ಯಾದಗಿರಿ,ಜುಲೈ,10,2025 (www.justkannada.in): ಪುತ್ರ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿದು ತಂದೆಯೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆ ವಡಗೇರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೆಹಬೂಬ್ ಆತ್ಮಹತ್ಯೆಗೆ ಶರಣಾದ ಯುವಕ. ಮೆಹಬೂಬ್ ಜಾತಿನಿಂದನೆ ಕೇಸ್ ಗೆ ಹೆದರಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ವಿಚಾರ ತಿಳಿದ ಮೆಹಬೂಬ್ ತಂದೆಗೆ ಹೃದಯಾಘಾತವಾಗಿದ್ದು ತಂದೆಯೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಒಂದೇ ದಿನ ಒಂದೇ ಮನೆಯಲ್ಲಿ ಎರಡು ಸಾವಾಗಿದ್ದು ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.
Key words: Son, commits suicide, Father, dies, heart attack
The post ಪುತ್ರ ಆತ್ಮಹತ್ಯೆಗೆ ಶರಣು: ವಿಚಾರ ತಿಳಿದು ತಂದೆ ಹೃದಯಾಘಾತದಿಂದ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.