಪ್ರವಾಸಿ ಹತ್ಯೆಯ ಹಿಂದೆ ನಮ್ಮ ಕೈವಾಡವಿಲ್ಲ. ನಾವು ‘ಹ್ಯಾಕಿಂಗ್’ ನ ಬಲಿಪಶುಗಳು ಎಂದು ಹೇಳಿಕೆ ನೀಡಿದ್ದವು.

ಮಂಗಳವಾರ (ಏಪ್ರಿಲ್ 22) ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಸುದ್ದಿ ಸಂಸ್ಥೆ ಸ್ಕೈ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ, ‘ಲಷ್ಕರ್-ಎ-ತೈಬಾ ತಮ್ಮ ನೆಲದಲ್ಲಿ ಅಸ್ತಿತ್ವದಲ್ಲಿಲ್ಲ’ ಮತ್ತು ಅವರ ಹೇಳಿಕೆ ದೃಢೀಕರಿಸಲು, ‘ಅದು ನಿರ್ನಾಮವಾಗಿದೆ’ ಎಂದಿದ್ದರು.

key words:  Army Chief General, Asim Munir, flees from Pakistan

SUMMARY:

Army Chief General Asim Munir flees from Pakistan…? 48 hours after the Pahalgam terror attack, rumours are rife that Pakistan Army chief General Asim Munir and his family have fled the country.

The post ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ದೇಶದಿಂದ ಪಲಾಯನ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...