21
February, 2026

A News 365Times Venture

21
Saturday
February, 2026

A News 365Times Venture

ಪೊಲೀಸರಿದ್ದರೂ ಕಲ್ಲು ತೂರಾಟ: ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ?- ಬಿವೈ ವಿಜಯೇಂದ್ರ ಕಿಡಿ

Date:

ಬೆಂಗಳೂರು,ಫೆಬ್ರವರಿ,20,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು, ಚಪ್ಪಲಿ ತೂರಾಟದ ಪುಂಡಾಟಿಕೆ  ನಡೆದಿರುವುದು ಅತ್ಯಂತ ಖಂಡನೀಯ ಹಾಗೂ ಹೇಯ ಕೃತ್ಯ. ಈ ಓಲೈಕೆ ದುರಾಡಳಿತದ, ತುಘಲಕ್  ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ. ಪೊಲೀಸರ ಉಪಸ್ಥಿತಿಯಲ್ಲಿಯೇ ಕಲ್ಲು ತೂರಾಟ ನಡೆದರೆ, ಇನ್ನು ರಾಜ್ಯದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

ಈ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಿಂದೂಗಳ ಹಬ್ಬ ಮತ್ತು ಮೆರವಣಿಗೆಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಇಂತಹ ನಿರಂತರ ದಾಳಿಗಳು ವ್ಯವಸ್ಥಿತ ಪಿತೂರಿಯಂತೆ ಕಾಣುತ್ತಿದೆ. ರಾಜ್ಯ ಸರ್ಕಾರ ತಮ್ಮ ಪರ ನಿಲ್ಲಲಿದೆ ಎನ್ನುವ ಧೈರ್ಯವಿಲ್ಲದೆ ಇಂತಹ ಪುಂಡಾಟಿಕೆ ನಡೆಯುವುದು ಸಾಧ್ಯವಿಲ್ಲ. ಈಗಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತನ್ನ ಓಲೈಕೆ ರಾಜಕೀಯವನ್ನು ಬಿಟ್ಟು, ರಾಷ್ಟ್ರದ ಅಸ್ಮಿತೆಯಾಗಿರುವ ಶಿವಾಜಿ ಮಹಾರಾಜರ ಗೌರವಕ್ಕೆ ಧಕ್ಕೆ ತಂದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಮುಖ್ಯಮಂತ್ರಿಗಳೇ, ಹಿಂದೂ ಸಮಾಜದ ತಾಳ್ಮೆಯನ್ನು ಪರೀಕ್ಷಿಸಬೇಡಿ. ನಮ್ಮ ಆರಾಧ್ಯ ಪುರುಷರ, ನಾಡಿನ ಅಸ್ಮಿತೆಯ ವಿಷಯದಲ್ಲಿ ಸುಮ್ಮನಿರುವ ಪ್ರಶ್ನೆಯೇ ಇಲ್ಲ! ಎಂದು ಬಿವೈ ವಿಜಯೇಂದ್ರ ಎಚ್ಚರಿಸಿದ್ದಾರೆ.

Key words: Stone pelting, despite police, safety, common people, BY Vijayendra

The post ಪೊಲೀಸರಿದ್ದರೂ ಕಲ್ಲು ತೂರಾಟ: ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ?- ಬಿವೈ ವಿಜಯೇಂದ್ರ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ...

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...

ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು, ಫೆಬ್ರವರಿ ,21,2026 (www.justkannada.in):  ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ...

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು,...